ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿರುವ ನಟೋರಿಯಸ್ ರೌಡಿಶೀಟರ್ ಸೈಕಲ್ ರವಿ ಪೊಲೀಸ್ ಠಾಣೆ ಬಳಿ ದಿಢೀರ್ ಪ್ರತ್ಯಕ್ಷವಾಗಿದ್ದಾರೆ. ಸೈಕಲ್ ರವಿ ತಮ್ಮ ವಕೀಲರೊಂದಿಗೆ ವಿ.ವಿ ಪುರಂ ಠಾಣೆಗೆ ಭೇಟಿಕೊಟ್ಟಿದ್ದಾರೆ. ಜಯನಗರ ಠಾಣಾ ವ್ಯಾಪ್ತಿಯಲ್ಲಿ ಕೆಲ ಕುಖ್ಯಾತ ದುಷ್ಕರ್ಮಿಗಳು ಸೈಕಲ್ ರವಿ ಹತ್ಯೆಗೆ ಸ್ಕೆಚ್ ಹಾಕಿದ್ದರು. ಅಷ್ಟೇ ಅಲ್ಲದೇ ಇತ್ತೀಚೆಗೆ ರಾಬರ್ಟ್ ಸಿನಿಮಾ ನಿರ್ಮಾಪಕರಾದ ಉಮಾಪತಿ ಶ್ರೀನಿವಾಸ್ ಮತ್ತು ಅವರ ಸಹೋದರ ದೀಪಕ್ ಹತ್ಯೆಗೂ ಸಂಚು ಸಹ ರೂಪಿಸಿದ್ದರು. ಪ್ರಕರಣ ಸಂಬಂಧ […]
#speednewspoliitical
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮಿಳಾ ನಾಯ್ಡು ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ. ದೂರು ದಾಖಲಾದ ನಂತರ ಮಾತನಾಡಿದ ಅಧ್ಯಕ್ಷೆ ಯುವತಿ ವಿಡಿಯೋದಲ್ಲಿ ತನಗೆ ಹಾಗೂ ತನ್ನ ಕುಟುಂಬಕ್ಕೆ ರಕ್ಷಣೆ ನೀಡುವಂತೆ ಕೇಳಿದ್ದಾಳೆ, ಸಿಡಿ ಪ್ರಕರಣದ ಬಳಿಕ ತಮಾಗಾಗುತ್ತಿರುವ ತೊಂದರೆ, ಬೆದರಿಕೆ ಹಾಗೂ ಆತ್ಮಹತ್ಯೆ ಯತ್ನದ ಬಗ್ಗೆಯೂ ತಿಳಿಸಿದ್ದಾರೆ. ಇದರಿಂದಾಗಿ ನಾವು ಸಂತ್ರಸ್ಥೆಗೆ ರಕ್ಷಣೆ ನೀಡಲು ಸಿದ್ಧವಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ:ಬಸ್ ನಿಲ್ದಾಣದಲ್ಲೆ […]
ನಿವೃತ್ತ ಡಿಜಿಐಜಿಪಿ ಶಂಕರ್ ಬಿದರಿ ಅವರ ಇ-ಮೇಲ್ ಖಾತೆ ಹ್ಯಾಕ್ ಮಾಡಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದ ನಾಗಾಲ್ಯಾಂಡ್ ಮೂಲದ ಮೂವರನ್ನು ಬೆಂಗಳೂರು ಸೈಬರ್ ಕ್ರೈಂ ಪೋಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಥಿಯಾ, ಸೆರೋಪಾ ಹಾಗೂ ಇಸ್ಟರ್ ರೂಬಿಕಾ ಎಂದು ಗುರುತಿಸಲಾಗಿದೆ. ಆರೋಪಿಗಳಿಂದ 13 ಪ್ಯಾನ್ ಕಾರ್ಡ್, 6 ಆಧಾರ್ ಕಾರ್ಡ್, 2 ಎಟಿಎಂ ಕಾರ್ಡ್, ಎರಡು ಮೊಬೈಲ್ ಗಳನ್ನು ಜಪ್ತಿ ಮಾಡಲಾಗಿದೆ. ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗಿದ್ದು ಈ ವೇಳೆ […]
ವೈದ್ಯರ ನಿರ್ಲ್ಯಕ್ಷದಿಂದ ಹೆರಿಗೆಗೆಂದು ಬಂದಿದ್ದ ಗರ್ಭಿಣಿ ಮತ್ತು ಮಗು ಸಾವನಾಪ್ಪಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲ್ಲೂಕಿನ ನಿಡಗುರ್ಕಿ ಗ್ರಾಮದ ಅನುಷಾ ನಿನ್ನೆ ಸಂಜೆ ಆಸ್ಪತ್ರೆಗೆ ದಾಖಲಾಗಿದ್ದು, ಸರಿಯಾಗಿ ಚಿಕಿತ್ಸೆ ನೀಡಿಲ್ಲ .ಈ ಹಿನ್ನೆಲೆ ವೈದ್ಯರ ನಿರ್ಲ್ಯಕ್ಷತನದಿಂದ ತಾಯಿ ಮಗು ಸಾವನಾಪ್ಪಿದರೆಂದು ಸಂಬಂಧಿಕರು ಆಸ್ಪತ್ರೆ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಎಎಸ್ಪಿ ಜಾಹ್ನವಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನೂ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ […]