ಬಾಲಾಜಿ ದೇವಸ್ಥಾನವನ್ನು ಯಾವುದೇ ಕಾರಣಕ್ಕೂ ಮುಚ್ಚುವುದಿಲ್ಲ. ದೇವರ ದರ್ಶನವನ್ನು ನಿಲ್ಲಿಸುವುದಿಲ್ಲ ಎಂದು ತಿರುಮಲ ತಿರುಪತಿ ದೇವಸ್ಥಾನ ಟ್ರಸ್ಟ್ (ಟಿಟಿಡಿ) ಶುಕ್ರವಾರ ಸ್ಪಷ್ಟಪಡಿಸಿದೆ.ದೇಗುಲದ 15 ಪ್ರಮುಖ ಅರ್ಚಕರು ಸೇರಿ 140ಕ್ಕೂ ಹೆಚ್ಚು ಸಿಬ್ಬಂದಿ ಕರೋನಾ ಸೋಂಕಿಗೆ ಒಳಗಾಗಿದ್ದಾರೆ. ಆದರೂ ದೇಗುಲವನ್ನು ಮತ್ತೊಮ್ಮೆ ಮುಚ್ಚಿ, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಾರದಂತೆ ತಡೆಯುವುದಿಲ್ಲ ಎಂದು ಟಿಟಿಡಿಯ ಚೇರ್ಪರ್ಸನ್ ವೈ.ವಿ. ಸುಬ್ಬಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.ಮಾರ್ಚ್ನಲ್ಲಿ ದೇಶಾದ್ಯಂತ ಲಾಕ್ಡೌನ್ ಘೋಷಣೆಯಾದ ಹಿನ್ನೆಲೆಯಲ್ಲಿ ವಿಶ್ವಪ್ರಸಿದ್ಧ ತಿರುಪತಿ ದೇಗುಲವನ್ನು ಕೂಡ ಮುಚ್ಚಲಾಗಿತ್ತು. […]