ಡಿ.ಕೆ.ಶಿವಕುಮಾರ್ ನನ್ನ ಮಿತ್ರ ಅಲ್ಲ. ಒಂದು ಪಕ್ಷದ ಅಧ್ಯಕ್ಷ ಅಷ್ಟೇ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಅಫಜಲಪುರ ತಾಲೂಕಿನ ಸೊನ್ನ ಬ್ಯಾರೇಜ್ ವೀಕ್ಷಣೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷ ಬೇರೆ, ಅವರ ಪಕ್ಷ ಬೇರೆ. ಬರೀ ಟಿವಿಯಲ್ಲಿ ‘ಪ್ರತಿಜ್ಞಾ’ ಅಂತಾ ಅಧಿಕಾರ ಸ್ವೀಕರಿಸುತ್ತಿದ್ದಾರೆ. ಡಿಕೆಶಿ ಕಾರ್ಯಕ್ರಮಕ್ಕೆ ಮಹತ್ವ ಕೊಡಬೇಕಿಲ್ಲ ಎಂದರು. ಒಂದು ಮದುವೆ ಮಾಡಿಸಬೇಕಾದರೆ ಊಟ ಹಾಕಿಸುತ್ತೇವೆ. ನಮ್ಮವರು ಅಂತಾ ಎಲ್ಲರೂ ಊಟಕ್ಕೆ ಬರ್ತಾರಾ?. […]