ಅಂಡರ್ ವೇರ್ ಬನಿಯನ್ ಧರಿಸಿ ಮೈಗೆ ಎಣ್ಣೆ ಹಚ್ಚಿಕೊಂಡು ಅಂಗಡಿಗಳ ಶೆಟರ್ ಮುರಿದು ಕಳ್ಳತನ ಮಾಡಿರುವ ದೃಷ್ಯ ಸಿಸಿಟಿವಿಯಲ್ಲಿ ಸೆರೆಯಗಿರುವ ಘಟನೆ ಕೋಲಾರ ನಗರದ ಕಾಳಮ್ಮ ಗುಡಿ ರಸ್ತೆಯಲ್ಲಿ ನಡೆದಿದೆ. ಸೂರ್ಯ ಗಾರ್ಮೆಂಟ್ಸ್, ಮದೀನಾ ಹಾರ್ಡ್ ವೇರ್ ಶಾಪ್ ನಲ್ಲಿ ಕಳ್ಳತನ ಮಾಡಲಾಗಿದ್ದು, ಸೂರ್ಯ ಗಾರ್ಮೆಂಟ್ಸ್ ನಲ್ಲಿ 17 ಸಾವಿರ ರುಪಾಯಿ ನಗದು, ಮತ್ತು ಲಕ್ಷಾಂತರ ಬೆಲೆಯ ಬಟ್ಟೆ ಕಳ್ಳತನ ಮಾಡಿ, ಮದೀನಾ ಹಾರ್ಡ್ ವೇರ್ ಶಾಪ್ ನಲ್ಲಿ ಟೂಲ್ […]
#kolar
ಚಾಲಕನ ನಿಯಂತ್ರಣ ತಪ್ಪಿ ಕೆ ಎಸ್ ಆರ್ ಟಿ ಸಿ ಪಲ್ಟಿ, ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಪಾತಪಲ್ಲಿ ಬಲಿ ಘಟನೆ, ಪಲ್ಟಿ ಹೊಡೆದ ಬಸ್ ಯಾತಾಸ್ಥಿತಿಗೆ ಎದ್ದು ನಿಂತಿದೆ, ಚಿಂತಾಮಣಿ ದಿಂದ ಶ್ರೀನಿವಾಸಪುರಕ್ಕೆ ಬರುತ್ತಿದ್ದ ವೇಳೆ ಘಟನೆ, ರಸ್ತೆಯ ಪಕ್ಕದಲ್ಲಿ ಇದ್ದ ಗುಣಿಗೆ ಬಿದ್ದು ಬಸ್ ಮಾತ್ರ ಸಂಪರ್ಣ ಜಕಮ್ ಆಗಿದೆ, ಸಣ್ಣ ಪುಟ್ಟ ಗಾಯಗಳಿಂದ ಪ್ರಯಾನಿಕರು ಹಾಗೂ ಸಿಬ್ಬಂದಿ ಪ್ರಾಣಪಾಯದಿಂದ ಪಾರಾಗಿದ್ದಾರೆ, ಈ ಘಟನೆಯಿಂದ ಯಾವುದೇ ಪ್ರಾಣಪಾಯವಾಗಿಲ್ಲಾ, […]
ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪಿರುವ ಘಟನೆ ಕೋಲಾರ ತಾಲ್ಲೂಕು ಆಲೇರಿ ಗ್ರಾಮದ ಬಳಿ ನಡೆದಿದೆ. ಮಂಜುನಾಥ್ (49) ಮೃತ ವ್ಯಕ್ತಿ.ಸ್ಥಳಕ್ಕೆ ಕೋಲಾರ ಗ್ರಾಮಾಂತರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಇನ್ನು ಪ್ರಕರಣವು ಕೋಲಾರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಇದನ್ನೂ ಓದಿ :ದೇಶದಲ್ಲಿ ನಿಲ್ಲದ ಗೋ ಮಾಂಸ ದಂಧೆ
ರಸ್ತೆಯಲ್ಲಿ ರಾಗಿ ಹಾಗೂ ಹುರುಳಿ ಒಕ್ಕಣೆ ಮಾಡುತ್ತಿದ್ದ ವೇಳೆ ರಸ್ತೆಯಲ್ಲಿ ದ್ವಿಚಕ್ರ ವಾಹನ ಸವಾರ ಜಾರಿ ಬಿದ್ದು ಗಾಯಗಳಾಗಿವೆ, ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕು ಎಳೆಸಂದ್ರ ಗ್ರಾಮದ ಬಳಿ ಈ ಘಟನೆ ನಡೆದಿದೆ, ಗುಟ್ಟೂರು ಗ್ರಾಮದ ಸುಬ್ರಮಣಿ ಬೈಕ್ ನಿಂದ ಬಿದ್ದು ಗಾಯಗಳಾದ ಹಿನ್ನೆಲೆ ಆಕ್ರೋಶಗೊಂಡ ಆತನ ತಂದೆ ಒಕ್ಕಣೆ ಮಾಡುತ್ತಿದ್ದ ಹುರುಳಿಗೆ ಬೆಂಕಿ ಹಚ್ಚಿದ್ದಾನೆ, ಸದ್ಯ ಸ್ಥಳಕ್ಕೆ ಬಂಗಾರಪೇಟೆ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ:`ರಾಬರ್ಟ್’ […]
