ರಾಜ್ಯದಲ್ಲಿ ಕೊರೊನಾ ಅಬ್ಬರಿಸುತ್ತಿದ್ದು, ಇದರಿಂದಾಗಿ ಲಾಕ್ ಡೌನ್ ಘೋಷಣೆ ಮಾಡಲಾಗಿತ್ತು. ಇದರ ಪರಿಣಾಮ ಸರ್ಕಾರಕ್ಕೆ ಆದಾಯದ ಕೊರತೆಯಾಗಿದ್ದು ಮಿತವ್ಯಯ ಸಾಧಿಸುವ ಉದ್ದೇಶದಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ. ಅದೇನೆಂದರೆ ಸರ್ಕಾರಿ ನೌಕರರಿಗೆ ವರ್ಗಾವಣೆ ಪ್ರಕ್ರಿಯೆ ಕುರಿತಂತೆ ರಾಜ್ಯ ಸರ್ಕಾರ ಮಹತ್ವದ ಸುದ್ದಿಯೊಂದನ್ನು ನೀಡಿದೆ. ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ಬ್ರೇಕ್ ಹಾಕಲಾಗಿದ್ದು, ವಿಶೇಷ ಪ್ರಕರಣಗಳಲ್ಲಿ ಮುಖ್ಯಮಂತ್ರಿಗಳ ಅನುಮೋದನೆ ಮೇರೆಗೆ ಸರ್ಕಾರಿ ನೌಕರರ ವರ್ಗಾವಣೆ ಮಾಡಬಹುದೆಂದು ತಿಳಿಸಲಾಗಿದೆ. ಅಲ್ಲದೇ ಬಹಳಷ್ಟು ಸರ್ಕಾರಿ ನೌಕರರು […]