ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಸಖತ್ ಸಿನಿಮಾಗೆ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ, ನಿರ್ದೇಶಕ ಜೋಗಿ ಪ್ರೇಮ್ ಸಾಥ್ ಸಿಕ್ಕಿದೆ. ಸಖತ್ ಸಿನಿಮಾ ಟೀಸರ್ ಈಗಾಗಲೇ ಬಿಡುಗಡೆಯಾಗಿ ಜನರಿಗೆ ಸಖತ್ ಇಷ್ಟವಾಗಿದೆ. ಇದೀಗ ಚಿತ್ರದ ಟೈಟಲ್ ಹಾಡು ಬಿಡುಗಡೆ ಮಾಡಲು ಚಿತ್ರತಂಡ ಸಜ್ಜಾಗಿದೆ.ನಾಳೆ ‘ಸಖತ್’ ಸಿನಿಮಾದ ಟೈಟಲ್ ಹಾಡು ಆನಂದ್ ಅಡಿಯೋ ಯೂ ಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗುತ್ತಿದೆ. ಈ ಹಾಡನ್ನು ಧ್ರುವ ಸರ್ಜಾ ಮತ್ತು ಜೋಗಿ ಪ್ರೇಮ್ ಲೋಕಾರ್ಪಣೆಗೊಳಿಸಲಿದ್ದಾರೆ. […]
#latesupdates
ಟಿ20 ವಿಶ್ವಕಪ್ ಕ್ರಿಕೆಟ್ ಪಂದ್ಯದಲ್ಲಿ ಭಾರತ ವಿರುದ್ಧ ಜಯಗಳಿಸಿದ ನಂತರ ಪಾಕಿಸ್ತಾನದ ಆಟಗಾರರನ್ನು ಹೊಗಳಿ ವಾಟ್ಸಾಪ್ ಸ್ಟೇಟಸ್ ಪೋಸ್ಟ್ ಮಾಡಿದ ಆರೋಪದ ಮೇಲೆ ಆಗ್ರಾದ ಕಾಲೇಜೊಂದರಿಂದ ಬಂಧಿತರಾದ ಕಾಶ್ಮೀರಿ ವಿದ್ಯಾರ್ಥಿಗಳನ್ನ ಕೂಡಲೇ ಬಿಡುಗಡೆ ಮಾಡಬೇಕೆಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಗುರುವಾರ ಒತ್ತಾಯಿಸಿದ್ದಾರೆ. ಉತ್ತರ ಪ್ರದೇಶದ ಆಗ್ರಾದ ರಾಜಾ ಬಲ್ವಂತ್ ಸಿಂಗ್ ಮ್ಯಾನೇಜ್ಮೆಂಟ್ ಟೆಕ್ನಿಕಲ್ ಕ್ಯಾಂಪಸ್ನ ವಿದ್ಯಾರ್ಥಿಗಳ ವಿರುದ್ಧ ಜಗದೀಶ್ಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ ನಂತರ ಬುಧವಾರ ಸಂಜೆ […]
ದೇಶದಲ್ಲಿ ತೀವ್ರವಾಗಿ ಆಹಾರ ಬಿಕ್ಕಟ್ಟು ಎದುರಿಸುವಂತಾಗಿದ್ದು, ಜನರು 2025ರವರೆಗೆ ಕಡಿಮೆ ಪ್ರಮಾಣದಲ್ಲಿ ಆಹಾರವನ್ನು ಸೇವಿಸುವಂತೆ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್ ಉನ್ ಮನವಿ ಮಾಡಿಕೊಂಡಿರುವುದಾಗಿ ವರದಿ ತಿಳಿಸಿದೆ.ಉತ್ತರಕೊರಿಯಾದ ಸರ್ವಾಧಿಕಾರಿ ಕಿಮ್ ಕಠಿಣ ಮತ್ತು ವಿಲಕ್ಷಣ ಆದೇಶಗಳನ್ನು ಹೊರಡಿಸುವ ಮೂಲಕ ಕುಖ್ಯಾತಿ ಗಳಿಸಿದ್ದು, ಇದೀಗ ಅಂತಹ ಮತ್ತೊಂದು ಹೊಸ ಆದೇಶವನ್ನು ಹೊರಡಿಸಿರುವುದಾಗಿ ವಿವರಿಸಿದೆ.ದೇಶದಲ್ಲಿನ ಆಹಾರ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಅಧಿಕಾರಿಗಳು ಕೃಷಿ ಉತ್ಪಾದನೆಯನ್ನು ಹೆಚ್ಚಳ ಮಾಡಲು ಮಾರ್ಗೋಪಾಯ ಕಂಡುಹಿಡಿಯಬೇಕೆಂದು ಕಿಮ್ ಮನವಿ […]
