ಕಾಶಿ ವಿಶ್ವನಾಥ ಶೆಟ್ಟಿ ಸಾಹಿತ್ಯ ಕ್ಷೇತ್ರದ ಸಾಧಕರು.ಕಾಶಿ ವಿಶ್ವನಾಥ ಶೆಟ್ಟಿಯವರು 1928ರ ಫೆಬ್ರವರಿ 24ರಂದು ತುಮಕೂರಿನಲ್ಲಿ ಜನಿಸಿದರು. ತಂದೆ ಕೃಷ್ಣ ಶೆಟ್ಟಿ, ತಾಯಿ ಸೀತಾಲಕ್ಷ್ಮಮ್ಮ. ಪ್ರಾರಂಭಿಕ ಶಿಕ್ಷಣ ತುಮಕೂರಿನಲ್ಲಿ ನಡೆಯಿತು. ಮೈಸೂರು ಮಹಾರಾಜಾ ಕಾಲೇಜಿನಿಂದ ಬಿ.ಎ. (ಆನರ್ಸ್) ಹಾಗೂ ಎಂ.ಎ. ಪದವಿ ಗಳಿಸಿದರು.ಕಾಶಿ ವಿಶ್ವನಾಥ ಶೆಟ್ಟಿಯವರು ಶಾಲೆಯಲ್ಲಿ ಓದುತ್ತಿದ್ದಾಗಲೇ ಸಾಹಿತ್ಯದ ಬಗ್ಗೆ ಒಲವು ಮೂಡಿ ಸಾಹಿತ್ಯ ಚಟುವಟಿಕೆಗಳಿಗಾಗಿ ‘ವಿಶ್ವ ಸಂಘ’ ಎಂಬ ಸಂಘವನ್ನು ಸ್ಥಾಪಿಸಿದರು. ಸಂಘವನ್ನು […]