ಕತ್ತಲಾದ ಮೇಲೆ ಕಳ್ಳರಂತೆ ನುಸುಳಿ ವಾಹನಗಳಿಗೆ ಕಲ್ಲು ಹೊಡೆಯುವುದು ಹೇಡಿತನ. ಮಹಾನ್ ರಾಷ್ಟ್ರಪ್ರೇಮಿ, ಕೆಚ್ಚದೆಯ ವೀರರಾದ ರಾಯಣ್ಣ ಅವರ ಪ್ರತಿಮೆಗೆ ಹಾನಿ ಮಾಡಿದ್ದು ನಿಜವಾದ ವಿಕೃತ. ಮಹಾರಾಷ್ಟ್ರ ಮುಖ್ಯಮಂತ್ರಿಗಳು ಇದನ್ನೆಲ್ಲ ಸಮರ್ಥನೆ ಮಾಡಿಕೊಳ್ಳುತ್ತಿರುವುದು ವಿಪರ್ಯಾಸ ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಮಹಾ ಸಿಎಂ ವಿರುದ್ಧ ಕಿಡಿಕಾರಿದ್ದಾರೆ.ಈ ಕುರಿತಂತೆ ಸರಣಿ ಟ್ವಿಟ್ ಮಾಡಿರುವಂತ ಅವರು, ಬೆಳಗಾವಿಯಲ್ಲಿ ಬೇರೆಯವರು ಬೇಳೆ ಬೇಯಿಸಿಕೊಳ್ಳುವುದು ಬೇಡ. ನಮ್ಮ ಹೆಮ್ಮೆಯ ಕಲಿ ಸಂಗೊಳ್ಳಿ […]
#Karnataka
ರಾಜ್ಯದಲ್ಲಿ ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ವಿರೂಪಗೊಳಿಸಿದಂತ ಎಂಇಎಸ್ ವಿರುದ್ಧ ಕನ್ನಡಪರ ಸಂಘಟನೆಗಳು ಸಿಡಿದೆದ್ದಿವೆ. ಬೆಂಗಳೂರಿನಿಂದ ಬೆಳಗಾವಿ ಚಲೋಗೆ ಚಾಲನೆ ನೀಡಲಾಗಿದ್ದು, ನಾಳೆ ಬೆಳಿಗ್ಗೆ ಸುವರ್ಣ ಸೌಧಕ್ಕೆ ಎಂಇಎಸ್ ಸಂಘಟನೆ ನಿಷೇಧಿಸುವಂತೆ ಮುತ್ತಿಗೆ ಕೂಡ ಹಾಕಲಿದ್ದಾವೆ.ಇಂದು ನಗರದಲ್ಲಿನ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ, ಕನ್ನಡಪರ ಸಂಘಟನೆಯ ಪ್ರವೀಣ್ ಶೆಟ್ಟಿ, ಕನ್ನಡ ಚಳುವಳಿ ಪಕ್ಷದ ವಾಟಾಳ್ ನಾಗಾರಾಜ್ ಸೇರಿದಂತೆ ಅನೇಕರು ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟವನ್ನು ಖಂಡಿಸಿದರು. ಅಲ್ಲದೇ ಎಂಇಎಸ್ […]
ಚಾಮರಾಜನಗರದ ಪಚ್ಚಪ್ಪ ಸರ್ಕಲ್ ಬಳಿ ಗಡಿ ನಾಡು ಕನ್ನಡ ರಕ್ಷಣೆ ವೇದಿಕೆ ವತಿಯಿಂದ ಪ್ರತಿಭಟನೆ ಮಾಡಲಾಯಿತು..ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಕನ್ನಡಧ್ವಜ ಸುಟ್ಟ, ಬೆಳಗಾವಿಯಲ್ಲಿ ಕಲ್ಲು ತೂರಾಟ, ಮಹಾರಾಷ್ಟ್ರದಲ್ಲಿ ಕನ್ನಡಿಗರು, ಅವರ ವಾಹನಗಳ ಮೇಲೆ ಶಿವಸೇನೆ ಹಾಗೂ ಎಂಇಎಸ್ ಕಾರ್ಯಕರ್ತರು ದಾಳಿ ನಡೆಸಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಿದರು.ಶಿವಸೇನೆ ಹಾಗೂ ಎಂಇಎಸ್ ಸಂಘಟನೆ ನಿಷೇಧಿಸಬೇಕು, ಕನ್ನಡ ಧ್ವಜ ಸುಟ್ಟವರು, ಕನ್ನಡಿಗರ ಮೇಲೆ ದಾಳಿ ನಡೆಸಿದವರನ್ನು ಶಿಕ್ಷಿಸಬೇಕು ಎಂದು ಆಗ್ರಹಿಸಿದರು…ಕೆಲ ಕಾಲ ರಸ್ತೆ ತಡೆ ನಡೆಸಿ, […]
