ದುಪ್ಪಟ್ಟು ಹಣ ವಸೂಲಿಗೆ ಇಳಿದಿವೆ ಟ್ಯಾಕ್ಸಿ, ಆಟೋ ಸವಾರರು, ಮೂರನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಪ್ರತಿಭಟನೆ ಬೆಳಗಾವಿಯಲ್ಲಿ ಕೂಡ ಮುಂದುವರೆದಿದೆ. ಬೆಳಗಾವಿಯ ಪ್ರತಿಭಟನ ವೇದಿಕೆ ಹಾಗೂ ಬಸ್ ನಿಲ್ದಾಣ ಪ್ರಯಾಣಿಕರು , ನೌಕರರು ಇಲ್ಲದೆ ಖಾಲಿ ಖಾಲಿ ಯಾಗಿದ್ದು, ಅಧಿಕಾರಿಗಳು ಇತರೆ ಡಿಪೋ ಬಸ್ ಗಳನ್ನು ನಿಲ್ದಾಣದಲ್ಲಿ ಪಾರ್ಕಿಂಗ್ ಹಾಕಿಸಿದ್ದಾರೆ. ಎರಡು ದಿನ ನಿರಂತರ ಧರಣಿ ಮಾಡಿರೋ ಸಾರಿಗೆ ನೌಕರರನ್ನು ಅಧಿಕಾರಿಗಳು ಹತ್ತಿಕ್ಕಲು ಯತ್ನಸಿದ್ದು, 40 ಕ್ಕೂ ಹೆಚ್ಚು […]
#KarnatakaBandh
ಬನಶಂಕರಿ ಬಸ್ ನಿಲ್ದಾಣದಲ್ಲಿ ಸಾರಿಗೆ ನೌಕರರ ಪ್ರತಿಭಟನೆ.. ಬಿಎಂಟಿಸಿ ಸಂಚಾರ ಸ್ಥಗಿತಗೊಳಿಸಿ ಆಕ್ರೋಶ.. ಈ ಕೂಡಲೇ ನಮ್ಮನ ಸರ್ಕಾರಿ ನೌಕರರನ್ನಾಗಿ ಮಾಡುವಂತೆ ಒತ್ತಾಯ.. ಸರ್ಕಾರ ಆದೇಶ ಹೊರಡಿಸುವ ಹೊರೆಗು ಸಂಚಾರ ಸ್ಥಗಿತ ಮಾಡಲು ನಿರ್ಧಾರ.. ಇದನ್ನೂ ಓದಿ : ಕುಖ್ಯಾತ ಕಳವು ಆರೋಪಿಗಳ ಬಂಧನ
ಸರ್ಕಾರ ತನ್ನ ನಿಲುವಿಗೆ ಬದ್ಧವಾಗಿದೆ ರೈತರು ಚರ್ಚೆಗೆ ಸಿದ್ಧರಿದ್ದರೆ ನಾವೂ ಸಿದ್ಧರಿದ್ದೇವೆ,ವಿಧಾನಸೌಧದಲ್ಲಿ ಕೃಷಿ ಸಚಿವ ಬಿ.ಸಿ ಪಾಟೀಲ್ ಹೇಳಿಕೆ .ರೈತರು ಸುಮ್ಮನೆ ಪ್ರತಿಭಟನೆ ಮಾಡಿದಾಗಲೆಲ್ಲಾ ಹೋಗಲು ಆಗೋದಿಲ್ಲ ಮೊದಲು ಸಿಎಂ ನನಗೆ ಹೇಳಬೇಕು,ಆಗ ನಾನು ಹೋಗುತ್ತೇನೆ, ಭೂಸುಧಾರಣಾ ಹಾಗೂ ಎಪಿಎಂಸಿ ವಿಧೇಯಕ ಅಂಗೀಕಾರವಾಗಿದೆ ಎಂದು ವಿಧಾನಸೌಧದಲ್ಲಿ ಕೃಷಿ ಸಚಿವ ಬಿ.ಸಿ ಪಾಟೀಲ್ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ : ಮಾರಕಾಸ್ತ್ರಗಳಿಂದ ಬರ್ಬರ ಕೊಲೆ
ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ವಿವಿಧ ಬೇಡಿಕೆಗಳ ಕುರಿತು ಕಾರ್ಮಿಕರ ಪ್ರತಿಭಟನೆ ನಡೆಸುತ್ತಿದ್ದರೆ. ಕಾರ್ಖಾನೆಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಆರು ತಿಂಗಳ ವೇತನ ನೀಡಿಲ್ಲ ಕಾರ್ಖಾನೆಯನ್ನು ಪ್ರಾರಂಭಿಸಿ ಕಾರ್ಮಿಕರ ಬದುಕನ್ನು ಉಳಿಸಿ ಎಂದು ಡಿಸಿಎಂ ಗೋವಿಂದ ಕಾರಜೋಳ ಗೆ ಧಿಕ್ಕಾರ ಹಾಕಿದ ಕಾರ್ಮಿಕರು. ಇದನ್ನು ಓದಿ :ಬೀದರ್ ಜಿಲ್ಲೆಯ ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನಲೆ
ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ಇಂದು ಕರ್ನಾಟಕ ಬಂದ್ಗೆ ಕನ್ನಡಪರ ಸಂಘಟನೆಗಳ ಒಕ್ಕೂಟ ಕರೆ ನೀಡಿದೆ.ಕರ್ನಾಟಕ ಬಂದ್ ಹಿನ್ನೆಲೆ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಕರ್ನಾಟಕ ರಕ್ಷಣಾ ವೇದಿಕೆ, ರೈತಪರ ಸಂಘಟನೆಗಳು ಹಾಗೂ ಹಲವು ಕನ್ನಡ ಸಂಘಟನೆಗಳ ಬಂದ್ ನಿರ್ಧಾರಕ್ಕೆ ಅನೇಕ ಸಂಘಟನೆಗಳು ನೈತಿಕ ಬೆಂಬಲ ಸೂಚಿಸಿವೆ. ನಗರದ ಬಿಬಿಎಂಪಿ ಕಚೇರಿ ಬಳಿ ಬ್ಯಾರಿಗೇಟ್ ಹಾಕಿ ಸಂಪೂರ್ಣ ಬಂದ್ ಮಾಡಿದ್ದಾರೆ. ಇನ್ನೂ ಕೆಆರ್ ಪುರ, ಟಿನ್ ಫ್ಯಾಕ್ಟರಿ ಬಳಿ ಪೊಲೀಸರ […]
ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಖಂಡಿಸಿ ಡಿಸೆಂಬರ್ 5 ಕರ್ನಾಟಕ ಬಂದ್ಗೆ ಕರೆ ಕೊಟ್ಟಿರುವ ಹಿನ್ನೆಲೆ, ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ಗೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ವಿಶೇಷ ಸೂಚನೆ ನೀಡಿದ್ದಾರೆ. ಡಿಸೆಂಬರ್ 4 ರ ಮಧ್ಯರಾತ್ರಿಯಿಂದಲೇ ನಗರದಾದ್ಯಂತ ಬಿಗಿ ಪೊಲೀಸ್ ಭದ್ರತೆ ಇದ್ದು, ಡಿಸೆಂಬರ್ 5ರ ಬೆಳಗ್ಗೆ 4:30ರಿಂದ ಹೊಯ್ಸಳ ಪೊಲೀಸ್ ಸಿಬ್ಬಂದಿ ಗಸ್ತು ತಿರುಗಲಿದ್ದಾರೆ. ವಿಶೇಷವಾಗಿ ಕೆಎಸ್ಆರ್ಟಿಸಿ, ಬಿಎಂಟಿಸಿ, ಮೆಟ್ರೋ ನಿಲ್ದಾಣಗಳಲ್ಲಿ ಬಿಗಿ ಭದ್ರತೆ […]