ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಮಹಿಳೆ ಸಾವನ್ನಪ್ಪಿರುವ ಘಟನೆ ಕೋಲಾರ ತಾಲೂಕಿನ ಮೂರಾಂಡಹಳ್ಳಿ ಗ್ರಾಮದಲ್ಲಿ ನಡೆದಿದೆ. ವಿದ್ಯುತ್ ತಂತಿ ಬಿದ್ದು ನೀಲಗಿರಿ ತೋಪಿಗೆ ಬೆಂಕಿ ಹೊತ್ತಿ ಕೊಂಡಿದ್ದು ಅದನ್ನು ಆರಿಸಲು ಮಂಗಮ್ಮ ಎಂಬುವರು ಹೋದಾಗ ವಿದ್ಯುತ್ ತಂತಿಯನ್ನು ತುಳಿದು ಸಾವನ್ನಪ್ಪಿದ್ದಾರೆ. ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಅಘ್ನಿದೇವನ ಕೋಪಕ್ಕೆ ಬಲಿಯಾದ ಪಶುಗಳು
#speednewsplitical
ಜನವರಿ 24ರಂದು ಹೈದರಾಬಾದ್ನ ಬಲ್ಕಂಪೇಟೆಯಲ್ಲಿರುವ ಯಲ್ಲಮ್ಮ ದೇವಸ್ಥಾನದ ಬಳಿ ಬೈಕ್ನಲ್ಲಿ ವೇಗವಾಗಿ ಬಂದ ಮೂವರು ಹುಡುಗರು ಪುಟ್ಟ ಬಾಲಕಿಗೆ ಡಿಕ್ಕಿ ಹೊಡೆದು ಸ್ಥಳದಿಂದ ಕಾಲ್ಕಿತ್ತಿದ್ದರು. ಬಾಲಕಿಯ ಕಾಲಿಗೆ ಗಂಭೀರವಾದ ಗಾಯವಾಗಿತ್ತು. ಆದರೆ, ಆರೋಪಿಗಳ ಸುಳಿವು ಮಾತ್ರ ಸಿಕ್ಕಿರಲಿಲ್ಲ. ಇದೀಗ ನೆಟ್ಟಿಗರ ಸಹಾಯದಿಂದ ಘಟನೆ ನಡೆದ 13 ದಿನಗಳ ಬಳಿಕ ಹಿಟ್ ಆಯಂಡ್ ರನ್ ಮಾಡಿದ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಇದನ್ನೂ ಓದಿ:ಮೋಸ್ಟ್ ವಾಂಟೆಡ್ ಉಗ್ರ ಅರೆಸ್ಟ್.!