ಮೇಕೆದಾಟು ಮಾಡ್ಲಿ, ಬಿಡ್ಲಿ. ನನ್ನ ವಿರುದ್ಧ ಏನೆಲ್ಲ ಪ್ರಯತ್ನ ನಡೆಯಬೇಕೋ ನಡೆಯುತ್ತಿದೆ. ಒಂದು ದಿನ ಕೇಸ್ ಹಾಕಬಹುದಿತ್ತು. ದಿನಾ ಕೇಸ್ ಹಾಕುವ ಪ್ರಮೇಯ ಏನಿತ್ತು. ನಮ್ಮ ಮೇಲೆ ಅಷ್ಟೇ ಯಾಕೆ ಕೇಸ್. ಬಿಜೆಪಿ ಅವರ ಮೇಲೆ ಕೇಸ್ ಹಾಕಿಲ್ಲ. ಬಹಳ ಅಂದ್ರೆ ಜೈಲಿಗೆ ಹಾಕಬಹುದು, ಖುಷಿ ಪಡಬಹುದು, ಪಡಲಿ ಬಿಡಿ ಎಂದರು.ಮೇಕೆದಾಟು ಯೋಜನೆ ಬದಲು, ಬೆಂಗಳೂರಿನಲ್ಲಿ ಕೆರೆ ಅಭಿವೃದ್ಧಿ ಮಾಡುವ ವಿಚಾರವಾಗಿ ಬಗ್ಗೆ ಸರ್ಕಾರವೇ ಒಂದು ಸಮಿತಿ ರಚನೆ ಮಾಡಲಿ. […]

ಕಾಂಗ್ರೆಸ್‌ನ ಮೇಕೆದಾಟು ಪಾದಯಾತ್ರೆ   ಸಮಯದಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ 55 ಪೊಲೀಸ್ ಸಿಬ್ಬಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ವರದಿಗಳಿಂದ ತಿಳಿದಿದೆ. ಮೂಲಗಳ ಪ್ರಕಾರ, ಕೋಲಾರದ 110 ಪೊಲೀಸರ ಪೈಕಿ ಈ ವರೆಗೂ 43 ಮಂದಿಗೆ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 25 ಮಂದಿಗೆ ಸೋಂಕು ತಗುಲಿದೆ ಎಂದು ತಿಳಿದುಬಂದಿದೆ. ಕೆಜಿಎಫ್‌ನಿಂದ ಕರ್ತವ್ಯದಲ್ಲಿದ್ದ 110 ಸಿಬ್ಬಂದಿಯಲ್ಲಿ 60 ಸಿಬ್ಬಂದಿಯನ್ನು ಪರೀಕ್ಷೆ ನಡೆಸಲಾಗಿದೆ. ಇದರಲ್ಲಿ 20 ಮಂದಿಗೆ ಪಾಸಿಟಿವ್ ಬಂದಿದೆ. ಇನ್ನು ಚಿಕ್ಕಬಳ್ಳಾಪುರದಲ್ಲಿ ಪರೀಕ್ಷೆಗೊಳಪಟ್ಟಿದ್ದ […]

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ  ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಮೂರನೇ ಅಲೆ ನಿಯಂತ್ರಿಸಲು ರಾಜ್ಯ ಸರ್ಕಾರ ಕಠಿಣ ನಿಯಮಗಳನ್ನು ಜಾರಿಗೆ ತಂದಿದೆ. ಆದರು ಕೂಡ ಕಾಂಗ್ರೆಸ್  ನಾಯಕರು ಕೊರೊನಾ ನಿಮಯಗಳನ್ನು ಗಾಳಿಗೆ ತೂರಿ ಮೇಕೆದಾಟು ಯೋಜನೆ ಆಗ್ರಹಿಸಿ ಪಾದಯಾತ್ರೆ ನಡೆಸಿದ್ದರು. ಈ ನಡುವೆ ಪಾದಯಾತ್ರೆಯಲ್ಲಿ ಪಾಲ್ಗೊಂಡ ಹಲವರಿಗೆ  ಕೊರೊನಾ ಪಾಸಿಟಿವ್​ ಬಂದಿತ್ತು. ಹೀಗಾಗಿ ಕಾಂಗ್ರೆಸ್ ಪಾದಯಾತ್ರೆ ನಿಲ್ಲಿಸುವಂತೆ ಹೈಕೋರ್ಟ್​ ತಿಳಿಸಿದೆ. ಸದ್ಯ ಮೇಕೆದಾಟು ಪಾದಯಾತ್ರೆ ಪ್ರಶ್ನಿಸಿದ್ದ ಪಿಐಎಲ್ ವಿಚಾರಣೆ ನಡೆಸಿದ್ದು, […]

  ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಹಾಗೂ ನಿರ್ವಹಣೆಗೆ ಅಳವಡಿಸಿರುವ ಟೆಸ್ಟಿಂಗ್, ಟ್ರಾಕಿಂಗ್, ಟ್ರೇಸಿಂಗ್, ಟ್ರಯಾಜಿಂಗ್ ಮತ್ತು ಟೆಕ್ನಾಲಜಿ ಬಳಕೆಯ 5 ಟಿ ಸೂತ್ರವನ್ನು ಪ್ರಧಾನಮಂತ್ರಿಯವರು ಶ್ಲಾಘಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ಭಾಗವಹಿಸಿದ ನಂತರ ಪತ್ರಿಕಾ ಹೇಳಿಕೆ ನೀಡಿರುವ ಮುಖ್ಯಮಂತ್ರಿಗಳು, ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಹಾಗೂ ನಿರ್ವಹಣೆಗಾಗಿ ಕೈಗೊಂಡಿರುವ ಕ್ರಮಗಳನ್ನು […]

  ಈಗಾಗಲೇ ಎರಡು ಬಾರಿ ಲಾಕ್ ಡೌನ್ ಹೇರಿಕೆ ಮಾಡಲಾಗಿದೆ. ಆಗ ಜನರಿಗೆ ಆಗುವ ಸಮಸ್ಯೆಗಳ ಬಗ್ಗೆ ನಮಗೆ ಅರಿವಾಗಿದೆ, ಈಗಾಗಲೇ ನಿನ್ನೆ ಪ್ರಧಾನ ಮಂತ್ರಿ ಮೋದಿಯವರು ಮುಖ್ಯಮಂತ್ರಿಗಳ ಜೊತೆ ಸಂವಾದ ಮಾಡುವ ಸಂದರ್ಭದಲ್ಲಿ ಜನರಿಗೆ ಆರ್ಥಿಕ ನಷ್ಟವಾಗದ ರೀತಿಯಲ್ಲಿ ಜಾಗೃತೆ ವಹಿಸಬೇಕೆಂದು ಹೇಳಿದ್ದಾರೆ, ಆ ನಿಟ್ಟಿನಲ್ಲಿ ಕೊರೋನಾ ನಿಯಂತ್ರಣಕ್ಕೆ ಕ್ರಮಕೈಗೊಳ್ಳಿ ಎಂದು ಸಲಹೆ ನೀಡಿದ್ದಾರೆ. ಕೊರೋನಾ ನಿಯಂತ್ರಣಕ್ಕೆ ಜನರೇ ಸ್ವಯಂ ನಿಯಂತ್ರಣ ಮಾಡಿಕೊಂಡು ಇನ್ನು ಒಂದೂವರೆ ತಿಂಗಳು ಸಹಕರಿಸಿದರೆ […]

