ತಿರುವನಂತಪುರ: ಕೋಯಿಕ್ಕೋಡ್‌ ಜಿಲ್ಲೆಯಲ್ಲಿ ವರದಿಯಾಗಿರುವ ನಿಪಾ ವೈರಾಣು ಸೋಂಕು ಹರಡುವಿಕೆ ನಿಯಂತ್ರಣದಲ್ಲಿದೆ. ಆದರೆ, ರಾಜ್ಯದಲ್ಲಿ ಆತಂಕ ಕೊನೆಗೊಂಡಿಲ್ಲ. ಸೋಂಕಿನ ಎರಡನೇ ಅಲೆಯ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದಾರೆ.   ಮಂಗಳವಾರ ಅಧಿಕಾರಿಗಳೊಂದಿಗೆ ನಡೆಸಿದ ಪರಿಶೀಲನಾ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿಪಾ ಭೀತಿ ಸಂಪೂರ್ಣವಾಗಿ ಮುಗಿದಿದೆ ಎಂದು ಹೇಳಲಾಗದು. ಆದರೆ, ಸೋಂಕು ಹೆಚ್ಚಿನ ಜನರಿಗೆ ಹರಡಿಲ್ಲದಿರುವುದು ಸಮಾಧಾನದ ಸಂಗತಿ ಎಂದು ಹೇಳಿದ್ದಾರೆ. […]

Advertisement

Wordpress Social Share Plugin powered by Ultimatelysocial