ಕೆರೆ ಕಾಮೇಗೌಡ ಎಂದೇ ಖ್ಯಾತಿ ಪಡೆದಿರುವ ಕಲ್ಮನೆ ಕಾಮೇಗೌಡರಿಗೂ ಕೊರೋನಾ ಪಾಸಿಟಿವ್ ಧೃಢಪಟ್ಟಿದೆ. ಆದ್ದರಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಲವು ದಿನಗಳಿಂದ ಬಲಗಾಲಿಗೆ ಗಾಯಗೊಂಡು, ಮಳವಳ್ಳಿ ತಾಲ್ಲೂಕು ಆಸ್ಪತ್ರೆ, ಜಿಲ್ಲಾಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯುತ್ತಿದ್ದಂತ ಆಧುನಿಕ ಭಗೀರತ ಕಾಮೇಗೌಡರು, ಇತ್ತೀಚೆಗೆ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಕಾಮೇಗೌಡರನ್ನು ಕೊರೋನಾ ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಿದಾಗ, ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಅವರನ್ನು ಕೋವಿಡ್ -19 ಆಸ್ಪತ್ರೆಗೆ ದಾಖಲಿಸಿ […]