ನವದೆಹಲಿ,ಸೆ.20-ತಮಿಳುನಾಡಿನವರು ಕಾವೇರಿ ನದಿ ನೀರನ್ನು ಕ್ರಿಮಿನಲ್ ಆಗಿ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಕೇಂದ್ರ ಕೃಷಿ ಮತ್ತು ರೈತಕಲ್ಯಾಣ ಸಚಿವ ಶೋಭಾ ಕರಂದ್ಲಾಜೆ ಗಂಭೀರ ಆರೋಪ ಮಾಡಿದ್ದಾರೆ. ದೆಹಲಿಯಲ್ಲಿಂದು ನಡೆದ ಸರ್ವಪಕ್ಷ ಸಂಸದರ ನಿಯೋಗದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ನೆಲ, ಜಲ, ಭಾಷೆ ವಿಷಯದಲ್ಲಿ ರಾಜಕೀಯ ಮಾಡುವುದಿಲ್ಲ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಾವೆಲ್ಲಾ ಭಾಗವಹಿಸಿದ್ದೇವೆ ಎಂದರು. ಚುನಾವಣೆ ಸಂದರ್ಭದಲ್ಲಿ ರಾಜಕೀಯ ಮಾಡಬಹುದು. ನಾಡಿನ ಹಿತದ ವಿಷಯ […]