ಸತತ 2 ದಿನಗಳಿಂದ ಸ್ಥಿರತೆ ಕಾಯ್ದುಕೊಂಡಿದ್ದ ಪೆಟ್ರೋಲ್, ಡೀಸೆಲ್ ಬೆಲೆ ಮತ್ತೆ ಏರಿಕೆ ಕಂಡಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ ಮತ್ತು ಲೀಟರ್ ಡೀಸೆಲ್ ದರದಲ್ಲಿ ಕ್ರಮವಾಗಿ 35 ಪೈಸೆ ಹೆಚ್ಚಳವಾಗಿದೆ.  ಇನ್ನು ಪೆಟ್ರೋಲ್ ಬೆಲೆಯೊಂದೇ ಅಲ್ಲ ಲೀಟರ್ ಡೀಸೆಲ್ ದರದವೂ ಸಹ 100ರ ಗಡಿ ದಾಟಿ ಮುನ್ನುಗ್ಗುತ್ತಿದೆ. ಇಂಧನ ದರ ಗರಿಷ್ಠ ಮಟ್ಟ ತಲುಪಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ Rs 111.70, ಡೀಸೆಲ್ Rs 102.60 ಆಗಿದೆ. […]

ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದ ಟ್ಯಾಕ್ಸಿ ನಿಲ್ದಾಣದಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, ಸ್ಫೋಟದಲ್ಲಿ ಆರು ನಾಗರಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಂಡಿಪೋರಾದ ಟ್ಯಾಕ್ಸಿ ಸ್ಟಾಂಡ್‌ನಲ್ಲಿ ನಿಂತಿದ್ದ ಟಾಟಾ ಸುಮೋ ಸ್ಫೋಟಗೊಂಡಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಫೋಟದ ರಭಸಕ್ಕೆ ಟಾಟಾ ಸುಮೋ ಅಕ್ಕಪಕ್ಕ ಇದ್ದ ವಾಹನಗಳು ಜಖಂಗೊಂಡಿದ್ದು, ಸ್ಫೋಟಕ್ಕೆ ಕಾರಣ ತಿಳಿದುಬಂದಿಲ್ಲ.   ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ : https://play.google.com/store/apps/details?id=com.speed.newskannada    

ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯ ಶಂಕರಪುರಂನಲ್ಲಿ ಪಟಾಕಿ ಅಂಗಡಿಯಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ, ದುರಂತದಲ್ಲಿ ಐವರು ಸಾವನ್ನಪ್ಪಿದ್ದು, ಹತ್ತು ಮಂದಿ ಗಾಯಗೊಂಡಿದ್ದಾರೆ. ದೊಡ್ಡ ಅಂಗಡಿಯಲ್ಲಿ ಪಟಾಕಿ ಸ್ಫೋಟಗೊಂಡು,  ಬೆಂಕಿ ಅಕ್ಕಪಕ್ಕದ ಅಂಗಡಿಗಳಿಗೂ ವ್ಯಾಪಿಸಿದೆ. ಪಟಾಕಿ ಅಂಗಡಿ ಬಳಿಯಿದ್ದ ಬೇಕರಿಯೊಂದಕ್ಕೂ ಬೆಂಕಿ ವ್ಯಾಪಿಸಿ ಭಯಂಕರ ಶಬ್ಧದೊಂದಿಗೆ ಸಿಲಿಂಡರ್ ಸಹ ಸ್ಫೋಟಗೊಂಡಿದೆ. ಸ್ಥಳದಲ್ಲಿ ಅಗ್ನಿಶಾಮಕ ದಳ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ಮುಂದುವರೆದಿದೆ.   ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ : […]

ರಾಜ್ಯದ ಹುಬ್ಬಳ್ಳಿ ಸೇರಿದಂತೆ ದೇಶದ 13 ವಿಮಾನ ನಿಲ್ದಾಣಗಳನ್ನು ಪ್ರಸಕ್ತ ಆರ್ಥಿಕ ವರ್ಷದ ಅಂತ್ಯದ ವೇಳೆಗೆ ಖಾಸಗೀಕರಣಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ರಾಷ್ಟ್ರೀಯ ಹಣಗಳಿಕೆ ಯೋಜನೆಯಡಿ ದೇಶದ ಏಳು ಸಣ್ಣ ಹಾಗೂ ಆರು ದೊಡ್ಡ ವಿಮಾನ ನಿಲ್ದಾಣಗಳನ್ನು 50 ವರ್ಷಕ್ಕೆ ಅವಧಿಗೆ ಖಾಸಗಿಯವರಿಗೆ ಗುತ್ತಿಗೆ ನೀಡಲು ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ಕೇಂದ್ರ ಸರ್ಕಾರದ ವಿಮಾನಯಾನ ಸಚಿವಲಾಯಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಮುಂದಿನ ನಾಲ್ಕು ವರ್ಷದಲ್ಲಿ 25 ವಿಮಾನ ನಿಲ್ದಾಣಗಳನ್ನು ಸಾರ್ವಜನಿಕ–ಖಾಸಗಿ ಪಾಲುದಾರಿಕೆಯಡಿ […]

