ಉಳ್ಳವರು ಬಿ.ಪಿ.ಎಲ್. ಪಡಿತರ ಚೀಟಿ ಹಿಂದಿರುಗಿಸಬೇಕು ಎಂದು ಸಚಿವ ಕೆ. ಗೋಪಾಲಯ್ಯ ಹೇಳಿದ್ದಾರೆ. ಕಲಬುರ್ಗಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ ಆರಂಭದ ಮುನ್ನ 63 ಸಾವಿರ ಅಕ್ರಮ ಪಡಿತರ ಚೀಟಿ ರದ್ದುಗೊಳಿಸಿದಲ್ಲದೆ, 93 ಲಕ್ಷ ರೂ. ದಂಡ ವಿಧಿಸಲಾಗಿದೆ. ಕೊರೋನಾ ಸಾಂಕ್ರಾಮಿಕ ಸೋಂಕಿನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸೂಚನೆಯಂತೆ ಕಳೆದ 3 ತಿಂಗಳಿನಲ್ಲಿ ಯಾವುದೆ ಕಾರ್ಡ್ ರದ್ದತಿಗೆ ಕ್ರಮ ಕೈಗೊಂಡಿಲ್ಲ. ಉಳ್ಳವರು ಬಿ.ಪಿ.ಎಲ್. ಪಡಿತರ ಚೀಟಿ ಹೊಂದಿದಲ್ಲಿ ಸ್ವಯಂಪ್ರೇರಿತರಾಗಿ […]