ಕೊರಟಗೆರೆ :- ಬೆಳಗಾವಿಯಲ್ಲಿ ಇತ್ತೀಚೆಗೆ ಎಂ.ಇ.ಎಸ್ ಪುಂಡರು ಕನ್ನಡ ಬಾವುಟವನ್ನು ಸುಟ್ಟು ಹಾಕುವ ಮೂಲಕ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ ಕೂಡಲೇ ಅವರನ್ನು ಬಂಧಿಸಿ ಕಠಿಣ ಶಿಕ್ಷೆಯನ್ನು ನೀಡಬೇಕು ಹಾಗೆಯೇ ಬಂಧಿಸಿರುವ ಕನ್ನಡಿಗರನ್ನು ಕೂಡಲೇ ಬಿಡುಗಡೆಗೊಳಿಸಬೇಕಾಗಿ ಕೊರಟಗೆರೆಯ ಕನ್ನಡಪರ ಸಂಘಟನೆಗಳು ಮೆರವಣಿಗೆ ಮೂಲಕ ತಹಸೀಲ್ದಾರ್ ಕಚೇರಿಗೆ ತೆರಳಿ ಮನವಿ ಪತ್ರ ಸಲ್ಲಿಸಿದರು .ಕನ್ನಡಿಗರು ಮೌನವಾಗಿದ್ದರೆ ಎಂದರೆ ಶಾಂತ ರೀತಿಯಿಂದ ವರ್ತಿಸುವುದು ಕನ್ನಡಿಗರ ಹುಟ್ಟುಗುಣ ಅದನ್ನು ಎಮ್. ಇ.ಎಸ್ ಪುಂಡರು ಇನ್ನಿತರೆ ನಾಡ […]

ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆಯನ್ನು ಸರಕಾರ ಗಂಭೀರವಾಗಿ ಪರಿಗಣಿಸಿದ್ದು ಅದರ ವಿರುದ್ಧ ಕಠಿಣ ನಿಲುವು ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಎಂಇಎಸ್ ನವರು ನಡೆಸಿದ ಗಲಾಟಗೆ ಈಗಾಗಲೇ ಪೊಲೀಸರು ಎಲ್ಲಾ ಕಾನೂನು ಕ್ರಮ ಕೈಗೊಂಡಿದ್ದಾರೆ. ಎಂಇಎಸ್ ಬಗ್ಗೆ ಕಠಿಣ ನಿಲುವು ತೆದುಕೊಳ್ಳುತ್ತೇವೆ ಎಂದು ಎಚ್ಚರಿಸಿದರು.ಮಹಾರಾಷ್ಟ್ರ ಕನ್ನಡಿಗರ ರಕ್ಷಣೆ ಮಾಡಲು ಸರ್ಕಾರ ಬದ್ಧವಾಗಿದೆ. ಅಧಿಕಾರಿಗಳ ಮಟ್ಟದಲ್ಲಿ ಇಂದು ಚರ್ಚೆ ನಡೆಯಲಿದೆ. ಡಿಜಿ, ಹೋಂ ಕಾರ್ಯದರ್ಶಿ […]

