ಮಧುಗಿರಿ ತಾಲ್ಲೂಕು ಕಚೇರಿಯಲ್ಲಿ ಸಾಲ ನೀಡಿರುವ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳ ಸಭೆ ನಡೆಸಿ ಮಾತನಾಡಿದ ತಹಸೀಲ್ದಾರ್ ಡಾ. ಜಿ. ವಿಶ್ವನಾಥ್ ಅವರು ಇತ್ತೀಚಿಗೆ ಕೋವಿಡ್ 19 ಹರಡುತ್ತಿರುವ ಸಂದರ್ಭದಲ್ಲಿ ಲಾಕ್ ಡೌನ್ ಮಾಡಿರುವ ಹಿನ್ನಲೆಯಲ್ಲಿ ಮಧ್ಯಮ ವರ್ಗದವರು ಹಾಗೂ ಬಡವರು ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಇಂತಹ ಸಮಯದಲ್ಲಿ ಸಾಲ ಮರುಪಾವತಿಸಲು ಬಲವಂತ ಮಾಡಿದರೆ ಅವರ ಪರಿಸ್ಥಿತಿ ಏನಾಗಬೇಕು. ಆದ್ದರಿಂದ ಸಂಘ-ಸಂಸ್ಥೆಗಳು ಇವರ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ಆರ್ಥಿಕ ಸಂಕಷ್ಟದಲ್ಲಿರುವ ಅವರಿಗೆ ಸಹಾಯ […]