ಸಿಐಟಿಯು ಪದಾಧಿಕಾರಿಗಳಿಂದ ಮಧುಗಿರಿ ತಾಲ್ಲೂಕು ಪಂಚಾಯಿತಿ ಸಭಾಂಗಣದ ಮುಂದೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ಕೋವಿಡ್ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡುತ್ತಿರುವ ಕೊರೊನಾ ವಾರಿಯರ್ಸ್ ಗಳು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ದೇಶವ್ಯಾಪಿಯಿಂದ ಕರೆದಿದ್ದ ಪ್ರತಿಭಟನೆಗೆ ಮಧುಗಿರಿ ಪದಾಧಿಕಾರಿಗಳು ಬೆಂಬಲ ಸೂಚಿಸಿದರು. ಪ್ರತಿಭಟನೆಯಲ್ಲಿ ಸಿಐಟಿಯು ಜಿಲ್ಲಾಧ್ಯಕ್ಷೆ ಕಮಲ, ತಾಲ್ಲೂಕು ಅಧ್ಯಕ್ಷೆ ಪಾರ್ವತಮ್ಮ , ಸಂಚಾಲಕಿ ಸುಕನ್ಯಾ, ಭಾರತಿ ಇನ್ನೂ ಹಲವರು ಭಾಗಿಯಾಗಿದ್ದರು.