ಲಸಿಕೆ ಪಡೆಯದವರ ಮೇಲಷ್ಟೇ ಓಮಿಕ್ರಾನ್ ಪರಿಣಾಮ ಬೀರುತ್ತಿದೆ. ಇಡೀ ವಿಶ್ವದಲ್ಲಿ ಗಮನಿಸಿರುವ ಅಂಶ ಇದಾಗಿದೆ. ಎರಡನೇ ಡೋಸ್ ಪಡೆಯದವರು 45ಲಕ್ಷ ಜನ ಇದ್ದಾರೆ.ಇವರಿಗೆ ಸಲಹೆ ನೀಡುವುದೇನೆಂದರೆ, ಶೀಘ್ರವೇ ಲಸಿಕೆ ಪಡೆಯಿರಿ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್‌ ಹೇಳಿದರು. ಮಕ್ಕಳಿಗೆ ಲಸಿಕೆ ಕೊಟ್ಟಿಲ್ಲ, ಅವರಲ್ಲೂ ಕಾಣಿಸಿಕೊಳ್ತಿದೆ.15-18 ವರ್ಷದ ಮಕ್ಕಳಿಗೆ ಲಸಿಕೆ ಕೊಡಲು ಆರಂಭಿಸಿದ್ದೇವೆ. 0-15 ವರ್ಷದವರು ಲಸಿಕೆ ಪಡೆಯದ ಮಕ್ಕಳ ಮೇಲೆ ಹೆಚ್ಚು ಗಮನ ವಹಿಸಬೇಕಿದೆ. ಮೊದಲ ಎರಡು […]

ಇಗಾಗಲೇ ಪುನೀತ್‌  ನಮ್ಮನ್ನಗಲಿ ಎರೆಡು ತಿಂಗಳಾಗಿದೆ .ಅಪ್ಪು ಅವರ ಕಡೆಯ ಸಿನಿಮಾ ‘ಜೇಮ್ಸ್​’  ಚಿತ್ರಮಂದಿರದಲ್ಲೇ ಬಿಡುಗಡೆ ಮಾಡುವುದಾಗಿ ನಿರ್ದೇಶಕ ಚೇತನ್​ ಭರವಸೆ ನೀಡಿದ್ದಾರೆ. ಇದರ ಜೊತೆಗೆ ಪವರ್​ ಸ್ಟಾರ್​ ಪುನೀತ್​ ರಾಜ್​ಕುಮಾರ್ ಅವರ ‘ಗಂಧದ ಗುಡಿ  ಕೂಡ ಚಿತ್ರಮಂದಿರದಲ್ಲೇ ತೆರೆ ಕಾಣಲಿದೆ. ಹೀಗಾಗಿ ಅಪ್ಪು ಅವರನ್ನು ಮತ್ತೆ ತೆರೆ ಮೇಲೆ ನೋಡಬಹುದಾಗಿದೆ ಎಂದು ಅವರ ಅಭಿಮಾನಿಗಳು ಖುಷಿಯಾಗಿದ್ದಾರೆ. ಈಗ ಅವರ ಕೊನೆಯ ಸಿನಿಮಾ ‘ಜೇಮ್ಸ್‌’ ಮೇಲೆ ಎಲ್ಲರ ಗಮನ ವಿದ್ದು. […]

ಭಾರತಕ್ಕೆ ಆಗಮಿಸುವ ಅಂತರಾಷ್ಟ್ರೀಯ ಪ್ರಯಾಣಿಕರಿಗೆ(International Travellers) ಇಂದಿನಿಂದ ಹೊಸ ನಿಯಮಗಳು ಜಾರಿಯಾಗಲಿವೆ. ಹೊಸ ನಿಯಮಗಳ (New Rules) ಪ್ರಕಾರ, ದೇಶದಲ್ಲಿನ ಕೋವಿಡ್ -19(COVID-19) ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ವಿದೇಶಿ ಪ್ರಯಾಣಿಕರು 7 ದಿನಗಳವರೆಗೆ ಕಡ್ಡಾಯವಾಗಿ ಕ್ವಾರಂಟೈನ್‌(Quarantine)ಗೆ ಒಳಗಾಗಬೇಕಾಗುತ್ತದೆ.ಭಾರತಕ್ಕೆ ಬರುವ ಅಂತರಾಷ್ಟ್ರೀಯ ಪ್ರಯಾಣಿಕರು ಕ್ವಾರಂಟೈನ್ ಮುಗಿದ 8 ನೇ ದಿನದಂದು ಆರ್‌ಟಿ-ಪಿಸಿಆರ್ ಪರೀಕ್ಷೆಯ ಅಗತ್ಯವಿದೆ ಎಂದು ಮಾರ್ಗಸೂಚಿಗಳಲ್ಲಿ ಉಲ್ಲೇಖಿಸಲಾಗಿದೆ. ಪರೀಕ್ಷೆಯು ನೆಗೆಟಿವ್​ ಬಂದರೆ, ಅವರು ಮುಂದಿನ 7 ದಿನಗಳವರೆಗೆ ತಮ್ಮ ಆರೋಗ್ಯವನ್ನು ಸ್ವಯಂ-ಮೇಲ್ವಿಚಾರಣೆ […]

  ಮುಂದಿನ ತಿಂಗಳು ನಡೆಯಲಿರುವ ಪಂಜಾಬ್‌ ವಿಧಾನಸಭೆ ಚುನಾವಣೆಗೆ ಆಮ್‌ ಅದ್ಮಿ ಪಕ್ಷ  ಹತ್ತು ಭರವಸೆಗಳನ್ನು ನೀಡಿದ್ದು, ಮಾದರಿ ಪಂಜಾಬ್‌ ನಿರ್ಮಾಣ ಮಾಡುವುದಾಗಿ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌ ಹೇಳಿದ್ದಾರೆ. ಮೊಹಾಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ  ಅವರು 10 ಅಂಶಗಳ ಯೋಜನೆಗಳ ಮೂಲಕ ಪಂಜಾಬ್ ಅನ್ನು ಮಾದರಿ ರಾಜ್ಯವನ್ನಾಗಿ ಪರಿವರ್ತನೆ ಮಾಡುತ್ತೇವೆ. ಅಧಿಕಾರಕ್ಕೆ ಬಂದರೆ ಸಮೃದ್ಧ ಹಾಗೂ ಅಭಿವೃದ್ಧಿ ಹೊಂದಿದ ಪಂಜಾಬ್ ಅನ್ನು ನಿರ್ಮಾಣ ಮಾಡುತ್ತೇವೆ ಎಂದು ಹೇಳಿದ್ದಾರೆ […]

ತಮಿಳು ನಟ ಸಿದ್ಧಾರ್ಥ್  ಆಗಾಗ ವಿವಾದಗಳನ್ನು ಮೈ ಮೇಲೆ ಎಳೆದುಕೊಂಡು ಸುದ್ದಿಯ್ಲಲಿರುತ್ತಾರೆ. ಈ ಬಾರಿ ಕೂಡ ಮಾಜಿ(Badminton Star) ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಗೆ( Saina Nehwal) ಪ್ರತಿಕ್ರಿಯಿಸಿದ ಸಿದ್ದಾರ್ಥ್ ಟ್ವೀಟ್ ಸದ್ಯ ವಿವಾದಕ್ಕೀಡಾಗಿದೆ ತಮಿಳು ನಟನ ವಿರುದ್ಧ ಮಹಿಳಾ ಆಯೋಗ ಆಕ್ರೋಶ ವ್ಯಕ್ತ ಪಡಿಸಿದೆ. ಹಲವು ರಾಜಕಾರಣಿಗಳು, ನಟ ನಟಿಯರು ಸಿದ್ಧಾರ್ಥ್ ಹೇಳಿಕೆ ಬಗ್ಗೆ ಕಿಡಿ ಕಾರಿದ್ದಾರೆ. ಬ್ಯಾಡ್ಮಿಂಟನ್ ಆಟಗಾರ್ತಿ, ಬಿಜೆಪಿ ಪಕ್ಷದ ನಾಯಕಿ ಸೈನಾ ನೆಹ್ವಾಲ್ […]

Advertisement

Wordpress Social Share Plugin powered by Ultimatelysocial