ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಜಿಎಸ್‌ಟಿ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ೨೦೧೯ರ ಡಿಸೆಂಬರ್‌ನಿAದ ೨೦೨೦ರ ಫೆಬ್ರುವರಿವರೆಗೆ ರಾಜ್ಯಕ್ಕೆ ಉಂಟಾದ ಜಿಎಸ್‌ಟಿ ನಷ್ಟ ಪರಿಹಾರವಾಗಿ ಒಟ್ಟು ೪,೩೧೪ಕೋಟಿ ರೂಪಾಯಿಯನ್ನು ರಿಲೀಸ್ ಮಾಡಲಾಗಿದೆ. ಈ ಹಿನ್ನಲೆ ಸಿಎಂ ಬಿ.ಎಸ್ ಯಡಿಯೂರಪ್ಪ ಪ್ರಧಾನಿ ಮೋದಿಗೆ ಧನ್ಯವಾದ ತಿಳಿಸಿದ್ದಾರೆ. ಕರ್ನಾಟಕ ಜನತೆಯ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕೃತಜ್ಞತೆ ಅರ್ಪಿಸುವುದಾಗಿ ಟ್ವೀಟ್ ಮಾಡಿದ್ದಾರೆ.

Advertisement

Wordpress Social Share Plugin powered by Ultimatelysocial