ಮಹಾರಾಷ್ಟ್ರದಲ್ಲಿ ಕೆಲ ಕಿಡಗೇಡಿಗಳು ಕನ್ನಡ ಬಾವುಟಕ್ಕೆ ಬೆಂಕಿ ಇಟ್ಟಿರುವುದಕ್ಕೆ ಕನ್ನಡ ಚಿತ್ರರಂಗದ ಅನೇಕ ಕಲಾವಿದರು ತೀವ್ರ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ.ಈ ಬಗ್ಗೆ ನಟಿ ಹರಿಪ್ರಿಯಾ ಕೂಡ ಅಸಮಾಧಾನ ವ್ಯಕ್ತಪಡಿಸಿದ್ದು, ‘ಕನ್ನಡ ಬಾವುಟಕ್ಕೆ ಬೆಂಕಿ ಇಟ್ಟವರಿಗೆ ಸೂಕ್ತ ಶಿಕ್ಷೆಯಾಗಬೇಕು’ ಎಂದು ಆಗ್ರಹಿಸಿದ್ದಾರೆ.ಈ ಕುರಿತು ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿರುವ ಅವರು, ‘ದ್ವೇಷದ ಬೆಂಕಿ ಆರಲಿ.. ಕನ್ನಡದ ಬಾವುಟ ಹಾರಲಿ. ಕನ್ನಡ ಬಾವುಟಕ್ಕೆ ಬೆಂಕಿ ಇಟ್ಟವರಿಗೆ ಸೂಕ್ತ ಶಿಕ್ಷೆಯಾಗಬೇಕು’ ಎಂದು ಒತ್ತಾಯಿಸಿ, ರಾರಾಜಿಸುತ್ತಿರುವ ಕನ್ನಡ ಭಾವುಟದ […]
ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಇನ್ನಷ್ಟು ಬಿಗಿಗೊಳಿಸಲಾಗುವುದು ಎಂದು ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಇನ್ನಷ್ಟು ಬಿಗಿಗೊಳಿಸಲಾಗುವುದು.ಗೋಹತ್ಯೆ ನಿಷೇಧ ಜಾರಿಯಾದ ನಂತರ ಸಾವಿರಾರು ಗೋವುಗಳನ್ನು ರಕ್ಷಣೆ ಮಾಡಲಾಗಿದೆ. ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಗೋಮಾಳ ಜಾಗದಲ್ಲಿ ಗೋಶಾಲೆಗಳನ್ನು ತೆರೆಯಲು ಸೂಚನೆ ನೀಡಲಾಗಿದೆ ಎಂದರು.ಬೆಳಗಾವಿಯಲ್ಲಿ ಎಂ.ಇ.ಎಸ್ ಪುಂಡಾಟ ಹೆಚ್ಚಾಗುತ್ತಿದೆ.ಎಂಇಎಸ್ ಆಟಕ್ಕೆ ಸರ್ಕಾರ ಬ್ರೇಕ್ ಹಾಕಲಿದೆ. ಈಗಾಗಲೇ ಎಂಇಇಎಸ್ ಬ್ಯಾನ್ ಮಾಡುವ ವಿಚಾರ ಚರ್ಚೆ […]