ಅಗತ್ಯವಿದ್ದರೆ ಭಾರತಕ್ಕೆ ಹೆಚ್ಚುವರಿ ರಫೇಲ್ ಯುದ್ಧ ವಿಮಾನಗಳನ್ನು ಪೂರೈಕೆ ಮಾಡಲು ತಮ್ಮ ದೇಶ ಸಿದ್ಧವಿದೆ ಎಂದು ಫ್ರಾನ್ಸ್ ರಕ್ಷಣಾ ಸಚಿವೆ ಫ್ಲಾರೆನ್ಸ್ ಪಾರ್ಲೆ ಹೇಳಿದ್ದಾರೆ. ಅಭಿವೃದ್ಧಿಶೀಲ ರಾಷ್ಟ್ರಗಳ ಸಂಶೋಧನೆ ಮತ್ತು ಮಾಹಿತಿ ವ್ಯವಸ್ಥೆಯ ಅಧ್ಯಕ್ಷ ಮತ್ತು ಫ್ರಾನ್ಸ್‌ನ ಭಾರತದ ಮಾಜಿ ರಾಯಭಾರಿ ಡಾ.ಮೋಹನ್ ಕುಮಾರ್ ಅವರೊಂದಿಗೆ ಸಂವಾದದಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ.ಮೇಕ್ – ಇನ್ ಇಂಡಿಯಾ ಹಲವಾರು ವರ್ಷಗಳಿಂದ ಫ್ರೆಂಚ್ ಉದ್ಯಮಕ್ಕೆ ವಿಶೇಷವಾಗಿ ಜಲಾಂತರ್ಗಾಮಿ ನೌಕೆಗಳಂತಹ ರಕ್ಷಣಾ ಸಾಧನಗಳಿಗೆ […]

ಬೆಳಗಾವಿ ನಗರದಲ್ಲಿಂದು ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅವಮಾನ ಮಾಡಿರುವ ಖಂಡಿಸಿ ಕನ್ನಡಪರ ಸಂಘಟನೆಗಳು ರಾಣಿ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದರು ಆದರೆ 144 ಕಲಂ ಜಾರಿಯಾಗಿರುವುದರಿಂದ ಪೊಲೀಸರು ಕನ್ನಡಪರ ಸಂಘಟನೆಗಳನ್ನು ಪ್ರತಿಭಟನೆ ಮಾಡಲು ಪರವಾನಗಿ ನೀಡದೇ ಕಾರಣ ಸಂಘಟನೆ ಕಾರ್ಯಕರ್ತರು ಪೊಲೀಸರ ಜೊತೆ ವಾಗ್ವಾದ ನಡೆಸಿ ಮುಂದು ಹೋಗಲು ಪ್ರಯತ್ನಿಸಿದರು ಆದರೆ ಪೊಲೀಸರು ಕನ್ನಡ ಸಾಹಿತ್ಯ ಭವನ ಗೇಟಿನ ಹೊರಗಡೆ ಹೋಗದಂತೆ ತಡೆಹಿಡಿದರು ಕೆಲವೊತ್ತು ವಾಗ್ವಾದ ಸರ್ಕಾರದ ವಿರುದ್ಧ ಘೋಷಣೆಗಳು […]

ಹುಡುಗಿಯರಿಗೆ ಮದುವೆಯಾಗಲು ಕನಿಷ್ಠ ವಯೋಮಾನದ ಅರ್ಹತೆಯನ್ನು 21 ವರ್ಷಕ್ಕೇರಿಸಲು ಕೇಂದ್ರ ಸಂಪುಟ ಅಸ್ತು ಎಂದಿರುವ ಬೆನ್ನಿಗೇ ಈ ವಿಚಾರವಾಗಿ ದೇಶಾದ್ಯಂತ ಪರ-ವಿರೋಧಗಳ ಚರ್ಚೆಗಳು ಕೇಳಿ ಬರುತ್ತಿವೆ.ಕೇಂದ್ರದ ನಡೆಯನ್ನು ವಿರೋಧಿಸಿರುವ ಸಮಾಜವಾದಿ ಪಾರ್ಟಿಯ ಸಂಸದ ಎಸ್‌.ಟಿ.ಹಸನ್, ಹುಡುಗಿಯರು 16ನೇ ವಯಸ್ಸಿಗೆ ಮದುವೆಯಾಗುವುದರಲ್ಲಿ ತಪ್ಪೇನಿಲ್ಲ ಎಂದಿದ್ದಾರೆ.ಹುಡುಗಿಯರು ಫಲವತ್ತತೆಯ ವಯಸ್ಸಿಗೆ ಬಂದ ಕೂಡಲೇ ಮದುವೆಯಾಗಬೇಕು. ಪ್ರೌಢ ಹುಡುಗಿಯೊಬ್ಬಳು 16ನೇ ವಯಸ್ಸಿಗೆ ಮದುವೆಯಾಗುವುದು ತಪ್ಪೇನಿಲ್ಲ. ಹುಡುಗಿಯೊಬ್ಬಳು 18ನೇ ವಯಸ್ಸಿಗೆ ಮತದಾನ ಮಾಡಬಹುದಾದರೆ ಮದುವೆ ಏಕಾಗಬಾರದು? ಎಂದು […]

