ಭಾರತೀಯ ಕ್ರಿಕೆಟ್ ತಂಡದ ಆಟಗಾರ ದಿನೇಶ್ ಕಾರ್ತಿಕ್ ಪತ್ನಿ ಹಾಗೂ ಸ್ಕ್ವಾಷ್ ಆಟಗಾರ್ತಿ ದೀಪಿಕಾ ಪಲ್ಲಿಕಲ್ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ.ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೊಳ್ಳುವ ಮೂಲಕ ದಂಪತಿ ಸಂಭ್ರಮಿಸಿದ್ದಾರೆ. ಮಕ್ಕಳಿಗೆ ಕಬೀರ್ ಪಲ್ಲಿಕಲ್ ಕಾರ್ತಿಕ್ ಹಾಗೂ ಜಿಯಾನ್ ಪಲ್ಲಿಕಲ್ ಕಾರ್ತಿಕ್ ಎಂದು ಹೆಸರಿಡಲಾಗಿದೆ.ದಿನೇಶ್ ಕಾರ್ತಿಕ್ ಟಿ20 ವಿಶ್ವಕಪ್‌ನಲ್ಲಿ ವೀಕ್ಷಕ ವಿವರಣೆಕಾರನಾಗಿ ಯುಎಇಗೆ ತೆರಳಿದ್ದರು. ಇದೀಗ ಮಾಡಿರುವ ಟ್ವಿಟ್ಟರ್ ಪೋಸ್ಟ್‌ನ ಮೂಲಕ ದಿನೇಶ್ ಕಾರ್ತಿಕ್ ತವರಿಗೆ […]

ಯುರೋ 2020 ಪಂದ್ಯಾವಳಿಯ ಸಮಯದಲ್ಲಿ ಮಾಧ್ಯಮ ಸಂದರ್ಶನದ ವೇಳೆ ಟೇಬಲ್​ ಮೇಲೆ ಇರಿಸಲಾಗಿದ್ದ ಕೋಕಾ ಕೋಲಾ ಬಾಟಲಿಗಳನ್ನು ರೊನಾಲ್ಡೋ ಪಕ್ಕಕ್ಕೆ ಎತ್ತಿಟ್ಟಿದ್ದರು. ಇದು ವಿಶ್ವ ಮಟ್ಟದಲ್ಲಿ ಬಹಳ ಚರ್ಚೆಗೂ ಕೂಡಾ ಗ್ರಾಸವಾಗಿತ್ತು.ಇದೀಗ ಹಂತದ್ದೆ ಘಟನೆಯನ್ನ ಡೆವಿಡ್‌ ವಾರ್ನರ್ ಮರುಸೃಷ್ಟಸಿದ್ದಾರೆ. ಶ್ರೀಲಂಕಾ ವಿರುದ್ಧ ಗೆಲುವನ್ನು ದಾಖಲಿಸಿದ ಬಳಿಕ ವಾರ್ನರ್​ ಪತ್ರಕರ್ತರ ಜೊತೆ ಮಾತನಾಡಲು ಆಗಮಿಸಿದ್ದರು. ಅಲ್ಲಿದ್ದ ಕೋಕ್​ ಬಾಟಲಿಗಳನ್ನು ನೋಡಿದ ವಾರ್ನರ್​ ಸಿಬ್ಬಂದಿಯ ಬಳಿ ನಾನು ಇದನ್ನು ತೆಗೆಯಬಹುದೇ..? ಎಂದು ಕೇಳಿದ್ದಾರೆ. […]

ನಟ ಶರಣ್ ಅಫೀಶಿಯಲ್ ಹೆಸರಿನಲ್ಲಿ ಆರಂಭವಾಗಿರೊ ಯೂಟ್ಯೂಬ್ ಚಾನಲ್, ಆರಂಭವಾಗಿ ಒಂದು ದಿನ ಆಗಿದೆಯಷ್ಟೆ. ಇದರ ಬಗ್ಗೆ ಇತ್ತೀಚೆಗಷ್ಟೆ ವೀಡಿಯೋ ಒಂದನ್ನು ಮಾಡಿ ