ಜಿಲ್ಲೆಯ ಕಲ್ಯಾಣದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ಇಬ್ಬರು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಜಿನೇಶ್ ಠಕ್ಕರ್ ಎಂಬುವವರು ಹತ್ಯೆಗೀಡಾದವರು. ವ್ಯವಹಾರಕ್ಕೆ ಸಂಬAಧಿಸಿದ ದ್ವೇಷವೇ ಈ ಕೊಲೆಗೆ ಕಾರಣ ಇರಬಹುದು ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ವಸತಿ ಸಮುಚ್ಚಯದ ಬಳಿ ದುಷ್ಕರ್ಮಿಗಳು ಗುಂಡಿಕ್ಕಿದ್ದಾರೆ. ಠಕ್ಕರ್ ಅವರ ದೇಹದಲ್ಲಿ ನಾಲ್ಕು ಬುಲೆಟ್ಗಳು ಹೊಕ್ಕಿದ್ದು, ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ ಎಂದೂ ಪೊಲೀಸರು ತಿಳಿಸಿದ್ದಾರೆ.