ಬೆಟಿಂಗ್ ಜಾಲದ ಶಂಕೆಯ ಮೇಲೆ ತಡೆಹಿಡಿಯಲಾಗಿದ್ದ ಅಹ್ಮದಾಬಾದ್ ಫ್ರಾಂಚೈಸಿ ಮಾಲೀಕರಿಗೆ ಕೊನೆಗೂ ಒಪ್ಪಿಗೆ ಮುದ್ರೆ ಸಿಕ್ಕಿದೆ. ಲಕ್ನೋ ಮತ್ತು ಅಹ್ಮದಾಬಾದ್ ಫ್ರಾಂಚೈಸಿಗಳಿಗೆ ಬಿಸಿಸಿಐ ಅಧಿಕೃತವಾಗಿ ಅನುಮೋದನೆ ನೀಡಿದೆ. ಇದರೊಂದಿಗೆ ಅಹಮದಾಬಾದ್ ಫ್ರಾಂಚೈಸಿಯ ಮಾಲಕತ್ವ ಸಿವಿಸಿ ಕ್ಯಾಪಿಟಲ್ಸ್ ಕೈತಪ್ಪಬಹುದು ಎಂಬ ವದಂತಿಗೆ ತೆರೆಬಿದ್ದಂತಾಗಿದೆ. ಐಪಿಎಲ್ ಛೇರ್ಮನ್ ಬ್ರಿಜೇಶ್ ಪಟೇಲ್ ಅವರು ಇಂದು ಆಡಳಿತ ಮಂಡಳಿ ಸಭೆ ಬಳಿಕ ಪತ್ರಿಕಾಗೋಷ್ಠಿ ನಡೆಸಿ ಈ ಎರಡು ಹೊಸ ಫ್ರಾಂಚೈಸಿಗಳಿಗೆ ಅನುಮೋದನೆ ಕೊಟ್ಟಿರುವ ವಿಚಾರವನ್ನು ತಿಳಿಸಿದರು. […]
SpeedNews
ತೆಲುಗು ಟೈಟಾನ್ಸ್ ವಿರುದ್ಧ ಗುಜರಾತ್ ಜೈಂಟ್ಸ್ 40-22 ಅಂಕಗಳಿಂದ ಗೆಲುವು ಪಡೆಯಿತು. ಸಿದ್ಧಾರ್ಥ್ ದೇಸಾಯಿ ಇಲ್ಲದ ತೆಲುಗು ಟೈಟಾನ್ಸ್ ತಂಡದ ನಿರಾಶಾದಾಯಕ ಪ್ರದರ್ಶನ ಮುಂದುವರಿದಿದೆ. ಇಂದು ನಡೆದ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ಎದುರು ತೆಲುಗು ಟೈಟಾನ್ಸ್ 22-40 ಅಂಕಗಳ ಭಾರೀ ಅಂತರದಿಂದ ಸೋಲುಂಡಿತು. ರಾಕೇಶ್ ಅವರ ಅಮೋಘ ಆಟದ ನೆರವಿನಿಂದ ಗೆದ್ದ ಗುಜರಾತ್ ಜೈಂಟ್ಸ್ ತಂಡ ಅಂಕ ಪಟ್ಟಿಯಲ್ಲಿ 11ನೇ ಸ್ಥಾನದಿಂದ 7ನೇ ಸ್ಥಾನಕ್ಕೆ ಜಂಪ್ ಮಾಡಿದೆ. ಗುಜರಾತ್ ಗೆಲುವಿಗೆ […]
ಬೆಂಗಳೂರಿನ ಕೋರಮಂಗಲದ ಕೇಂದ್ರೀಯ ಸದನ ಮತ್ತು ಈಜೀಪುರ ನಡುವೆ ಸಂಪರ್ಕಿಸುವ ಈಜೀಪುರ ಮೇಲ್ಸೇತುವೆ ನಿರ್ಮಾಣ ಕಾರ್ಯ ವಿಳಂಬಕ್ಕೆ ಕರ್ನಾಟಕ ಹೈಕೋರ್ಟ್ ಮಂಗಳವಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರನ್ನು ತೀವ್ರ ತರಾಟೆಗೆ ಗುರಿಪಡಿಸಿತು. ಕೋರಮಂಗಲದ ನಿವಾಸಿಯಾಗಿರುವ ಆದಿನಾರಾಯಣಶೆಟ್ಟಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಮತ್ತು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ವಿಭಾಗೀಯ ಪೀಠ ನಡೆಸಿತು. ವಿಚಾರಣೆ […]
