ರಾಮನಗರ ಜಿಲ್ಲೆ ಬಿಡದಿಯ ಟೊಯೊಟಾ ಕಾರು ಕಂಪನಿಯ ನೌಕರ ಕಳೆದ ಎರಡು ದಿನಗಳ ಹಿಂದೆ ಉಸಿರಾಟದ ತೊಂದರೆಯಿಂದ ಮೃತಪಟ್ಟಿದ್ದಾನೆ. ಆತನ ಗಂಟಲು ದ್ರವ ಪರೀಕ್ಷೆಯಲ್ಲಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, ಏಷ್ಯಾದ ದೊಡ್ಡ ಕಾರು ತಯಾರಿಕಾ ಕಂಪನಿಯಾದ ಟೊಯೊಟಾ ಕಾರ್ಖಾನೆಯಲ್ಲಿ ಕೊರೊನಾ ವೈರಸ್ ಭೀತಿ ಉಂಟಾಗಿದೆ. ಕೊರೊನಾ ವೈರಸ್ ಸೋಂಕಿಗೆ ಬಲಿಯಾದ ಟೊಯೊಟಾ ಕಾರ್ಮಿಕ ಬೆಂಗಳೂರಿನ ವಿಜಯನಗರದ ನಿವಾಸಿಯಾಗಿದ್ದು, ಮೃತನ ತಂದೆ ಕೂಡ ಕಳೆದ ಜುಲೈ 2 ರಂದು ಕೋವಿಡ್ […]