ಬೆಳಗಾವಿಯಲ್ಲಿ ಪುಂಡಾಟಿಕೆ ಮೆರೆದ ಶಿವಸೇನೆ ಮತ್ತು ಎಂಇಎಸ್ನ್ನು ನಿಷೇಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಲು ಮುಂದಾದ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಸೇರಿದಂತೆ 15ಕ್ಕೂ ಹೆಚ್ಚು ಕನ್ನಡಪರ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಮಹದೇವ್ ತಳವಾರ್ ನೇತೃತ್ವದಲ್ಲಿ ರಾಯಣ್ಣ ವೃತ್ತದ ಸಮೀಪ ಪ್ರತಿಭಟನೆ ನಡೆಸಿ, ಮಹಾರಾಷ್ಟ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಸಿಎಂ ಉದ್ದವ್ ಠಾಕ್ರೆ ಅವರ ಪ್ರತಿಕೃತಿ ದಹಿಸಿ ರಾಜ್ಯ ಹೆದ್ದಾರಿ ತಡೆಯುವ ಪ್ರಯತ್ನ ನಡೆಸಲಾಗಿದೆ.ಪೊಲೀಸರು ಪ್ರತಿಭಟನಾಕಾರರ […]
ಹುಬ್ಬಳ್ಳಿ: ಬೇರೆ ಬೇರೆ ವಿಷಯ ತಂದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳು ಮಾಡುವುದನ್ನ ಸಹಿಸೋದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಿಡಿಗೇಡಿಗಳಿಗೆ ಖಡಕ್ ಎಚ್ಚರಿಕೆ ರವಾನಿಸಿದ್ದಾರೆ. ನಗರದ ತಮ್ಮ ನಿವಾಸದ ಬಳಿ ಮಾತನಾಡಿದ ಅವರು, ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆ ಹಿನ್ನೆಲೆಯಲ್ಲಿ ಎಲ್ಲರಿಗೂ ಮನವಿ ಮಾಡುತ್ತೇನೆ. ದೇಶ ಭಕ್ತರಿಗೆ ಎಲ್ಲರೂ ಗೌರವ ಕೊಡಬೇಕು. ಅದಕ್ಕಾಗಿಯೇ ಸಂಗೊಳ್ಳಿ ರಾಯಣ್ಣ, ಕಿತ್ತೂರು ಚೆನ್ನಮ್ಮ, ಶಿವಾಜಿ ಮಹಾರಾಜರ ಮೂರ್ತಿ ಸ್ಥಾಪನೆ ಮಾಡಿದ್ದೇವೆ ಎಂದರು.ಆದ್ರೆ, ಬೇರೆ […]
ರಾಜ್ಯದ ಪೊಲೀಸ್ ವಾಹನಕ್ಕೆ ಮಹಾರಾಷ್ಟ್ರ ಪೊಲೀಸರು ಭದ್ರತೆ ನೀಡಿ, ಗಡಿ ದಾಟಿಸಿದ್ದಾರೆ.ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಈ ಘಟನೆ ನಡೆದಿದೆ. ವಿಧಾನಮಂಡಲ ಚಳಿಗಾಲದ ಅಧಿವೇಶನ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಪೊಲೀಸರು, ಕೊಲ್ಹಾಪುರದ ಮಹಾಲಕ್ಷ್ಮಿ ದೇವಸ್ಥಾನಕ್ಕೆ ತೆರಳಿದ್ದರು.ಅವರಿದ್ದ ವಾಹನಕ್ಕೆ ಅಲ್ಲಿನ ಪೊಲೀಸರು ಭದ್ರತೆ ನೀಡಿದ್ದಾರೆ.