2019 ನೇ ಸಾಲಿನ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಘೋಷಣೆಯಾಗಿ ಬಹಳ ದಿನಗಳು ಕಳೆದಿತ್ತು. ವಿಭಿನ್ನ ಕಥಾಹಂದರದ “ಅಕ್ಷಿ” , ಅತ್ಯುತ್ತಮ ಪ್ರಾದೇಶಿಕ ಚಿತ್ರ ಪ್ರಶಸ್ತಿ ಪಡೆದುಕೊಂಡಿತ್ತು. ಇತ್ತೀಚೆಗೆ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಿರ್ದೇಶಕ ಮನೋಜ್ ಕುಮಾರ್ ಹಾಗೂ ನಿರ್ಮಾಪಕ, ಸಂಗೀತ ನಿರ್ದೇಶಕ ಕಲಾದೇಗುಲ ಶ್ರೀನಿವಾಸ್ ಪ್ರಶಸ್ತಿ ಸ್ವೀಕರಿಸಿದರು.ತಮ್ಮ ಚಿತ್ರಕ್ಕೆ ರಾಷ್ಟ್ರೀಯ ಮನ್ನಣೆ ದೊರೆತಿರುವುದಕ್ಕೆ ಇಡೀ ತಂಡದಲ್ಲಿ ಸಂತಸ ಮನೆ ಮಾಡಿದೆ.   ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ […]

ಚುನಾವಣೆಗೆ ಸ್ಪರ್ಧೆ ಮಾಡೋದು ಖಚಿತ. ಆದ್ರೆ ಯಾವ ಕ್ಷೇತ್ರ ಮತ್ತು ಪಕ್ಷ ಅಂತ ಅಂತಿಮಗೊಂಡಿಲ್ಲ. ಶೀಘ್ರದಲ್ಲಿಯೇ ಈ ಕುರಿತು ಅಧಿಕೃತವಾಗಿ ತಿಳಿಸುತ್ತೇನೆ. ಜಿಲ್ಲೆಯ ಎಸ್ ಟಿ ಮೀಸಲು ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದೇನೆ….!!! ಚಿತ್ರದುರ್ಗ: ನಟ ಶಶಿಕುಮಾರ್ (Actor Shashikumar) ಮತ್ತೆ ರಾಜಕೀಯಕ್ಕೆ ಕಮ್ ಬ್ಯಾಕ್ ಮಾಡುವ ಸಾಧ್ಯತೆಗಳಿವೆ. ಮುಂದಿನ ವಿಧಾನಸಭಾ ಚುನಾವಣೆಗೆ (Assembly Election)  ಹದಿನೈದು ತಿಂಗಳು ಇರುವಾಗಲೇ ಮತ್ತೆ ತಮ್ಮ ಹಳೆ ಲಯಕ್ಕೆ ಮರಳಲು ಶಶಿಕುಮಾರ್ ತಯಾರಿ ನಡೆಸುತ್ತಿದ್ದಾರೆ. […]

ಶ್ರೀ ಕ್ಷೇತ್ರ ಧರ್ಮಸ್ಥಳ ಪವಿತ್ರ ಯಾತ್ರಾಸ್ಥಳವಿಂದು ಧಾರ್ಮಿಕ ಚೌಕಟ್ಟಿನ ಪರಿಧಿ ಮೀರಿ ಧರ್ಮದ ಪರಿಕಲ್ಪನೆಯನ್ನು ಮಾನವ ಧರ್ಮಕ್ಕೆ ವಿಸ್ತರಿಸುವ ಮೂಲಕ ಅನನ್ಯ ಸೇವಾ ದೀಕ್ಷೆಗಳಿಂದ ಜಗದ್ವಿಖ್ಯಾತವಾಗಿ ಬೆಳೆದಿದೆ ಎಂದಾದರೆ ಅದು ಧರ್ಮ ಸಾಮ್ರಾಜ್ಯದ ಸರ್ವಶಕ್ತ ಧರ್ಮತೇಜ ನಮ್ಮ ಪೂಜ್ಯ ಖಾವಂದರಿಂದ. ಧಾರ್ಮಿಕ ಕ್ಷೇತ್ರವೊಂದು ಭಕ್ತಿ ಆಲಯವಾಗಿ ಮಾತ್ರ ಬೆಳಗದೆ, ಸಕಲಕೋಟಿ ಜೀವರಾಶಿಗಳ ಆಶಯಕ್ಕೆ ಬದ್ಧವಾಗಿ, ಅಣು ಅಣುಗಳಲ್ಲೂ ದಾನ ಧರ್ಮದ ಚಿಂತನೆ ಮೊಳಗಿ ‘ಸರ್ವೆ ಜನಾಃ ಸುಖೀನೋ ಭವಂತು’ಎಂಬ ಜಗದೋದ್ಧಾರಕನ […]