ರೈತ ವಿರೋಧಿ ಕಾಯ್ದೆ ಹಾಗೂ ಮಾರುಕಟ್ಟೆ ತಿದ್ದುಪಡಿ ಕಾನೂನು ಹಿಂಪಡೆಯಲು ರಾಷ್ಟ್ರೀಯ ರಿಪಬ್ಲಿಕನ್ ಸೇನೆ ವತಿಯಿಂದ ವಿಜಯಪುರ ಜಿಲ್ಲೆಯ ಕೋಲಾರ ತಾಲೂಕಿನಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ಪ್ರತಿಭಟನೆಯಲ್ಲಿ ಸಂಘಟನಾಕಾರರು ನೀಲಿ ಶಾಲನ್ನು ಧರಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.ಕನಕ ವೃತ್ತದಿಂದ ತಹಶೀಲ್ದಾರ್ ಕಚೇರಿವರೆಗೂ ಜಾಥಾ ನಡೆಸಿ, ದುಡಿದು ತಿನ್ನಲು ಆಗದ ರೀತಿಯಲ್ಲಿ ಇಂದು ಒಂದು ಪರಿಸ್ಥಿತಿ ಎದುರಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಜಾರಿಗೆ ತಂದಿರುವ ನೀತಿಯನ್ನು ಕೂಡಲೆ ರದ್ದು ಮಾಡಬೇಕು […]
ಕೃಷಿಹೊಂಡದಲ್ಲಿ ಮಹಿಳೆಯ ಶವ ಪತ್ತೆಯಾಗಿರುವಂತಹ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಸಿ.ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. 3 ದಿನಗಳಿಂದ ಗಂಡ-ಹೆಂಡತಿ ನಡುವೆ ಜಗಳವಾಗುತ್ತಿತ್ತು ಎಂಬ ಶಂಕೆ ವ್ಯಕ್ತವಾಗಿದೆ.ಅನುಮಾನಸ್ಪದ ಸ್ಥಿತಿಯಲ್ಲಿ ಕವಿತಾ (30) ಶವ ಪತ್ತೆಯಾಗಿದ್ದು,ಮೃತಳ ಗಂಡ ಸೂರಿ ನಾಪತ್ತೆಯಾಗಿದ್ದಾನೆ. ಇನ್ನು ಸ್ಥಳಕ್ಕೆ ನಂಗಲಿ ಪೊಲೀಸ್ ಭೇಟಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ:ದರೋಡೆ ಮತ್ತು ದನಗಳವು ಮಾಡುತ್ತಿದ್ದ ನಾಟೋರಿಯಸ್ ಗ್ಯಾಂಗ್
ಚಿರತೆ ದಾಳಿಗೆ ಎರಡು ಕುರಿ ಬಲಿಯಾಗಿದೆ. ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕು ದಿನ್ನಹಳ್ಳಿ ಗ್ರಾಮದಲ್ಲಿ ನಡೆದ ಘಟನೆ. ನಾರಾಯಣಪ್ಪ ನವರಿಗೆ ಸೇರಿದ ಕುರಿಗಳು ಬೆಳಗ್ಗಿನ ಜಾವ ಸುಮಾರು 3 ಘಂಟೆಯ ಸಮಯದಲ್ಲಿ ಚಿರತೆ ದಾಳಿಮಾಡಿದೆ. ಪದೇ ಪದೇ ಗ್ರಾಮದ ಸುತ್ತ ಮುತ್ತ ಕಾಣಿಸಿಕೊಳ್ಳುತ್ತಿರುವ ಚಿರತೆ. ಅರಣ್ಯ ಇಲಾಖೆಯ ವಿರುದ್ಧ ಶಾಪ ಹಾಕುತ್ತಿರುವ ಗ್ರಾಮದ ಜನರು… ಇದನ್ನೂ ಓದಿ :ಟಿಸಿಯಲ್ಲಿ ಹೊತ್ತಿ ಉರಿದ ಬೆಂಕಿ