ಬೆಂಗಳೂರರಿನಲ್ಲಿ ಶಿವಾಜಿ ಪ್ರತಿಮೆಗೆ ಮಸಿ ಬಳಿದ್ದನ್ನು ಖಂಡಿಸಿ ಶಿವಸೇನಾ ಕಾರ್ಯಕರ್ತರು, ಕರ್ನಾಟಕದ ವಾಹನಗಳ ಮೇಲೆ ದಾಳಿ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಪೊಲೀಸರ ವಾಹನಕ್ಕೆ ಭದ್ರತೆ ನೀಡಲಾಗಿದೆ ಎಂದು ತಿಳಿದುಬಂದಿದೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ […]
ಪಟ್ಟಣ ಪಂಚಾಯತಿ ಕಛೇರಿಯಲ್ಲಿ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ಸಮೀಕ್ಷೆ ಶಿಬಿರಕ್ಕೆ ಚಾಲನೆ ನೀಡಲಾಯಿತು.ಈ ವೇಳೆ ಮಾತನಾಡಿದ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ಸಮೀಕ್ಷೆಯ ಜಿಲ್ಲಾ ಸಂಚಾಲಕ ಚೆನ್ನರಾಯಪ್ಪ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ಕೆಲಸ ಮಾಡುತ್ತಿದ್ದರೇ, ಅಂತಹ ವ್ಯಕ್ತಿಗಳು ಸ್ವಯಂ ಪ್ರೇರಣೆಯಿಂದ ಬಂದು ಅರ್ಜಿ ಸಲ್ಲಿಸಿ ಎಂದು ತಿಳಿಸಿದರು.ಬಳಿಕ ತಾಲೂಕು ಸಂಚಾಲಕಿ ಅಮರಾವತಿ ಮಾತನಾಡಿ, ಒಳಚರಂಡಿ/ಮಲವಿಸರ್ಜನೆ(ಪಿಟ್ಗಳಲ್ಲಿ) ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ಗಳು ಇಳಿಯಬಾರದು ಎಂಬ ಕಾನೂನಿದೆ. ಆದರೂ ಇನ್ನೂ ಕೆಲವೆಡೆ ಈ ಪದ್ದತಿ ಮುಂದುವರಿಯುತ್ತಿದೆ. ಈ […]
ಕರ್ನಾಟಕ ರಕ್ಷಣಾ ವೇದಿಕೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕ ಘಟಕ ವತಿಯಿಂದ ಸರ್ವಧರ್ಮ ಕಾರ್ಯಕ್ರಮಕ್ಕೆ ಪರಮ ಪೂಜ್ಯ ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮಿಗಳು ಸಂಸ್ಥಾನ ಶ್ರೀ ಗವಿಮಠ, ಕೊಪ್ಪಳ ಇವರು ಸಸಿಗೆ ನೀರು ಹಾಕುವ ಮೂಲಕ ಚಾಲನೆ ನೀಡಿದರು.ನಂತರ ಕಾರ್ಯಕ್ರಮದಲ್ಲಿ ಕೊಪ್ಪಳದ ಶ್ರೀಗಳು ಖ್ಯಾತ ಪ್ರವಚನಕಾರರಾದ ಪಂಡಿತ್ ಶ್ರೀ ಮೌಲಾನಾ ಸೈಯದ್ ಬಾಷ್, ಮಾತನಾಡಿದರು.ವೇದಿಕೆ ಮೇಲೆ ಉರ್ದು ಮಾತೆ ದೇವಾಲಯದ ಧರ್ಮಗುರುಗಳು ಆನಂದಕುಮಾರ ಹಟ್ಟಿಚಿನ್ನದಗಣಿ ಅಧ್ಯಕ್ಷ ಮಾನಪ್ಪ ವಜ್ಜಲ್, ಕರ್ನಾಟಕ ರಕ್ಷಣಾ […]