ಉತ್ತರ ಪ್ರದೇಶದಲ್ಲಿ ನಡೆದ ಘಟನೆ ಮತ್ತು ರೈತರ ಕುಟುಂಬದವರಿಗೆ ಸಾಂತ್ವನ ಹೇಳಲು ಹೋದ ಕಾಂಗ್ರೆಸ್ ಪಕ್ಷದ ನಾಯಕಿ ಪ್ರಿಯಾಂಕ ಗಾಂಧಿ ಬಂಧನ ಖಂಡಿಸಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಿಂದ ರಾಜಭವನದವರೆಗೆ ಪಂಜಿನ ಮೆರವಣಿಗೆ ನಡೆಸಲು ಮುಂದಾದ ಕಾಂಗ್ರೆಸ್ ನಾಯಕರನ್ನು ಇಂಡಿಯಾನ್ ಎಕ್ಸ್ ಪ್ರೆಸ್ ವೃತ್ತದ ಬಳಿ ಪೊಲೀಸರು ತಡೆದು ಮೆರವಣಿಗೆಯಲ್ಲಿದ್ದ ಕೈ ನಾಯಕರನ್ನು ವಶಪಡಿಸಿಕೊಂಡಿದ್ದಾರೆ. ಉತ್ತರಪ್ರದೇಶದಲ್ಲಿ ರೈತರ ಮೇಲೆ ನಡೆದ ಹಿಂಸಾಚಾರವನ್ನು ಖಂಡಿಸಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದವರು ಪ್ರತಿಭಟನೆ ಜಾಥಗಳನ್ನು ನಡೆಸುತ್ತಿದ್ದಾರೆ..ಪ್ರತಿಭಟನೆಯಲ್ಲಿ […]