ಬೆಂಗಳೂರು: ಶಾಲಾ-ಕಾಲೇಜು ವಿದ್ಯಾರ್ಥಿಗಳು  2021-22ನೇ ಸಾಲಿನ ಶಾಲಾ, ಕಾಲೇಜಿನ ಶುಲ್ಕ ರಸೀದಿ ಅಥವಾ ಗುರುತಿನ ಚೀಟಿಯೊಂದಿಗೆ ದಿನಾಂಕ 30-11-2021ರವರೆಗೆ ಬಿಎಂಟಿಸಿ ಬಸ್ಸಿನಲ್ಲಿ ( BMTC Bus ) ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಿದೆ. ಈ ಕುರಿತಂತೆ ಬಿಎಂಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಸರ್ಕಾರದ ನಿರ್ದೇಶನದಂತೆ 2021-22ನೇ ಶೈಕ್ಷಣಿಕ ಸಾಲಿನ ಶಾಲಾ-ಕಾಲೇಜುಗಳು ಪ್ರಾರಂಭ ಮಾಡಿದ್ದು, ಸಂಸ್ಥೆಯು ಸದರಿ ವಿದ್ಯಾರ್ಥಿಗಳ ( Student Bus Pass ) ಹಿತವನ್ನು ಗಮನದಲ್ಲಿಟ್ಟುಕೊಂಡು, ಸಂಸ್ಥೆಯ […]

ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ ಈಗಾಗಲೇ ಗೆದ್ದು ಬೀಗಿದ, ಬಾಕ್ಸಾಫೀಸ್ ನಲ್ಲಿ ಈಗಾಗಲೇ ಸುಲ್ತಾನ್ ಆಗಿದ್ದಾರೆ ಡಿ ಬಾಸ್, ಈ ಖುಷಿಯನ್ನು ತಮ್ಮ ಅಭಿಮಾನಿಗಳ ಜೊತೆ ಹಂಚಿಕೊಳ್ಳಲು  ರಾಬರ್ಟ್   ತಂಡ ಇದೀಗ ವಿಜಯಯಾತ್ರೆ ನಡೆಸೋಕೆ ಸಿದ್ಧತೆ ಮಾಡಿದೆ. ಇದೇ ಮಾರ್ಚ್ 29ರಂದು ವಿಜಯಯಾತ್ರೆ ಶುರುವಾಗಲಿದ್ದು ಏಪ್ರಿಲ್ 1ರ ವರೆಗೆ ನಡೆಯಲಿದೆ,ತುಮಕೂರು, ಚಿತ್ರದುರ್ಗ, ಹಾಗೂ ದಾವಣಗೆರೆ ಮಾರ್ಚ್ 29 ನೇ ತಾರೀಕು ಈ ತಂಡ ಅಭಿಮಾನಿಗಳ ಜೊತೆ ವಿಜಯಯಾತ್ರೆ ನಡೆಸಲಿದ್ದು , […]

ಸಿಸಿಬಿ ರಹಸ್ಯ ಕಾರ್ಯಾಚರಣೆಯಲ್ಲಿ ಹುಬ್ಬಳ್ಳಿಯ ಗೋಕುಲದ ವಿಮಾನ ನಿಲ್ದಾಣದ ಬಳಿ ಡ್ರಗ್ ಪೆಡ್ಲರ್ ಅಜಯ್ ರಾಮ್ ಮತ್ತು ವೆಂಕಟೇಶ್ ರಾವ್ ಹಾಗು ಉದ್ಯಮಿ ಪುತ್ರಿ ಶಿಮ್ರಾನ್ ಜಿತ್ ಕೌರ್ ರನ್ನು ಬಂಧನ ಮಾಡಲಾಗಿದೆ.   ಹುಬ್ಬಳ್ಳಿಯ ಪ್ರತಿಷ್ಟಿತ ಹೋಟೆಲ್ ಉದ್ಯಮಿಯ ಪುತ್ರಿ ಡ್ರಗ್ ಖರೀದಿಸುವಾಗ ರೆಡ್ ಹ್ಯಾಂಡ್ ಆಗಿ ಹುಬ್ಬಳ್ಳಿ ಮತ್ತು ಧಾರವಾಡದ ಸಿಸಿಬಿ ಪೊಲೀಸರಿಗೆ ಸಿಕ್ಕಿಹಾಕಿಕೊಂಡಿದ್ದಾರೆ. ಸಿಸಿಬಿ ರಹಸ್ಯ ಕಾರ್ಯಾಚರಣೆಯಲ್ಲಿ ಹುಬ್ಬಳ್ಳಿಯ ಗೋಕುಲದ ವಿಮಾನ ನಿಲ್ದಾಣದ ಬಳಿ ಡ್ರಗ್ […]

Advertisement

Wordpress Social Share Plugin powered by Ultimatelysocial