ದೇಶದಲ್ಲಿ ಈ ಬಾರಿಯ ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರಕ್ಕೆ ಯಾವುದೇ ಕೊರತೆ ಇಲ್ಲ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ. ಸದಾನಂದ ಗೌಡ ಹೇಳಿದ್ದಾರೆ. ರಾಜ್ಯ ಸರ್ಕಾರಗಳ ಜೊತೆ ಸಮಾಲೋಚನೆ ನಡೆಸಿ, ಅಗತ್ಯ ಪ್ರಮಾಣದಷ್ಟು ರಸಗೊಬ್ಬರವನ್ನು ಈಗಾಗಲೇ ರಾಜ್ಯಗಳಿಗೆ ಪೂರೈಸಿ, ದಾಸ್ತಾನು ಮಾಡಲಾಗಿದೆ ಎಂದು ಅವರು ಹೇಳಿದರು. ಹೊಸದಿಲ್ಲಿಯಲ್ಲಿ ತಮ್ಮನ್ನು ಭೇಟಿ ಮಾಡಿದ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಅವರಿಗೆ ಕೇಂದ್ರ ಸಚಿವರು ಈ ಭರವಸೆ ನೀಡಿದರು. […]

Advertisement

Wordpress Social Share Plugin powered by Ultimatelysocial