ಇಂದಿನಿಂದ ಕಾಂಗ್ರೆಸ್ ನಾಯಕರ ಮೇಕೆದಾಟು ಪಾದಯಾತ್ರೆ ಆರಂಭಗೊಂಡಿದ್ದು. ನಗಾರಿ ಬಾರಿಸೋ ಮೂಲಕ ಆರಂಭಗೊಂಡಿರುವಂತ ಮೇಕೆದಾಟು ಪಾದಯಾತ್ರೆ ಹೆಗ್ಗನೂರು ತಲುಪಿದೆ. ಇದೇ ಸಂದರ್ಭದಲ್ಲಿ ಪಾದಯಾತ್ರೆಯಲ್ಲಿ ತೊಡಿಗಿರುವಂತ ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ಧರಾಮಯ್ಯ ಅವರಿಗೆ ಜ್ವರ ಕಾಣಿಸಿಕೊಂಡಿದೆ. ಹೀಗಾಗಿ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿರೋದಾಗಿ ತಿಳಿದಿದೇ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೆಸ್ ಪಕ್ಷದಿಂದ ಪಾದಯಾತ್ರೆಯನ್ನು ನಡೆಸಲಾಗುತ್ತಿದೆ. ರಾಮನಗರದ ಕನಕಪುರದ ಸಂಗಮ ಕ್ಷೇತ್ರದಿಂದ ಆರಂಭವಾದಂತ ಪಾದಯಾತ್ರೆ, ಈಗ ಹೆಗ್ಗನೂರು ತಲುಪಿದೆ. […]
#siddaramaiah
ಸತ್ಯ ಇರುವುದಾದರೆ ಜನತಾ ನ್ಯಾಯಾಲಯದ ಮುಂದೆ ವೇದಿಕೆಯಲ್ಲಿ ಚರ್ಚೆ ಮಾಡುವುದಕ್ಕೆ ಭಯವೇಕೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಸವಾಜ್ ಬೊಮಾಯಿ ಅವರನ್ನು ಪ್ರಶ್ನಿಸಿದ್ದಾರೆ.ನಾನು ಅಭಿವೃದ್ಧಿ ಬಗ್ಗೆ ಚರ್ಚೆ ಮಾಡುವುದಕ್ಕೆ ಬೊಮ್ಮಾಯಿಯವರಿಗೆ ಸವಾಲು ಹಾಕಿದ್ದೆ. ಆದರೆ ಅವರು ವಿಧಾನಸಭೆಯಲ್ಲಿ ಚರ್ಚೆ ಮಾಡೋಣ ಅನ್ನುತ್ತಾರೆ. ಅವರು ಹೇಳಿದ್ದು ಸತ್ಯ ಇರುವುದಾದರೆ ಜನತಾ ನ್ಯಾಯಾಲಯದ ಮುಂದೆ ವೇದಿಕೆಯಲ್ಲಿ ಚರ್ಚೆ ಮಾಡೋಕೆ ಏಕೆ ಭಯ ಎಂದು ಪ್ರಶ್ನಿಸಿದರು.ಬಿಜೆಪಿಯವರಿಗೆ ದುಡ್ಡು ಹಂಚುವುದೇ ಕೆಲಸ. […]
ತನ್ನ ಅಂತ್ಯಯಾತ್ರೆಯಲ್ಲಿ ಸಿದ್ದರಾಮಯ್ಯ ಆಗಮಿಸಬೇಕು ಎಂದು ಆತ್ಮಹತ್ಯೆ ಮಾಡಿಕೊಂಡಿದ್ದ ಅಭಿಮಾನಿಯ ಅಂತಿಮ ದರ್ಶನವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಪಡೆದಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಕೋಡಿದೊಡ್ಡಿ ಗ್ರಾಮಕ್ಕೆ ತೆರಳಿ ಅಭಿಮಾನಿಗೆ ಅಂತಿಮ ನಮನ ಸಲ್ಲಿಸಿ ಅಂತ್ಯಕ್ರಿಯೆಯಲ್ಲಿ ಸಿದ್ದರಾಮಯ್ಯ ಭಾಗವಹಿಸಿದ್ದಾರೆ. ಬಳಿಕ ಮಾತನಾಡಿದ ಅವರು, ಡೆತ್ ನೋಟಲ್ಲಿ ಅಂತ್ಯಕ್ರಿಯೆಗೆ ಸಿದ್ದರಾಮಯ್ಯ ಬರಬೇಕು ಅಂತಾ ಬರೆದಿದ್ದಾನೆ. ನನಗೆ ಅವನ ಪರಿಚಯ ಅಷ್ಟೊಂದಿಲ್ಲ. ಅದರೂ ನನ್ನ ಅಭಿಮಾನಿಯಾಗಿದ್ದಾನೆ. ಎಲ್ಲಕ್ಕಿಂತ ಮುಖ್ಯವಾಗಿ ಮನುಷ್ಯತ್ವ ಮುಖ್ಯ. ನನಗೆ ಗೊತ್ತಿಲ್ಲದೆ ದೊಡ್ಡ […]
