ಆಮದು ಪ್ರಮಾಣ ಕಡಿಮೆ ಮಾಡಿ ದೇಶದಲ್ಲಿಯೇ ಉತ್ಪಾದನೆ ಹೆಚ್ಚಿಸುವ ಉದ್ದೇಶದಿಂದ ಕಲ್ಲಿದ್ದಲು ಗಣಿಗಾರಿಕೆಯನ್ನು ವಾಣಿಜ್ಯೀಕರಣ ಮಾಡಲಾಗುತ್ತಿದೆ ಎಂದು ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ‘ಸದ್ಯಕ್ಕೆ ೩೦ ದಿನಗಳಿಗಾಗುವಷ್ಟು ಬೇಕಾಗುವ ಕಲ್ಲಿದ್ದಲು ನಮ್ಮಲ್ಲಿ ಸಂಗ್ರಹವಿದೆ. ೨೦೨೩ ಅಥವಾ ೨೦೨೪ರ ವೇಳೆಗೆ ಭಾರತಕ್ಕೆ ಬೇಕಾಗುವ ೧,೦೦೦ರಿಂದ ೧,೧೦೦ ಮಿಲಿಯನ್ ಟನ್ ಕಲ್ಲಿದ್ದಲನ್ನು ನಮ್ಮಲ್ಲಿಯೇ ಉತ್ಪಾದಿಸುವಂತೆ ಕೋಲ್ ಇಂಡಿಯಾ ಕಂಪನಿಗೆ ಸೂಚಿಸಲಾಗಿದೆ. ಈ ಕಂಪನಿ ವರ್ಷದ ಇಲ್ಲಿಯ ತನಕ ೬೦೬ […]