ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಬೇಕು ಎನ್ನುವುದನ್ನು ಸಾಮಾನ್ಯ ಜನತೆಯನ್ನು ಕೇಳಲಾಗುವುದು ಎಂದು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕರಾಗಿರುವ ಅರವಿಂದ್ ಕೇಜ್ರಿವಾಲ್ ಗುರುವಾರ ಹೇಳಿದ್ದಾರೆ. ಪಂಜಾಬಿನ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆಗಾಗಿ ಜನರಿಂದ ಪ್ರತಿಕ್ರಿಯೆ ಪಡೆಯಲು ಮೊಬೈಲ್ ನಂಬರ್ ಒಂದನ್ನು ಪಂಜಾಬ್ ಎಎಪಿ ಘಟಕದ ಅಧ್ಯಕ್ಷ ಹಾಗೂ ಪಕ್ಷದ ಹಿರಿಯ ಮುಖಂಡ ರಾಘವ್ ಚಡ್ಡಾ ಅವರ ಸಮ್ಮುಖದಲ್ಲಿ ಕೇಜ್ರಿವಾಲ್ ಬಿಡುಗಡೆ ಮಾಡಿದ್ದಾರೆ. ಜನವರಿ 17 ರ ಸಂಜೆಯವರೆಗೂ ಜನರು […]
SpeedNewsLive
ಭಾರತ ಚಿತ್ರರಂಗದ ಅದರಲ್ಲಿಯೂ ವಿಶೇಷವಾಗಿ ದಕ್ಷಿಣ ಭಾರತ ಚಿತ್ರರಂಗದ ಚಿತ್ರಗಳ ಹಾಡುಗಳಿಗೆ ಮತ್ತು ಸಂಭಾಷಣೆಗಳಿಗೆ ಖ್ಯಾತ ಕ್ರಿಕೆಟಿಗರು ವಿಡಿಯೋ ಮಾಡಿ ತಮ್ಮ ಅಧಿಕೃತ ಸಾಮಾಜಿಕ ಜಾಲತಾಣಗಳ ಖಾತೆಗಳಲ್ಲಿ ಹಂಚಿಕೊಳ್ಳುವುದು ಇತ್ತೀಚೆಗಿನ ಟ್ರೆಂಡ್ ಆಗಿಬಿಟ್ಟಿದೆ.ಅಲ್ಲು ಅರ್ಜುನ್ ಸದ್ಯ ‘ಪುಷ್ಪ: ದಿ ರೈಸ್’ ಯಶಸ್ಸಿನಲ್ಲಿದ್ದಾರೆ. ಬಾಕ್ಸಾಫೀಸ್ನಲ್ಲಿ ಧೂಳೆಬ್ಬಿಸಿರುವ ಚಿತ್ರ ಹಿಂದಿಯಲ್ಲೇ ಸುಮಾರು ₹ 80 ಕೋಟಿಗೂ ಅಧಿಕ ಹಣವನ್ನ ಬಾಚಿಕೊಂಡಿದೆ. ಭಾರತ ಕ್ರಿಕೆಟ್ ತಂಡದ ತಾರಾ ಆಟಗಾರ ರವೀಂದ್ರ ಜಡೇಜಾ ‘ಪುಷ್ಪ’ ಲುಕ್ನಲ್ಲಿ […]
ವಿದೇಶಿ ಬೆಳೆಯಾದ ಡ್ರ್ಯಾಗನ್ ಫ್ರೂಟ್ ಅನ್ನು ಹಣ್ಣುಗಳಲ್ಲಿಯೇ ಅತ್ಯಂತ ಶ್ರೀಮಂತ ಹಣ್ಣು ಎಂದು ಕರೆಯುತ್ತಾರೆ. ಏಕೆಂದರೆ ಅಷ್ಟೊಂದು ದುಬಾರಿ ಈ ಹಣ್ಣು ಅದು ಅಲ್ಲದೇ ಸಾಕಷ್ಟು ಆರೋಗ್ಯಕಾರಿ ಪ್ರಯೋಜನಗಳನ್ನು ಹೊಂದಿರುವುದರಿಂದ ಸ್ವಲ್ಪ ಹಣ ಹೆಚ್ಚು. ಮುಖ್ಯವಾಗಿ ಇದು ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ಕಡಿಮೆ ಮಾಡುವ ಶಕ್ತಿ ಇರುವುದರಿಂದ ಡಯಾಬಿಟಿಸ್ ರೋಗಿಗಳು ಇದನ್ನು ಹೆಚ್ಚಾಗಿ ಸೇವಿಸುತ್ತಾರೆ. ಹಾಗಾಗಿ ಇದನ್ನು ಸಾವಿರ ಮಾತ್ರೆಗಳಿಗೆ ಸಮ ಎನ್ನಲಾಗುತ್ತದೆ. ಡ್ರ್ಯಾಗನ್ ಫ್ರೂಟ್ ಕೃಷಿಗೆ ಜಗನ್ ಸರ್ಕಾರದ […]
ನನಗೆ ಯಾವ ನೋಟಿಸ್ ಬಂದಿಲ್ಲ. ಈವರೆಗೆ ಯಾಕೆ ನಮ್ಮ ಪಾದಯಾತ್ರೆ ತಡೆದಿಲ್ಲ. ಸಭೆ ಬಳಿಕ ಪಾದಯಾತ್ರೆ ಬಗ್ಗೆ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ. ಇಂದು ಬೆಳಗ್ಗೆ 10 ಗಂಟೆಗೆ ರಾಮನಗರದಲ್ಲಿ ಕಾಂಗ್ರೆಸ್ ಶಾಸಕರು ಮತ್ತು ನಾಯಕರ ಸಭೆ ಕರೆದಿದ್ದು ಅಲ್ಲಿ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ. ಸರ್ಕಾರ ತಡೆಯುವುದಾದರೆ ತಡೆಯಲಿ ನೋಡೋಣ ಎಂದು ಪ್ರತಿಕ್ರಿಯಿಸಿದರು ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: https://play.google.com/store/apps/details?id=com.speed.newskannada
2022-23ನೇ ಸಾಲಿನ ಬಜೆಟ್ನಲ್ಲಿ ಎಲ್ಲಾ ತಂಬಾಕು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಹೆಚ್ಚಿಸುವಂತೆ ವಿವಿಧ ಯುವಜನ ಸಂಘಗಳು ಸೇರಿದಂತೆ 500ಕ್ಕೂ ಹೆಚ್ಚು ಯುವಕರು ಪ್ರಧಾನಿ ಮತ್ತು ಕೇಂದ್ರ ಹಣಕಾಸು ಸಚಿವರನ್ನು ಒತ್ತಾಯಿಸಿದ್ದಾರೆ. ‘ಸಕ್ಷಮ್ ಯುವ, ಸಶಕ್ತ್ ಯುವ’ (ಸಮರ್ಥ ಯುವಜನ, ಬಲಿಷ್ಠ ಯುವಜನ) ಎಂಬ ಘೋಷವಾಕ್ಯ ಹೊಂದಿರುವ ರಾಷ್ಟ್ರೀಯ ಯುವ ದಿನಾಚರಣೆ ಹಿನ್ನೆಲೆಯಲ್ಲಿ ಸಿಗರೇಟ್, ಬೀಡಿ ಮತ್ತು ಹೊಗೆರಹಿತ ತಂಬಾಕಿನ ಮೇಲೆ ವಿಧಿಸಿರುವ ಅಬಕಾರಿ ಸುಂಕವನ್ನು ಹೆಚ್ಚಿಸಿ, ದೇಶದ ಯುವ ಜನಾಂಗಕ್ಕಾಗಿ […]