ಅಮೆರಿಕದ ಮಾಜಿ ಅಧ್ಯಕ್ಷ ರಾಗಿರುವ ಡೊನಾಲ್ಡ್ ಟ್ರಂಪ್ ಅವರ ಹತ್ಯೆಗೆ ಸಂಚು ರೂಪಿಸಿದ ಆರೋಪದ ಮೇಲೆ 72 ವರ್ಷದ ಥಾಮಸ್ ವೆಲ್ನಿಕ್ ಎಂಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ಟ್ರಂಪ್ 2020 ಅಧ್ಯಕ್ಷೀಯ ಚುನಾವಣೆಯಲ್ಲಿ ಸೋತು ಅಧಿಕಾರ ತೊರೆಯಲು ನಿರಾಕರಿಸಿದ್ದಾಗ ಟ್ರಂಪ್ ಅವರನ್ನು ಅಪಹರಿಸಿ ಹತ್ಯೆ ನಡೆಸುವುದಾಗಿ ಆತ ಬೆದರಿಕೆ ಒಡ್ಡಿದ್ದ. ಕಳೆದ ವರ್ಷ ಜನವರಿಯಲ್ಲಿ ನ್ಯೂಯಾರ್ಕ್ನ ಲಾಂಗ್ ಐಲ್ಯಾಂಡ್ನಲ್ಲಿರುವ ಸೀಕ್ರೆಟ್ ಸರ್ವೀಸ್ನ ಕಛೇರಿಗೆ ಎರಡು ವಾಯ್ಸ್ ಮೇಲ್ ಸಂದೇಶ ಕಳುಹಿಸಿದ್ದ […]
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಕೋವಿಡ್ -19 ಸೋಂಕು ತಗುಲಿರುವುದು ದೃಢಪಟ್ಟಿದ್ದು, ಪ್ರಸ್ತುತ ಹೋಮ್ ಕ್ವಾರಂಟೈನ್ನಲ್ಲಿರುವುದಾಗಿ ತಿಳಿಸಿದ್ದಾರೆ. “ನಾನಗೆ ಕೊರೋನಾ ಪಾಸಿಟಿವ್ ಬಂದಿದೆ. ನಾನು ಈಗ ಹೋಮ್ ಕ್ವಾರಂಟೈನ್ನಲ್ಲಿದ್ದೇನೆ. ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದ ಪ್ರತಿಯೊಬ್ಬರೂ ಹೋಮ್ ಕ್ವಾರಂಟೈನ್ ಆಗುವಂತೆ ಮತ್ತು ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ ವಿನಂತಿಸುತ್ತೇನೆ” ಎಂದು ರಕ್ಷಣಾ ಸಚಿವರು ಟ್ವೀಟ್ ಮಾಡುವ ಮೂಲಕ ತೀಳಿಸಿದ್ದಾರೆ.. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: https://play.google.com/store/apps/details?id=com.speed.newskannada
ಬಿಹಾರ ರಾಜ್ಯದ ಕತಿಹಾರ್ ಜಿಲ್ಲೆಯಲ್ಲಿರುವ ಜುರಬ್ ಗಂಜ್ ಎನ್ನುವ ಗ್ರಾಮ ಕೇವಲ ರಾಜ್ಯ ಮಾತ್ರವಲ್ಲದೆ ದೇಶಾದ್ಯಂತ ಅಪರಾಧ ಎಸಗಿರುವ ಕುಖ್ಯಾತಿಗೆ ಪಾತ್ರವಾಗಿದೆ. ಈ ಗ್ರಾಮದ ಅಪರಾಧಿಗಳ ಜಾಲ ಜಾರ್ಖಂಡ್, ಮಹಾರಾಷ್ಟ್ರ, ಉತ್ತರಪ್ರಏಶ, ಪಶ್ಚಿಮ ಬಂಗಾಳ ರಾಜ್ಯಗಳಿಗೂ ಹರಡಿದೆ. ಹೀಗಾಗಿ ಅಲ್ಲಿನ ಪೊಲೀಸರು ಜುರಬ್ ಗಂಜ್ ನಿವಾಸಿ ಅಪರಾಧಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ಎಲ್ಲಕ್ಕಿಂತ ಅಚ್ಚರಿಯ ಸಂಗತಿ ಎಂದರೆ ಈ ಜುರಬ್ ಗಂಜ್ ಗ್ರಾಮದಲ್ಲಿ ದೊಡ್ಡವರು ಮಾತ್ರವೇ ಅಪರಾಧ ಕೃತ್ಯ ಎಸಗುತ್ತಿಲ್ಲ. ಮಕ್ಕಳು […]
ಸುಸ್ತು, ಜ್ವರದಿಂದ ಬಳಲಿದ್ದ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬೆಂಗಳೂರಿಗೆ ವಾಪಾಸಾಗಿ ಕುಟುಂಬದ ವೈದ್ಯರಿಂದ ಚಿಕಿತ್ಸೆ ಪಡೆದು, ಅವರ ಸಲಹೆಯಂತೆ ವಿಶ್ರಾಂತಿ ಪಡೆದಿದ್ದಾರೆ.. ಮಂಗಳವಾರದಿಂದ ಮತ್ತೆ ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: https://play.google.com/store/apps/details?id=com.speed.newskannada