ದರ್ಶನ್ ಮತ್ತು ಸುದೀಪ್ ಕನ್ನಡ ಚಿತ್ರರಂಗದ ಎರಡು ದಿಕ್ಕುಗಳಂತಾಗಿಬಿಟ್ಟಿದ್ದರು. ಇನ್ನೆಂದೂ ಜೊತೆ ಸೇರಲಾರರು ಎಂದೇ ಎಲ್ಲರೂ ಭಾವಿಸಿದ್ರು. ಆದರೆ ಈ ಶೀಥಲ ಸಮರಕ್ಕೆ ಅಂತ್ಯ ಹಾಡುವ ಬಹಿರಂಗ ಸೂಚನೆಯನ್ನು ಸುದೀಪ್ ನೀಡಿದ್ದಾರೆ. ”ದರ್ಶನ್ ಸದಾ ನನ್ನ ಗೆಳೆಯನೇ” ಎಂದಿರುವ ಸುದೀಪ್ ಆ ಮೂಲಕ ತಾವೊಬ್ಬ ವಿಶಾಲ ಹೃದಯಿ ವ್ಯಕ್ತಿ ಎಂಬುದನ್ನೂ ಜಾಹೀರು ಮಾಡಿದ್ದಾರೆ.ಜೀ ಕುಟುಂಬ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸುದೀಪ್ಗೆ ನಿರೂಪಕರು ದರ್ಶನ್ ಹಾಗೂ ಸುದೀಪ್ ಒಟ್ಟಿಗಿರುವ ಚಿತ್ರವನ್ನು ತೋರಿಸಿ […]
ಭಾರತದಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ದೊರೆಯುವ ಅತ್ಯುನ್ನತ ಪ್ರಶಸ್ತಿಯಾದ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಗೆ 11 ಕ್ರೀಡಾಪಟುಗಳ ಹೆಸರನ್ನು ಶಿಫಾರಸು ಮಾಡಲಾಗಿದೆ. ಈ ಬಾರಿ ಟೋಕಿಯೋದಲ್ಲಿ ನಡೆದ ಒಲಿಂಪಿಕ್ಸ್ನಲ್ಲಿ ಚಿನ್ನದ ಪದಕ ಗೆದ್ದ ಭಾರತೀಯ ಕ್ರೀಡಾಪಟು ನೀರಜ್ ಚೋಪ್ರ ಸೇರಿದಂತೆ 11 ಕ್ರೀಡಾಪಟುಗಳ ಹೆಸರು ಈ ಪಟ್ಟಿಯಲ್ಲಿದೆ. ಇನ್ನು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಗೆ ಭಾರತದ ಹಿರಿಯ ಕ್ರಿಕೆಟ್ ಆಟಗಾರ್ತಿ […]
ಸ್ಯಾಂಡಲ್ವುಡ್ ನಟ ಶಿವರಾಜ್ ಕುಮಾರ್ ಅಭಿನಯದ ಬಹುನಿರೀಕ್ಷಿತ ‘ಭಜರಂಗಿ 2′ ಚಿತ್ರ ಸಖತ್ ಸದ್ದು ಮಾಡುತ್ತಿದೆ. ಬಿಡುಗಡೆಗೂ ಮುನ್ನವೇ ಟ್ವಿಟರ್ನಲ್ಲಿ Bhajarangi 2 ಹ್ಯಾಷ್ ಟ್ಯಾಗ್ ಟ್ರೆಂಡ್ ಆಗಿದೆ. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ಭಜರಂಗಿ 2′ ಚಿತ್ರ ಬಿಡುಗಡೆಗೂ ಮುನ್ನವೇ ಬುದೊಡ್ಡ ಕ್ರೇಜ್ ಹುಟ್ಟುಹಾಕಿದೆ. ಅಲ್ಲದೇ ಈ ಚಿತ್ರದ ಬಗ್ಗೆ ಅಭಿಮಾನಿಗಳಲ್ಲಿ ಬಹುದೊಡ್ಡ ನಿರೀಕ್ಷೆ ಇದ್ದು, ಅದಕ್ಕೆ ಸಾಕ್ಷಿ ಎಂಬಂತೆ ಟ್ವಿಟರ್ನಲ್ಲಿ ಭಾರತದ ಮಟ್ಟದಲ್ಲಿ Bhajarangi 2 ಹ್ಯಾಷ್ […]
ದೇಶಪಾಂಡೆ ಪ್ರತಿಷ್ಠಾನವು ಸ್ಥಳೀಯ ಸಣ್ಣ ಉದ್ದಿಮೆದಾರರಿಗಾಗಿ “ಮೆಗಾ ಉದ್ಯಮಿ ಸಂತೆ’ಯನ್ನು ಆಯೋಜಿಸಲಾಗಿದೆ. ಎಂದು ದೇಶಪಾಂಡೆ ಫೌಂಡೇಷನ್ ಪ್ರೊಜೆಕ್ಟ್ ಮ್ಯಾನೇಜರ್ ವೀರಯ್ಯ ಹಿರೇಮಠ ಹೇಳಿದರು. ಇಂದು ಬೆಳಗಾವಿ ನಗರದ ಖಾಸಗಿ ಹೊಟೇಲ್ ನಲ್ಲಿ ಮಾತನಾಡಿದ ಅವರು ದೇಶಪಾಂಡೆ ಪ್ರತಿಷ್ಠಾನದ, ಸಣ್ಣ ಉದ್ಯಮಿದಾರರ ಅಭಿವೃದ್ಧಿ ಕಾರ್ಯಕ್ರಮವು ಇದೇ ಅಕ್ಟೋಬರ್ 29 ರಂದು ಬೆಳಗಾವಿಯಲ್ಲಿ ತಿಲಕವಾಡಿಯಲ್ಲಿರುವ ಭಾಗ್ಯನಗರದ ರಾಮನಾಥ ಮಂಗಲ ಕಾರ್ಯಾಲಯದಲ್ಲಿ ಆಯೋಜಿಸಲಾಗಿದೆ. ದೇಶದ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಸ್ಥಳೀಯ ಸಣ್ಣ ಉದ್ಯಮಿದಾರರಿಗಾಗಿ “ಮೆಗಾ ಉದ್ಯಮಿ […]