ರಾಮಮೂರ್ತಿನಗರ ವಾರ್ಡ್ ನ ಎನ್.ಆರ್.ಐ ಬಡಾವಣೆಯಲ್ಲಿ 35 ಎಕರೆ ಖಾಸಗಿ ಭೂಮಿ ನನ್ನ ಮೇಲಿನ ಆರೋಪ ಸುಳ್ಳು ಸತ್ಯಕ್ಕೆ ದೂರವಾದಧ್ದು ನಾನು ಯಾವುದೇ ತಪ್ಪು ಮಾಡಿಲ್ಲ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಭೂಹಗರಣದ ಬಗ್ಗೆ ನಗರಾಭಿವೃದ್ಧಿ ಬೈರತಿ ಬಸವರಾಜು ಮಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. 2013 ರಲ್ಲೆ ಎಕರೆಗೆ 18 ಲಕ್ಷ ನೀಡಿ ಖರೀದಿ ಮಾಡಿದ್ದೆನೆ ಈ ಮಾಡುತ್ತಿರುವ ಆರೋಪದಲ್ಲಿ ಯಾವುದೇ ಉರುಳಿಲ್ಲ.ವಿಚಾರದ ಬಗ್ಗೆ ಜಮೀನು ಮಾಲೀಕರು […]

ಅಮೆರಿಕದ ನ್ಯೂಯಾರ್ಕ್‌ ನಿಂದ ಹಿಂದಿರುಗಿದ 29 ವರ್ಷದ ವ್ಯಕ್ತಿಗೆ ಶುಕ್ರವಾರ ಮುಂಬೈನಲ್ಲಿ ಒಮಿಕ್ರಾನ್ ರೂಪಾಂತರಿ ಸೋಂಕು ತಗುಲಿರುವುದು ಧೃಢವಾಗಿದೆ. ಈ ಬಗ್ಗೆ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ಪ್ರ ಕಟಣೆಯಲ್ಲಿ ತಿಳಿಸಿದೆ.ಒಮಿಕ್ರಾನ್ ಸೋಂಕಿತ ವ್ಯಕ್ತಿಗೆ ಯಾವುದೇ ರೋಗಲಕ್ಷಣಗಳಿಲ್ಲ. ಈತ ಫೈಜರ್ ಲಸಿಕೆಯ ಮೂರು ಡೋಸ್ ತೆಗೆದುಕೊಂಡಿದ್ದಾನೆ ಎಂದು ಬಿಎಂಸಿ ಹೇಳಿದೆ.ನವೆಂಬರ್ 9 ರಂದು ವಿಮಾನ ನಿಲ್ದಾಣದಲ್ಲಿ ನಡೆಸಿದ ಪರೀಕ್ಷೆಯಲ್ಲಿ ಅವರು ಕೋವಿಡ್ -19 ಪಾಸಿಟಿವ್ ಪತ್ತೆಯಾಗಿತ್ತು. ನಂತರ ಅವರ ಮಾದರಿಗಳನ್ನು ಜೀನೋಮ್ ಸೀಕ್ವೆನ್ಸಿಂಗ್ […]

