ದೇವದುರ್ಗ ಗ್ರಾಮೀಣ ಪ್ರದೇಶದ ಪ್ರತಿಯೊಬ್ಬ ಕೂಲಿಕಾರ್ಮಿಕರು ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಕೆಲಸ ಪಡೆಯುವ ನಿಟ್ಟಿನಲ್ಲಿ ಸಂಘಟಿತರಾಗಬೇಕು ಎಂದು ರೈತ ಸಂಘದ ದೇವದುರ್ಗ ತಾಲ್ಲೂಕು ಅಧ್ಯಕ್ಷ ನರಸಣ್ಣ ನಾಯಕ ಕೂಲಿಕಾರ್ಮಿಕರಿಗೆ ಸಲಹೆ ನೀಡಿದರು. ತಾಲ್ಲೂಕಿನ ರಾಮದುರ್ಗ ಪಂಚಾಯ್ತಿಗೆ ಬರುವ ಸುಂಕೇಶ್ವರಹಾಳ ಗ್ರಾಮದಲ್ಲಿ ನಡೆದ ಕೂಲಿಕಾರರ ಕೆಲಸದ ಸ್ಥಳಕ್ಕೆ ಭೇಟಿ ನೀಡಿ ಕೂಲಿ ಕಾರ್ಮಿಕರೊಂದಿಗೆ ಸಂವಾದ ನಡೆಸಿ ಮಾತನಾಡಿದರು.