ಕಾರು ಹಾಗೂ ಲಾರಿ ನಡುವೆ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ರಾಷ್ಟ್ರೀಯ ಹೆದ್ದಾರಿ ಜಮ್ಮನಹಳ್ಳಿ ಗೇಟ್ ಬಳಿ ನಡೆದಿದೆ… ಅಪಘಾತದಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು,ಆರ್ ಎಲ್ ಜಾಲಪ್ಪ ಆಸ್ಪತ್ರೆಗೆ ದಾಖಲು ಮಾಡಲಾಗಿದೆ…ಮಾಲೂರು ತಾಲ್ಲೂಕಿನ ಶಿವನಾಪುರ ಗ್ರಾಮದ ಪಾರ್ವತಮ್ಮ (50) ಮೃತ ಮಹಿಳೆಯಾಗಿದ್ದು,ಮುಳಬಾಗಿಲು ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ… ಇದನ್ನೂ ಓದಿ:ಭೂಮಿಯಲ್ಲಿ ಪ್ರತ್ಯಕ್ಷವಾದ ಬಸಣ್ಣನ ಮೂರ್ತಿ
ರೈತರು ಬೆಳೆದ ಲಕ್ಷಾಂತರ ಮೌಲ್ಯದ ಬೆಳೆಗಳು ಕಾಡಾನಡಗಳ ದಾಳಿಯಿಂದ ಹಾನಿಯಾಗಿರುವ ಘಟನೆ ಕೋಲಾರದ ಗಡಿ ಭಾಗದಲ್ಲಿ ಜರುಗಿದೆ. ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಭೀಮಗಾನಹಳ್ಳಿ ಗ್ರಾಮದಲ್ಲಿ ಈ ಘಟನೆ ಜರುಗಿದ್ದು,ರೈತನ ಒಂದು ಎಕರೆ ಟೊಮ್ಯಾಟೊ ತೋಟ ಸಂಪೂರ್ಣ ನಾಶವಾಗಿದೆ. ಇತ್ತೀಚೆಗಷ್ಟೇ ರೈತನು ಸಾಲಮಾಡಿ ಟೊಮ್ಯಾಟೊ ಬೆಳೆದಿದ್ದ, ಇನ್ನೇನು ಫಸಲು ಬಿಡುವಷ್ಟರಲ್ಲಿ ಕಾಡಾನೆಗಳ ದಾಳಿಯಿಂದ ಇಡೀ ತೋಟ ಹಾನಿಯಾಗಿದೆ. ಇದಲ್ಲದೆ ಭೀಮಗಾನಹಳ್ಳಿ ಸುತ್ತಮುತ್ತಲಿನಲ್ಲಿ ಹಲವಾರು ರೈತರು ಬಾಳೆ, ಕ್ಯಾಪ್ಸಿಕಂ ಸೇರಿದಂತೆ ವಿವಿಧ […]
ಕುಡಿದ ಮತ್ತಿನಲ್ಲಿ ಪರಸ್ಪರ ಗಲಾಟೆ ಉಂಟಾಗಿ ವ್ಯಕ್ತಿ ಕೊಲೆಯಾಗಿರುವ ಘಟನೆ ಕೋಲಾರ ಜಿಲ್ಲೆಯ ಮಾಲುರು ಪಟ್ಟಣದ ಸಂತೆ ಬೀದಿಯಲ್ಲಿ ತಡರಾತ್ರಿ ನಡೆದಿದೆ. ಚೈನ್ ಬಾಬು ಶಶಿ ಬಳಿ ಹಣ ಸಾಲ ಪಡೆದು ವಾಪಸ್ ನೀಡಲಿಲ್ಲ ಹಣ ವಾಪಸ್ ಕೇಳಿದಕ್ಕೆ ಚೈನ್ ಬಾಬು ಹಲ್ಲೇ ಮಾಡಲು ಮುಂದಾಗಿದ್ದಾನೆ ಈ ವೇಳೆ ಶಶಿ ಮಚ್ಚಿನಿಂದ ಹಲ್ಲೇಮಾಡಿ ಕೊಲೆಗೈದಿರುವುದಾಗಿ ಠಾಣೆಯಲ್ಲಿ ಬಂದು ತಪ್ಪೊಪ್ಪಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಮಾಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. […]