ದೇಶಪಾಂಡೆ ಪ್ರತಿಷ್ಠಾನವು ಸ್ಥಳೀಯ ಸಣ್ಣ ಉದ್ದಿಮೆದಾರರಿಗಾಗಿ “ಮೆಗಾ ಉದ್ಯಮಿ ಸಂತೆ’ಯನ್ನು ಆಯೋಜಿಸಲಾಗಿದೆ. ಎಂದು ದೇಶಪಾಂಡೆ ಫೌಂಡೇಷನ್ ಪ್ರೊಜೆಕ್ಟ್ ಮ್ಯಾನೇಜರ್ ವೀರಯ್ಯ ಹಿರೇಮಠ ಹೇಳಿದರು. ಇಂದು ಬೆಳಗಾವಿ ನಗರದ ಖಾಸಗಿ ಹೊಟೇಲ್ ನಲ್ಲಿ ಮಾತನಾಡಿದ ಅವರು ದೇಶಪಾಂಡೆ ಪ್ರತಿಷ್ಠಾನದ, ಸಣ್ಣ ಉದ್ಯಮಿದಾರರ ಅಭಿವೃದ್ಧಿ ಕಾರ್ಯಕ್ರಮವು ಇದೇ ಅಕ್ಟೋಬರ್ 29 ರಂದು ಬೆಳಗಾವಿಯಲ್ಲಿ ತಿಲಕವಾಡಿಯಲ್ಲಿರುವ ಭಾಗ್ಯನಗರದ ರಾಮನಾಥ ಮಂಗಲ ಕಾರ್ಯಾಲಯದಲ್ಲಿ ಆಯೋಜಿಸಲಾಗಿದೆ. ದೇಶದ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಸ್ಥಳೀಯ ಸಣ್ಣ ಉದ್ಯಮಿದಾರರಿಗಾಗಿ “ಮೆಗಾ ಉದ್ಯಮಿ […]
Kannada
ಜಾಗತಿಕ ಮಟ್ಟದಲ್ಲಿ ಲಸಿಕೆಗಳ ತುರ್ತು ಬಳಕೆಗೆ ಕೋವ್ಯಾಕ್ಸಿನ್ ನ್ನು ಸೇರಿಸುವುದಕ್ಕಾಗಿ ಡಬ್ಲ್ಯುಹೆಚ್ಒ ಭಾರತ್ ಬಯೋಟೆಕ್ ನಿಂದ ಮತ್ತಷ್ಟು ಸ್ಪಷ್ಟನೆಗಳನ್ನು ಕೇಳಿದೆ. ತುರ್ತು ಬಳಕೆಗೆ ಅನುಮೋದನೆ ನೀಡುವುದಕ್ಕೂ ಮುನ್ನ ಅಂತಿಮ ಹಂತದ ಅಪಾಯ-ಪ್ರಯೋಜನ ಮೌಲ್ಯಮಾಪನವನ್ನು ನಡೆಸುವುದಕ್ಕೆ ಈ ಹೆಚ್ಚುವರಿ ಸ್ಪಷ್ಟನೆಗಳನ್ನು ಡಬ್ಲ್ಯುಹೆಚ್ಒ ನ ತಾಂತ್ರಿಕ ಸಲಹಾ ತಂಡ ಕೇಳಿದೆ. ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ : https://play.google.com/store/apps/details?id=com.speed.newskannada
ಗೋವಿಂದಾಯ ನಮಃ, ಗೂಗ್ಲಿ, ರಣ ವಿಕ್ರಮ, ಜೆಸ್ಸಿ, ನಟರಾಜ ಸರ್ವೀಸ್ ಮತ್ತು ನಟ ಸಾರ್ವಭೌಮ ಸಿನಿಮ ಗಳನ್ನು ನಿರ್ದೇಶಿಸಿರುವ ಪವನ್ ಒಡೆಯರ್ ಡೊಳ್ಳು ಸಿನಿಮಾದ ಮೂಲಕ ನಿರ್ಮಾಪಕರಾಗಿರೋದು ಗೊತ್ತೇ ಇದೆ. ಇದೀಗ ಈ ಸಿನಿಮಾಗೆ ಪ್ರಶಸ್ತಿಗಳ ಮಹಾಪೂರವೇ ಹರಿದು ಬರುತ್ತಿದೆ. ಪವನ್ ಮತ್ತು ಪತ್ನಿ ಅಪೇಕ್ಷಾ ಪುರೋಹಿತ್ ಸೇರಿ ನಿರ್ಮಿಸಿರುವ ಈ ಸಿನಿಮಾ ಸಾಕಷ್ಟು ಜನಮೆಚ್ಚುಗೆ ಕೂಡ ಪಡೆದುಕೊಂಡಿದೆ. ಪವನ್ ಮತ್ತು ಅಪೇಕ್ಷಾ ನಿರ್ಮಾಣದ ಡೊಳ್ಳು ಸಿನಿಮಾ ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುತ್ತಿದೆ. […]
