ಹೆರಿಗೆಗೆಂದು ದಾಖಲಾಗಿದ್ದ ಗರ್ಭಿಣಿಗೆ ಕೋವಿಡ್ ತಪಾಸಣೆ ಮಾಡಿದಾಗ ಪಾಸಿಟಿವ್ ಬಂದ ಕಾರಣ ಹೆರಿಗೆ ಮಾಡಿಸಲು ನಿರಾಕರಿಸಿದ ಖಾಸಗಿ ಆಸ್ಪತ್ರೆ ಬಳಿಕ ಶಾಸಕ ಯು.ಟಿ. ಖಾದರ್ ಅವರ ಪ್ರಯತ್ನದ ಫಲವಾಗಿ ಹೆರಿಗೆ ಮಾಡಿಸಲು ಸಮ್ಮತಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಗರ್ಭಿಣಿ ಹೆರಿಗೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ರವಿವಾರ ಕೋವಿಡ್ ಟೆಸ್ಟ್ ಮಾಡಿದಾಗ ಪಾಸಿಟಿವ್ ಬಂದಿತ್ತು. ಆಗ ಆಸ್ಪತ್ರೆಯವರು ಹೆರಿಗೆ ಮಾಡಿಸಲು ನಿರಾಕರಿಸಿದರು. ಗರ್ಭಿಣಿಯ ಕುಟುಂಬದವರು ವಿಷಯವನ್ನು ಖಾದರ್ ಅವರ ಗಮನಕ್ಕೆ […]