ನಿರ್ಣಾಯಕ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿದ ಟೀಮ್ ಇಂಡಿಯಾ ಮೊದಲ ಇನಿಂಗ್ಸ್ನಲ್ಲಿ 223 ರನ್ಗಳ ಸಾಧಾರಣ ಮೊತ್ತ ದಾಖಲಿಸಿದೆ. ಟೆಸ್ಟ್ ನ ಮೊದಲ ದಿನ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರು ತಾಳ್ಮೆಯ ಆಟವಾಡಿ 79 ರನ್ ಗಳಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ದಕ್ಷಿಣ ಆಫ್ರಿಕಾ ದಿನಾಂತ್ಯದ ವೇಳೆಗೆ ಒಂದು ವಿಕೆಟ್ ಕಳೆದುಕೊಂಡು ಆರಂಭಿಕ ಆಘಾತ ಅನುಭವಿಸಿದೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: […]
ರಶ್ಮಿಕಾ ಮಂದಣ್ಣ ಈಗ ಗೆಲ್ಲುವ ಕುದುರೆ ಆಗಿದ್ದಾರೆ. ಅವರು ಮುಟ್ಟಿದ್ದೆಲ್ಲವೂ ಚಿನ್ನ ಆಗುತ್ತಿದೆ. ಹಾಗಾಗಿ ಅವರ ಜೊತೆ ಸಿನಿಮಾ ಮಾಡಲು ನಿರ್ಮಾಪಕರು ಮುಗಿಬೀಳುತ್ತಿದ್ದಾರೆ. ದಕ್ಷಿಣ ಭಾರತದಲ್ಲಿ ಮಿಂಚಿದ ಬಳಿಕ ಅವರಿಗೆ ಬಾಲಿವುಡ್ನಿಂದಲೂ ಆಫರ್ ಗಳು ಬಂದಿದೆ. ಅಮಿತಾಭ್ ಬಚ್ಚನ್ ಜೊತೆ ‘ಗುಡ್ ಬೈ’ ಹಾಗೂ ಸಿದ್ದಾರ್ಥ್ ಮಲ್ಹೋತ್ರ ಜೊತೆ ‘ಮಿಷನ್ ಮಜ್ನು’ ಚಿತ್ರಗಳಲ್ಲಿ ಅವರು ಅಭಿನಯಿಸಿದ್ದಾರೆ ಮಾತ್ತು ಈಗಾಗಲೇ ತಿಳಿದಿರುವಂತೆ ‘ಪುಷ್ಪ’ ಚಿತ್ರದ ಎರಡನೇ ಪಾರ್ಟ್ ಸಿದ್ಧವಾಗುತ್ತಿದೆ. ಆ ಸಿನಿಮಾದಲ್ಲೂ […]
ಇಸ್ಲಾಮಿಕ್ ಸ್ಟೇಟ್ನಿಂದ ಬರುವ ಭದ್ರತಾ ಬೆದರಿಕೆಯನ್ನು ತಡೆಯುವುದಕ್ಕಾಗಿ, ತಾಲಿಬಾನ್ ಅಧಿಕೃತವಾಗಿ ಆತ್ಮಹುತಿ ಬಾಂಬರ್ಗಳನ್ನು ಅಫ್ಘಾನಿಸ್ತಾನ ಸೇನೆಯಲ್ಲಿ ನೇಮಿಸಿಕೊಳ್ಳಲು ನಿರ್ಧರಿಸಿದೆ. ಕಳೆದ ವರ್ಷ ಅಧಿಕಾರಕ್ಕೆ ಬರುವ ಮೊದಲು, ತಾಲಿಬಾನ್ 20 ವರ್ಷಗಳ ಯುದ್ಧದಲ್ಲಿ ಯುಎಸ್ ಮತ್ತು ಅಫ್ಘಾನ್ ಪಡೆಗಳ ಮೇಲೆ ದಾಳಿ ಮಾಡಲು ಮತ್ತು ಸೋಲಿಸಲು ಆತ್ಮಹುತಿ ಬಾಂಬರ್ ಗಳನ್ನು ಪ್ರಮುಖ ಅಸ್ತ್ರವಾಗಿ ಬಳಸಿತ್ತು. ಈಗ ತಾಲಿಬಾನ್ ಒಂದೇ ಘಟಕದ ಅಡಿಯಲ್ಲಿ ಕಾರ್ಯನಿರ್ವಹಿಸಲು ಮತ್ತು ಅಫ್ಘಾನಿಸ್ತಾನವನ್ನು ರಕ್ಷಿಸಲು ದೇಶಾದ್ಯಂತ ಆತ್ಮಹತ್ಯಾ ಬಾಂಬರ್ […]
ಭಾರತದ ರಾಷ್ಟ್ರೀಯ ಸ್ಪ್ರಿಂಟ್ ಚಾಂಪಿಯನ್ ತರಂಜಿತ್ ಕೌರ್ ಡೋಪಿಂಗ್ ಪರೀಕ್ಷೆಯಲ್ಲಿ ವಿಫಲರಾಗಿದ್ದಾರೆ ಎಂದು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (ನಾಡಾ) ತಿಳಿಸಿದೆ. ದೆಹಲಿಯ 20ರ ಹರೆಯದ ತರಂಜಿತ್ ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ನಡೆದ ರಾಷ್ಟ್ರೀಯ ಅಂಡರ್-23 ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ 100ಮೀ, 200ಮೀ ಓಟದಲ್ಲಿ ಚಿನ್ನದ ಪದಕ ಗೆದ್ದಿದ್ದರು. “ನಾಡಾ” ಶಿಸ್ತು ಸಮಿತಿಯ ವಿಚಾರಣೆ ವೇಳೆ ತರಂಜಿತ್ ತಪ್ಪಿತಸ್ಥರೆಂದು ಸಾಬೀತಾದರೆ ನಾಲ್ಕು ವರ್ಷಗಳ ನಿಷೇಧ ವಿಧಿಸುವ ಸಾಧ್ಯತೆಯಿದೆ. ಇತ್ತೀಚಿನ ಸುದ್ದಿಗಳಿಗಾಗಿ […]
ಕೆಲ ದಿನಗಳ ಹಿಂದೆ ಶೋಯೆಬ್ ಮತ್ತು ಆಯೇಶಾ ಸ್ಥಳೀಯ ಮ್ಯಾಗಜೀನ್ ಗಾಗಿ ಹಾಟ್ ಫೋಟೋಶೂಟ್ ನಲ್ಲಿ ಭಾಗಿಯಾಗಿದ್ದರು. ಇದರಲ್ಲಿ ಶೋಯೆಬ್ ಮಲಿಕ್ ಬಿಳಿ ಶರ್ಟ್ ಧರಿಸಿದ್ದರು ಮತ್ತು ಆಯೇಶಾ ಕಿತ್ತಳೆ ಬಣ್ಣದ ಬಟ್ಟೆಯಲ್ಲಿ ಮಿಂಚುತ್ತಿದ್ದರು.ಶೋಯೆಬ್ ಮಲಿಕ್ ಮತ್ತು ಹನಿಯಾ ಅಮಿರ್ ಫೋಟೋಗಳು ವೈರಲ್ ಆಗಿದೆ. ಇದಕ್ಕೂ ಮುನ್ನ ಮಲಿಕ್ ಹಾಗೂ ನಟಿ ಆಯೇಶಾ ಒಮರ್ ಫೋಟೋಗಳು ಬಿಸಿ ಎಬ್ಬಿಸಿತ್ತು. ನಟಿ ಆಯೇಶಾ ಒಮರ್ ಅವರೊಂದಿಗೆ ಶೋಯೆಬ್ ಮಲಿಕ್ ಫೋಟೋಶೂಟ್ ತೆಗೆಸಿಕೊಂಡಿದ್ದಾರೆ. […]