‘ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ನಟ ಯಶ್ ನನ್ನ ಅಂತ್ಯಕ್ರಿಯೆಗೆ ಬರಬೇಕು’ ಎಂದು ಯುವಕನೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಕೋಡಿದೊಡ್ಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಯುವಕ ರಾಮಕೃಷ್ಣ ಎಂಬಾತ ಡೆತ್ ನೋಟ್ ಬರೆದಿಟ್ಟು ಅತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಡೆತ್ ನೋಟ್ ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ನಟ ಯಶ್ ನನ್ನ ಅಂತ್ಯಕ್ರಿಯೆಗೆ ಬರಬೇಕು ಎಂದು ಮನವಿ […]
ಪ್ರತಿ ಪಕ್ಷ ನಾಯಕ ಸಿದ್ದರಾಮಯ್ಯ ಅವರು ಬಿಜೆಪಿಗೆ ಬಂದರೂ ಅಚ್ಚರಿಪಡಬೇಕಿಲ್ಲ, ರಾಜಕೀಯದಲ್ಲಿ ಯಾವುದೂ ಅಸಾಧ್ಯವಲ್ಲ ಎಂದೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ. ರವಿ ಮಾರ್ಮಿಕವಾಗಿ ನುಡಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವಿನ ಶೀತಲ ಸಮರ ಯಾವ ಘಟ್ಟಕ್ಕೆ ಬೇಕಾದರೂ ತಲುಪಬಹುದು ಎಂದರು. ಬಿ.ಎಸ್. ಯಡಿಯೂರಪ್ಪ, ಎಚ್.ಡಿ.ದೇವೇಗೌಡ ಅವರಂತೆಯೇ ಸಿದ್ದರಾಮಯ್ಯ ಕೂಡಾ ಜನನಾಯಕ. ಅವರು ಇರಬೇಕಾದ ಪಕ್ಷ ಬಿಜೆಪಿ ಎಂದರು. ಅವರು ಬಿಜೆಪಿ ಹೊಗಳಲು ಸಾಧ್ಯವಿಲ್ಲ. ಬಿಜೆಪಿಗೆ […]
ಪಕ್ಷಾಂತರ ವಿಷಯದಲ್ಲಿ ಸ್ಪೀಕರ್ ನಿರ್ಣಯವೇ ಅಂತಿಮವಾಗಬೇಕು. ಈ ವಿಷಯದಲ್ಲಿ ಸ್ಪೀಕರಿಗೆ ಸಂಪೂರ್ಣ ಅಧಿಕಾರ ಕೊಡಬೇಕು. ಜೊತೆಗೆ ಇಂತಹ ಕೇಸ್ಗಳು ಮೂರು ತಿಂಗಳ ಒಳಗೆ ಇತ್ಯರ್ಥ ಆಗಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ. ಸಂವಿಧಾನದ ಪರಿಚ್ಚೇದ ೧೦ಕ್ಕೆ ತಿದ್ದುಪಡಿ ತರುವ ವಿಚಾರವಾಗಿ ವಿಧಾನಸೌಧದಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ನೇತೃತ್ವದಲ್ಲಿ ವಿಶೇಷ ಚರ್ಚಾ ಸಭೆ ನಡೆಯಿತು. ಸಭೆ ಬಳಿಕ ಮಾತನಾಡಿ ನಮ್ಮ ಅಭಿಪ್ರಾಯವನ್ನ ಸ್ಪೀಕರ್ಗೆ ಹೇಳಿದ್ದೇವೆ. ಯಾರೇ ಪಕ್ಷಾಂತರಿಗಳು ಆದರೂ […]