ಅರೆಬೆಂದ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಬೈರಕೂರು ಬಳಿಯ ಗಟ್ಟುಗುಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ. 35 ರಿಂದ 40 ವರ್ಷ ವಯಸ್ಸಿನ ಅಪರಿಚಿತ ಮಹಿಳೆ ಯನ್ನು ಕೊಲೆ ಮಾಡಿ ಪೆಟ್ರೋಲ್ ಸುರಿದು ಸುಟ್ಟಿರುವ ಶಂಕೆ ವ್ಯೇಕ್ತವಾಗಿದೆ. ಸ್ಥಳಕ್ಕೆ ನಂಗಲಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ:ಟಿಪ್ಪರ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ

ಟಿಪ್ಪರ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರು ಸಾನನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ನಾದ ಗ್ರಾಮದಲ್ಲಿ ನಡೆದಿದೆ. ವೇಗವಾಗಿ ಬಂದ ಬೈಕ್ ಹಿಂಬದಿಯಿಂದ ಟಿಪ್ಪರ್ ಗೆ ಡಿಕ್ಕಿ ಹೊಡೆದಿದ್ದರಿಂದ  ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ್ದಾರೆ. ಇನ್ನೂ ಬೈಕ್ ಸವಾರರು ವಿಜಯಪುರ ನಗರ ನಿವಾಸಿಗಳು ಎಂದು ತಿಳಿದುಬಂದಿದೆ. ಇದನ್ನೂ ಓದಿ:ನಾಯಂಡಹಳ್ಳಿ ಫ್ಲೈ ಓವರ್ ಬಳಿ ಸರಣಿ ಅಪಘಾತ!

ನಾಯಂಡಹಳ್ಳಿ ಫ್ಲೈ ಓವರ್ ಬಳಿ ಸರಣಿ ಅಪಘಾತ! 10ಕ್ಕೂ ಹೆಚ್ಚು ಗಾಡಿ ಜಖಂ ಆಗಿವೆ. ಬೆಂಗಳೂರಿನ ಮೈಸೂರು ರಸ್ತೆ ನಾಯಂಡಹಳ್ಳಿ ಫ್ಲೈ ಓವರ್ ಬಳಿ ಸರಣಿ ಅಪಘಾತ ಸಂಭವಿಸಿದ್ದು, 10ಕ್ಕೂ ಹೆಚ್ಚು ವಾಹನಗಳು ಜಖಂ ಆಗಿವೆ. ಆಟೋಚಾಲಕನ ಕೇರ್ ಲೆಸ್ ಚಾಲನೆಯಿಂದಾಗಿ ಈ ಘಟನೆ ಸಂಭವಿಸಿದೆ. ಸ್ಥಳದಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗಿದ್ದು, ಪೊಲೀಸರು ಟ್ರಾಫಿಕ್ ಕ್ಲಿಯರ್ ಮಾಡಲು ಹರಸಾಹಸ ಮಾಡುತ್ತಿದ್ದಾರೆ. ಬ್ಯಾಟರಾಯನಪುರ ಸಂಚಾರಿ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. […]

ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ಬೆಲೆ ಕಡಿಮೆ ಇದ್ದರೂ 12 ದಿನ ನಿರಂತರವಾಗಿ ಬೆಲೆ ಏರಿಕೆ ಮಾಡಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಡೆಗೂ ಸಾರ್ವಜನಿಕರ ವ್ಯಾಪಕ ವಿರೋಧಕ್ಕೆ ಬೆದರಿದ್ದು 14ನೇ ದಿನವಾದ ಇಂದು ಕೂಡ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಳ ಮಾಡಿಲ್ಲ. ಇದನ್ನೂ ಓದಿ:ಚಿಕ್ಕಮಗಳೂರಿನಲ್ಲಿ ಮಳೆಯ ಆರ್ಭಟ

ಅಕಾಲಿಕವಾಗಿ ಸುರಿದ ಮಳೆಯ ಅಬ್ಬರಕ್ಕೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಜನರು ಕಂಗಾಲಾಗಿದ್ದಾರೆ.ಸತತ ಒಂದು ಗಂಟೆ ಕಾಲ ಸುರಿದ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮಳೆ ನೀರು ಬಟ್ಟೆ ಅಂಗಡಿಗೆ ನುಗ್ಗಿದ ಪರಿಣಾಮ ಲಕ್ಷಾಂತರ ರೂ.ಮೌಲ್ಯದ ಬಟ್ಟೆ ನೀರು ಪಾಲಾಗಿದೆ. ಇನ್ನು ಕಾಮಗಾರಿ ಪ್ರಗತಿಯಲ್ಲಿದ್ದು,ಮಳೆ ಸುರಿದ ಕಾರಣ ಚರಂಡಿ ನೀರು ಅಂಗಡಿಗೆ ನುಗ್ಗಿದೆ.ಅಂಗಡಿಯೊಳಗೆ 2-3 ಅಡಿ ಎತ್ತರಕ್ಕೆ ನೀರು ನಿಂತಿದೆ. ಇದನ್ನೂ ಓದಿ:300 ಕೆ.ಜಿ ಗೂ ಅಧಿಕ ಗಾಂಜಾ ವಶ

ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಪೊಲೀಸ್ ಫೈರಿಂಗ್ , ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ರೌಡಿ ನಿಗ್ರಹ ದಳ ಪೊಲೀಸರು ಗುಂಡು ಹಾರಿಸಿ ಬಂಧಿಸಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ನಗರದ ಹೊರವಲಯದಲ್ಲಿರುವ ಸ್ವಾಮಿ ಸಮರ್ಥ ದೇವಾಲಯದ ಬಳಿ ಪೊಲೀಸರು ಫೈರಿಂಗ್ ನಡೆಸಿದ್ದು, ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿ ಭೀಮು (34) ಬಲಗಾಲಿಗೆ ಗುಂಡು ತಗುಲಿದೆ. ರೌಡಿ ನಿಗ್ರಹ ದಳದ ಪಿಎಸ್ಐ ವಾಹೀದ್ ಕೋತ್ವಾಲ್ ಫೈರಿಂಗ್ ಮಾಡಿದ್ದಾರೆ. […]

ರಸ್ತೆಯಲ್ಲಿ ಪತ್ನಿಯ ಹಳೆ ಪ್ರಿಯಕರ ಕಂಡ ಪತ್ನಿಯ ಗಂಡ ಆತನ ಮೇಲೆ ಹಲ್ಲೆಗೆ ಯತ್ನಿಸಿರುವ ಘಟನೆ ಚಿಕ್ಕಬಳ್ಳಾಪುರದ ಮೈಲಪ್ಪನಹಳ್ಳಿಯಲ್ಲಿ ನಡೆದಿದೆ. ವೆಂಕಟೇಶ್ ಬಂಧಿತ ಆರೋಪಿಯಾಗಿದ್ದು, ಅರ್ಜುನ್ ಎಂಬ ವ್ಯಕ್ತಿ ಚಾಕು ಇರಿತಕ್ಕೊಳಗಾದವನ್ನು. ವೆಂಕಟೇಶ್ ಮತ್ತು ಆತನ ಪತ್ನಿ ರಸ್ತೆಯಲ್ಲಿ ಹೋಗುವ ಸಂದರ್ಭದಲ್ಲಿ ಹೆಂಡತಿಯ ಪ್ರಿಯಕರ ಅರ್ಜುನ್ ಮುಖಾಮುಖಿಯಾದ್ದಾನೆ. ಈ ನಡುವೆ ಗಂಡ ಮತ್ತು ಪ್ರಿಯಕರನ ನಡುವೆ ಮಾತಿಗೆ ಮಾತು ಬೆಳೆದು ಪ್ರಿಯಕರ ಚಾಕು ಇರಿತಕ್ಕೊಳಗಾಗಿ ಆಸ್ಪತ್ರೆಗೆ ಸೇರಿದ್ದಾನೆ. ಸದ್ಯ ಚಿಕ್ಕಬಳ್ಳಾಪುರ […]

ಸಿನಿಮಯ ರೀತಿಯಲ್ಲಿ ಸ್ನೇಹಿತನ ಮನೆಯನ್ನೇ ಕಳ್ಳತನ ಮಾಡಿದ ಖದೀಮನನ್ನು ಪೋಲೀಸರು ಬಂಧಿಸಿದ್ದಾರೆ. ಬ್ರಿಲಿಯೆಂಟ್ ಪ್ಲಾನ್ ಬಳಸಿ ಐವತ್ತು ಲಕ್ಷ ಮೌಲ್ಯದ ಚಿನ್ನಾಭರಣ, ಫಾರೀನ್ ಕರೆನ್ಸಿ ಕಳ್ಳತನ ಮಾಡಿಸಿದ್ದ ಆರೋಪಿ. ನಾಝಿಂ ಶರೀಫ್ ,ಮಹಮ್ಮದ್ ಶಫಿಯುಲ್ಲ ನಿಂದ ಕಳ್ಳತನ ಮಾಡಿಸಿ ಕಳ್ಳತನದ ಬಳಿಕವೂ ಖದೀಮ ದೂರುದಾರನ ಜೊತೆ ನಿರಂತರ ಸಂಪರ್ಕದಲ್ಲಿದ್ದಾನೆ. ಈ ಸಂಬಂಧ 270 ಸಿಸಿಟಿವಿ ಚೆಕ್ ಮಾಡಿದ್ದ ಪೊಲೀಸರು ಆರೋಪಿಯ ಬಾಡಿ ಲಾಂಗ್ವೆಜ್ ನೋಡಿ ಟ್ರೇಸ್ ಮಾಡಿದ್ದಾರೆ. ಇನ್ನು ಪುಲಿಕೇಶಿನಗರ […]

ವಿಮಾನದ ಎಂಜಿನ್ ಫೇಲ್ ಆದರೂ ಸುರಕ್ಷಿತವಾಗಿ ಲ್ಯಾಂಡ್ ಆಗಿರುವ ಘಟನೆ ಅಮೆರಿಕದ ಯುನೈಟೆಡ್ ಏರ್ಲೈನ್ಸ್ನಲ್ಲಿ ನಡೆದಿದೆ. ಸದ್ಯ ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗಿದ್ದು ಭೀಕರ ದುರಂತ ತಪ್ಪಿದೆ. ಅಮೆರಿಕದ ಡೆನ್ವರ್ನಿಂದ ಹೊನೊಲುಲುಗೆ ಹೊರಟಿದ್ದ ವಿಮಾನದ ಎಂಜಿನ್ ಮಾರ್ಗ ಮಧ್ಯೆ ಬೆಂಕಿ ಹೊತ್ತಿಕೊಂಡು ಹೊತ್ತಿ ಉರಿದಿದೆ. ಅಲ್ಲದೆ ವಿಮಾನ ಆಗಸದಲ್ಲಿ ಹಾರಾಟ ಮಾಡುತ್ತಿದ್ದ ವೇಳೆಯಲ್ಲಿಯೇ ಎಂಜಿನ್ ನ ರಕ್ಷಣಾ ಕವಚ ಕಳಚಿ ಭೂಮಿಗೆ ಬಿದ್ದಿದೆ. ಈ ಸಂದರ್ಭ ದಲ್ಲಿ ವಿಮಾನ ಚಾಲಕನ […]

ಮಹಿಳಾ ಪ್ರಾಂಶುಪಾಲರೊಬ್ಬರಿಗೆ ಪ್ರತಿಷ್ಠಿತ ಕ್ಲಬ್ ಉಪಾಧ್ಯಕ್ಷರೊಬ್ಬರು ಲೈಂಗಿಕ ಕಿರುಕುಳ ನೀಡಿದ್ದು, ಉಪಾಧ್ಯಕ್ಷನ ವಿರುದ್ಧ ಪ್ರಕರಣ ದಾಖಲಾಗಿದೆ.ಬೆಂಗಳೂರಿನ ಬಸನವನಗುಡಿಯ ಯುನಿಯನ್ ಕ್ಲಬ್ ಉಪಾಧ್ಯಕ್ಷ ಮೋಹನ್ ರಾವ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ. ಮಹಿಳಾ ಪ್ರಾಂಶುಪಾಲರು ಯುನಿಯನ್ ಕ್ಲಬ್ ಗೆ ಹೋಗಿದ್ದ ವೇಳೆ ಮೋಹನ್ ರಾವ್ ಕಿರುಕುಳ ನೀಡಿದ್ದಾರೆ ಎನ್ನಲಾಗಿದೆ.ಪ್ರಾಂಶುಪಾಲರು ಕ್ಲಬ್ ಗೆ ಹೋಗಿದ್ದಾಗ ಶೌಚಾಲಯಕ್ಕೆಂದು ತೆರಳುತ್ತಿದ್ದ ವೇಳೆ ಅವರನ್ನು ತಡೆದಿದ್ದ ಮೋಹನ್ ರಾವ್, ಅಸಭ್ಯವಾಗಿ ವರ್ತಿಸಿದ್ದ. ಈ ಹಿನ್ನೆಲೆಯಲ್ಲಿ ಮಹಿಳಾ […]

Advertisement

Wordpress Social Share Plugin powered by Ultimatelysocial