ಗುತ್ತಿಗೆ ವೈದ್ಯರನ್ನು ಒಂದು ತಿಂಗಳೊಳಗೆ ಕಾಯಂ ಮಾಡಲಾಗುತ್ತದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಭರವಸೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಗುತ್ತಿಗೆ ಆಧಾರಿತ ವೈದ್ಯರನ್ನು ಖಾಯಂಗೊಳಿಸಲು ಸಿಎಂ ಯಡಿಯೂರಪ್ಪ ನಿರ್ಧರಿಸಿದ್ದಾರೆ. ಈ ವಿಚಾರವನ್ನು ನಾಳೆ ಕ್ಯಾಬಿನೆಟ್ ಸಭೆಯಲ್ಲಿ ಪ್ರಸ್ತಾಪಿಸಲಾಗುತ್ತದೆ. ೨೦೧೭ ರಿಂದ ಗುತ್ತಿಗೆ ಆಧಾರಿತ ವೈದ್ಯರನ್ನು ಖಾಯಂಗೊಳಿಸಿಲ್ಲ. ಕೊರೊನಾದಂತಹ ಕಷ್ಟಕರ ಸಮಯದಲ್ಲೂ ಈ ವೈದ್ಯರು ಕರ್ತವ್ಯ ನಿರ್ವಹಿಸಿದ್ದಾರೆ. ಹೀಗಾಗಿ ಶೀಘ್ರವೇ ಈ ವೈದ್ಯರ ಸೇವೆಯನ್ನು ಖಾಯಂಗೊಳಿಸಲಾಗುತ್ತದೆ ಎಂದು ಭರವಸೆ ನೀಡಿದರು.

Advertisement

Wordpress Social Share Plugin powered by Ultimatelysocial