ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಬಗ್ಗೆ ಅವಹೇಳನಕಾರಿಯಾಗಿ ಟ್ವೀಟ್ ಮಾಡಿದ್ದ ಕೆಪಿಸಿಸಿ ಸಾಮಾಜಿಕ ಜಾಲತಾಣಗಳ ಕರ್ಯರ್ಶಿ ಆನಂದ್ ಪ್ರಸಾದ್ ಅವರನ್ನು ಬಂಧಸಲಾಗಿದೆ. ಕೆ.ಆರ್.ಪುರನಲ್ಲಿರುವ ನಿವಾಸದಲ್ಲೇ ಆನಂದ್ ಪ್ರಸಾದ್ ಅವರನ್ನು ಕಬ್ಬನ್ ಪರ್ಕ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ದ ಟ್ವೀಟ್ ಮಾಡಿದ್ದ ಆನಂದ್ ಪ್ರಸಾದ್ ಅವರ ವಿರುದ್ಧ ಕಬ್ಬನ್ ಪರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಟ್ವೀಟ್ ಅಳಿಸಲಾಗಿದೆ.