ದರ್ಶನ್ ಮತ್ತು ಸುದೀಪ್ ಕನ್ನಡ ಚಿತ್ರರಂಗದ ಎರಡು ದಿಕ್ಕುಗಳಂತಾಗಿಬಿಟ್ಟಿದ್ದರು. ಇನ್ನೆಂದೂ ಜೊತೆ ಸೇರಲಾರರು ಎಂದೇ ಎಲ್ಲರೂ ಭಾವಿಸಿದ್ರು. ಆದರೆ ಈ ಶೀಥಲ ಸಮರಕ್ಕೆ ಅಂತ್ಯ ಹಾಡುವ ಬಹಿರಂಗ ಸೂಚನೆಯನ್ನು ಸುದೀಪ್ ನೀಡಿದ್ದಾರೆ. ”ದರ್ಶನ್ ಸದಾ ನನ್ನ ಗೆಳೆಯನೇ” ಎಂದಿರುವ ಸುದೀಪ್ ಆ ಮೂಲಕ ತಾವೊಬ್ಬ ವಿಶಾಲ ಹೃದಯಿ ವ್ಯಕ್ತಿ ಎಂಬುದನ್ನೂ ಜಾಹೀರು ಮಾಡಿದ್ದಾರೆ.ಜೀ ಕುಟುಂಬ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸುದೀಪ್ಗೆ ನಿರೂಪಕರು ದರ್ಶನ್ ಹಾಗೂ ಸುದೀಪ್ ಒಟ್ಟಿಗಿರುವ ಚಿತ್ರವನ್ನು ತೋರಿಸಿ […]
#Sudeep
ಇಂದು ಬೆಳಗ್ಗೆ ನಟ ಕಿಚ್ಚ ಸುದೀಪ್ ಅವರು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದರು.ಮುಖ್ಯಮಂತ್ರಿ ನಿವಾಸದಲ್ಲಿ ಕಿಚ್ಚ ಸುದೀಪ್ ಭೇಟಿಯಾಗಿ ಕೆಲ ಕಾಲ ಮಾತುಕತೆ ನಡೆಸಿದರು. ಆದರೆ ಇದೊಂದು ಸೌಹಾರ್ದ ಮಾತುಕತೆಯಷ್ಟೇ ಎನ್ನಲಾಗಿದೆ.ಈ ಸಮಯದಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಉಪಸ್ಥಿತರಿದ್ದರು.
ಕಿರುತೆರೆ ಲೋಕದ ದೊಡ್ಡ ರಿಯಾಲಿಟಿ ಶೋ ಎನಿಸಿಕೊಂಡಿರುವ ‘ಬಿಗ್ ಬಾಸ್ ಕನ್ನಡ ಸೀಸನ್ 8’ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಈ ಬಾರಿ ದೊಡ್ಮನೆ ವಿನ್ಯಾಸ ಹೇಗಿರಲಿದೆ ಎಂಬ ಕೌತುಕದ ‘ಬಿಗ್ ಬಾಸ್ ಕನ್ನಡ ಸೀಸನ್ 8’ ಆರಂಭಕ್ಕಾಗಿ ಕಿರುತೆರೆ ಪ್ರೇಕ್ಷಕರು ಕಾದಿದ್ದಾರೆ. ‘ಕಲರ್ಸ್ ಕನ್ನಡ’ ವಾಹಿನಿಯಲ್ಲಿ ಫೆ.28ರಂದು ಅದ್ದೂರಿಯಾಗಿ ಲಾಂಚ್ ಆಗಲಿರುವ ಈ ರಿಯಾಲಿಟಿ ಶೋ ಬಗ್ಗೆ ಭಾರಿ ನಿರೀಕ್ಷೆ ಮನೆ ಮಾಡಿದೆ. ಸ್ಪರ್ಧಿಗಳು ಯಾರು ಎಂಬುದರ ಜೊತೆಗೆ ಈ […]