ನಗರದಲ್ಲಿ ಸೆಕ್ಷನ್ 144 ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ. ತಡರಾತ್ರಿ ಕಿಡಿಗೇಡಿಗಳು ಪುಂಡಾಟ ಮೆರೆದ ಹಿನ್ನೆಲೆಯಲ್ಲಿ ನಾಳೆ ಬೆಳಗ್ಗೆ 6 ಗಂಟೆಯವರೆಗೆ ಬೆಳಗಾವಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.ತಪ್ಪಿತಸ್ಥರನ್ನು ಯಾವುದೇ ಕಾರಣಕ್ಕೂ ನಮ್ಮ ಸರ್ಕಾರ ಬಿಡುವುದಿಲ್ಲ. ಇದು ಬೆರಳೆಣಿಕೆಯಷ್ಟು ಜನರು ಮಾಡುತ್ತಿರುವ ಕೃತ್ಯವಾಗಿದೆ. ಇಂತಹ ಘಟನೆ ಮರುಕಳಿಸದಂತೆ ಕ್ರಮ ಕೈಗೊಳ್ಳಲಾಗುತ್ತದೆ. ಪುಂಡಾಟಿಕೆ ಹತ್ತಿಕ್ಕುವ ಜೊತೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಪೊಲೀಸರಿಗೆ […]

ಕರ್ನಾಟಕ- ಮಹಾರಾಷ್ಟ್ರದ ನಡುವೆ ಸಂಘರ್ಷ ಮಾಡುವ ಸಂಚು ಮಾಡಲಾಗುತ್ತಿದೆ. ಬೆಳಗಾವಿಯಲ್ಲಿ ಸಂಘರ್ಷ ಮಾಡುವ ಉದ್ದೇಶದಿಂದ, ಅರಾಜಕತೆವಾದಿಗಳು ಸೃಷ್ಟಿ ಮಾಡಿರುವ ಸಾಧ್ಯತೆಯಿದೆ. ಅರಾಜಕತವಾದಿಗಳ ಕುಮ್ಮಕ್ಕಿಗೆ ಬಲಿಯಾಗದೆ ಶಾಂತಿ, ಸೌಹಾರ್ದತೆ ಕಾಪಾಡಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರದಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.ಸುದ್ದಿಗಾರರೊದಿಗೆ ಮಾತನಾಡಿದ ಅವರು ಬೆಳಗಾವಿಯಲ್ಲಿ ಎಂ.ಇ.ಎಸ್ ಕಾರ್ಯಕರ್ತರ ಪುಂಡಾಟ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದರು.ಕೆಲವರು ಅರಾಜಕತೆ, ಸಂಘರ್ಷ ನಡೆಸುವ ಸಂಚು ರೂಪಿಸಿದ್ದಾರೆ. ಕೊಲ್ಲಾಪುರದಲ್ಲಿ ಕನ್ನಡ ಭಾವುಟ ಸುಟ್ಟರು, ಅಲ್ಲಿ ಯಾವ ಪಕ್ಷ ಅಧಿಕಾರದಲ್ಲಿದೆ? […]

ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ ಪಂಜಾಬ್ ಮುಖ್ಯಮಂತ್ರಿ ಚರಣ್ ಜಿತ್ ಸಿಂಗ್ ಚನ್ನಿ, ಈ ಪಕ್ಷ ಆಧುನಿಕ ಈಸ್ಟ್ ಇಂಡಿಯಾ ಕಂಪನಿ ಎಂದು ಆರೋಪಿಸಿದ್ದಾರೆ.ಆಮ್ ಆದ್ಮಿ ಪಕ್ಷ ರಾಜ್ಯದಲ್ಲಿನ ಸಂಪತ್ತನ್ನು ಲೂಟಿ ಮಾಡುವ ಸಂಚು ಮಾಡಿದೆ.ಅಷ್ಟೇ ಅಲ್ಲ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಗೆ ಹಸುವಿನ ಹಾಲು ಕರೆಯುವುದು ಹೇಗೆಂಬುದು ಕೂಡಾ ತಿಳಿದಿಲ್ಲ ಎಂದು ಚನ್ನಿ ಟೀಕಿಸಿದ್ದಾರೆ.ಪಂಜಾಬ್ ನಲ್ಲಿ […]

Advertisement

Wordpress Social Share Plugin powered by Ultimatelysocial