ಸುಡಾನ್ನಲ್ಲಿ ಸೇನಾ ಮುಖ್ಯಸ್ಥ ಜನರಲ್ ಅಬ್ದುಲ್ ಫತಾಹ್ ಬರ್ಹಾನ್ ನೇತೃತ್ವದಲ್ಲಿ ಸೋಮವಾರ ನಡೆದ ಕ್ಷಿಪ್ರಕ್ರಾಂತಿಯನ್ನು ವಿರೋಧಿಸಿ ರಾಜಧಾನಿ ಖರ್ಟೂಮ್ನಲ್ಲಿ ಸತತ 2ನೇ ದಿನವೂ ಪ್ರತಿಭಟನೆ ನಡೆದಿದೆ. ಸರಕಾರವನ್ನು ವಿಸರ್ಜಿಸಿ ದೇಶದಾದ್ಯಂತ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ ಎಂದು ಜನರಲ್ ಬರ್ಹಾನ್ ಘೋಷಿಸಿದ ಕೆಲವೇ ಗಂಟೆಗಳ ಬಳಿಕ ಪ್ರಜಾಪ್ರಭುತ್ವ ವ್ಯವಸ್ಥೆಯ ಸಾವಿರಾರು ಬೆಂಬಲಿಗರು ರಸ್ತೆಗಿಳಿದು ಪ್ರತಿಭಟನೆ ಆರಂಭಿಸಿದ್ದರು. ಪ್ರತಿಭಟನೆಯನ್ನು ಹತ್ತಿಕ್ಕಲು ಭದ್ರತಾ ಪಡೆಗಳು ಹಿಂಸಾತ್ಮಕ ಕ್ರಮ ಕೈಗೊಂಡಿದ್ದು ಸೋಮವಾರ 7 ಮಂದಿ ಮೃತಪಟ್ಟಿದ್ದಾರೆ […]
2019 ನೇ ಸಾಲಿನ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಘೋಷಣೆಯಾಗಿ ಬಹಳ ದಿನಗಳು ಕಳೆದಿತ್ತು. ವಿಭಿನ್ನ ಕಥಾಹಂದರದ “ಅಕ್ಷಿ” , ಅತ್ಯುತ್ತಮ ಪ್ರಾದೇಶಿಕ ಚಿತ್ರ ಪ್ರಶಸ್ತಿ ಪಡೆದುಕೊಂಡಿತ್ತು. ಇತ್ತೀಚೆಗೆ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಿರ್ದೇಶಕ ಮನೋಜ್ ಕುಮಾರ್ ಹಾಗೂ ನಿರ್ಮಾಪಕ, ಸಂಗೀತ ನಿರ್ದೇಶಕ ಕಲಾದೇಗುಲ ಶ್ರೀನಿವಾಸ್ ಪ್ರಶಸ್ತಿ ಸ್ವೀಕರಿಸಿದರು.ತಮ್ಮ ಚಿತ್ರಕ್ಕೆ ರಾಷ್ಟ್ರೀಯ ಮನ್ನಣೆ ದೊರೆತಿರುವುದಕ್ಕೆ ಇಡೀ ತಂಡದಲ್ಲಿ ಸಂತಸ ಮನೆ ಮಾಡಿದೆ. ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ […]
ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ಇಂದು ಕರ್ನಾಟಕ ಬಂದ್ಗೆ ಕನ್ನಡಪರ ಸಂಘಟನೆಗಳ ಒಕ್ಕೂಟ ಕರೆ ನೀಡಿದೆ.ಕರ್ನಾಟಕ ಬಂದ್ ಹಿನ್ನೆಲೆ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಕರ್ನಾಟಕ ರಕ್ಷಣಾ ವೇದಿಕೆ, ರೈತಪರ ಸಂಘಟನೆಗಳು ಹಾಗೂ ಹಲವು ಕನ್ನಡ ಸಂಘಟನೆಗಳ ಬಂದ್ ನಿರ್ಧಾರಕ್ಕೆ ಅನೇಕ ಸಂಘಟನೆಗಳು ನೈತಿಕ ಬೆಂಬಲ ಸೂಚಿಸಿವೆ. ನಗರದ ಬಿಬಿಎಂಪಿ ಕಚೇರಿ ಬಳಿ ಬ್ಯಾರಿಗೇಟ್ ಹಾಕಿ ಸಂಪೂರ್ಣ ಬಂದ್ ಮಾಡಿದ್ದಾರೆ. ಇನ್ನೂ ಕೆಆರ್ ಪುರ, ಟಿನ್ ಫ್ಯಾಕ್ಟರಿ ಬಳಿ ಪೊಲೀಸರ […]