ನೆಟ್ ವರ್ಕ್ ಹಾಗೂ ಸಂಪರ್ಕದ ಸಮಸ್ಯೆಗಳ ಬಗ್ಗೆ ವಾರದಲ್ಲಿ ಜಿಲ್ಲಾಧಿಕಾರಿ ಮತ್ತು ಶಾಸಕರ ಜೊತೆ ಸಭೆ ಕರೆದು ಸಮಸ್ಯೆ ಬಗೆಹರಿಸಲು ಪ್ರಯತ್ನಿಸಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆಟ್ ವರ್ಕ್ ಸಮಸ್ಯೆಯಿಂದ ಪಡಿತರ ಸೇರಿದಂತೆ ಸರ್ಕಾರದ ಆಡಳಿತಾತ್ಮಕ ಹಾಗೂ ಜನಜೀವನಕ್ಕೆ ತೊಂದರೆ ಆಗುತ್ತಿದೆ. ಈ ನಿಟ್ಟಿನಲ್ಲಿ ಸಭೆ ನಡೆಸುತ್ತೇನೆ. ಸಮಗ್ರ ಸುಳ್ಯ ತಾಲ್ಲೂಕಿನಲ್ಲಿನ ಸಂಪರ್ಕ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸುತ್ತೇವೆ ಎಂದು ಹೇಳಿದರು.

Advertisement

Wordpress Social Share Plugin powered by Ultimatelysocial