ಉತ್ತರ ಪ್ರದೇಶದ ಕಾನ್ಪುರ ಸಮೀಪದ ಬಿಕ್ರು ಗ್ರಾಮದಲ್ಲಿ ನಡೆದ ಎಂಟು ಪೊಲೀಸರ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಗ್ಯಾಂಗ್ಸ್ಟರ್ ವಿಕಾಸ್ ದುಬೆಯ, ಆಪ್ತ ಸಹಾಯಕ ಅಮರ್ ದುಬೆಯನ್ನು ಉತ್ತರ ಪ್ರದೇಶದ ಹಮೀರ್ ಪುರ್ ಎಂಬಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದೆ. ಉತ್ತರ ಪ್ರದೇಶ ವಿಶೇಷ ಪೊಲೀಸ್ ತಂಡ (ಎಸ್ ಟಿಎಫ್) ಲಖನೌದಿಂದ 150 ಕಿ.ಮೀ ದೂರದಲ್ಲಿರುವ ಹಮೀರ್ ಪುರದ ಮೌದಾಹಾದಲ್ಲಿ ಮುಂಜಾನೆ ಕಾರ್ಯಾಚರಣೆ ನಡೆಸಿ […]