ಅಪೌಷ್ಟಿಕತೆ ನಿವಾರಣೆಗೆ ಕ್ರಮಗಳನ್ನು ಕೈಗೊಳ್ಳಲಾಗುವುದು. ಇದಕ್ಕಾಗಿ ಬಜೆಟ್ನಲ್ಲಿ ಅಗತ್ಯ ಅನುದಾನ ಮೀಸಲಿಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಹೇಳಿದ್ದಾರೆ. ನೀತಿ ಆಯೋಗದ ಸಲಹೆಗಾರೆ ಸಂಯುಕ್ತಾ ಸಮದ್ದಾರ್ ಮತ್ತು ಹಿರಿಯ ಅಧಿಕಾರಿಗಳೊಂದಿಗಿನ ಮಾತುಕತೆ ವೇಳೆ, ಮುಖ್ಯಮಂತ್ರಿಗಳು ಸುಸ್ಥಿರ ಅಭಿವೃದ್ಧಿ ಗುರಿಗಳಲ್ಲಿ ರಾಜ್ಯ ಸಾಧಿಸಿದ ಪ್ರಗತಿ ಮತ್ತು ಅವುಗಳನ್ನು ಪೂರೈಸಲು ತೆಗೆದುಕೊಳ್ಳಬೇಕಾದ ಕ್ರಮಗಳನ್ನು ಪರಿಶೀಲಿಸಿದರು. ಈ ವೇಳೆ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕದ ಮಾನವ ಸಂಪನ್ಮೂಲ ಮತ್ತು ಸಂಘಟನೆಗಳನ್ನು ಬಳಸಿಕೊಂಡು […]
ಗೂಳೂರು ಬೆಸ್ಕಾಂ ಎಸ್.ಓ. ಶಿವಕುಮಾರ್ ದಲಿತ ಮಹಿಳೆಯರನ್ನು ಅವಾಚ್ಯವಾಗಿ ನಿಂದಿಸಿದ್ದಾರೆಂದು ಆಗ್ರಹಿಸಿ ಗೂಳೂರಿನ ಬೆಸ್ಕಾಂ ಕಚೇರಿಯ ಎದುರು ದಲಿತ ಸೇನೆ ವತಿಯಿಂದ ಪ್ರತಿಭಟನೆ ನಡೆಸಿದ್ದಾರೆ..ತುಮಕೂರು ತಾಲೂಕು ಗೂಳೂರು ಗ್ರಾಮದಲ್ಲಿ ಬೆಸ್ಕಾಂ ಕಚೇರಿಯ ಸೆಕ್ಷನ್ ಆಫೀಸರ್ ಶಿವಕುಮಾರ್ ರವರು ಗೂಳೂರಿನ ದಲಿತ ಕಾಲನಿಯ ದುರ್ಗಾ ದೇವತೆ ದೇವಸ್ಥಾನದಲ್ಲಿರುವ ವಿದ್ಯುತ್ ಸಂಪರ್ಕವನ್ನು ತೆರವುಗೊಳಿಸಲು ಮುಂದಾಗಿದ್ದಾರೆ. ಇದನ್ನು ಕಂಡ ದಲಿತ ಮಹಿಳೆಯರು ದೇವಸ್ಥಾನದ ವಿದ್ಯುತ್ ಸಂಪರ್ಕವನ್ನು ತೆರವುಗೊಳಿಸಬೇಡಿ ಎಂದು ಕೇಳಲು ಮುಂದಾದಾಗ ಈ ದಲಿತ […]
ದೆಹಲಿ-ಹರಿಯಾಣ ಗಡಿಯಲ್ಲಿ ರೈತರ ಪ್ರತಿಭಟನಾ ಸ್ಥಳದ ಬಳಿ ವೇಗವಾಗಿ ಬಂದ ಟ್ರಕ್ಕೊಂದು ಡಿವೈಡರ್ ಮೇಲೆ ಹರಿದ ಪರಿಣಾಮ ಮೂವರು ಮಹಿಳೆಯರು ಸಾವನ್ನಪ್ಪಿದ ಘಟನೆ ನಡೆದಿದೆ. ಟ್ರಕ್ ಢಿಕ್ಕಿ ಹೊಡೆದಾಗ ಮಹಿಳೆಯರು ಡಿವೈಡರ್ ಮೇಲೆ ಕುಳಿತು ಆಟೋ ರಿಕ್ಷಾಕ್ಕಾಗಿ ಕಾಯುತ್ತಿದ್ದರು ಎನ್ನಲಾಗಿದೆ. ಅಪಘಾತದ ಸ್ಥಳದಿಂದ ಟ್ರಕ್ ಚಾಲಕ ಓಡಿಹೋಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟರೆ, ಒಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ ಮಹಿಳೆಯರು […]