ವಿರುದ್ಧ ಸತತ ವಾಗ್ದಾಳಿ ನಡೆಸುತ್ತಿರುವ ಮೌರ್ಯ, ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ ಸೇರ್ಪಡೆ ವಿಚಾರದಲ್ಲಿ ನಿರಂತರವಾಗಿ ವಿರೋಧಾಭಾಸದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ‘ನನ್ನ ನಡೆಯು ಬಿಜೆಪಿಯಲ್ಲಿ ಭೂಕಂಪನ ಉಂಟುಮಾಡಿದೆ’ ಎಂದು ಅವರು ಹೇಳಿಕೊಂಡಿದ್ದಾರೆ. ತಮ್ಮೊಂದಿಗೆ ಇನ್ನೂ ಅನೇಕ ಸಚಿವರು ಮತ್ತು ಶಾಸಕರು ಬಿಜೆಪಿ ತೊರೆಯಲಿದ್ದಾರೆ ಎಂದು ಬಾಂಬ್ ಸ್ಫೋಟಿಸಿದ್ದಾರೆ. ವಿಧಾನಸಭೆ ಚುನಾವಣೆಗೆ ದಿನಾಂಕ ನಿಗದಿಯಾಗಿರುವ ಸಂದರ್ಭದಲ್ಲಿಯೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಸಮಾಜವಾದಿ ಪಕ್ಷಕ್ಕೆ ಜಿಗಿಯುವ ಸೂಚನೆ ನೀಡುವ […]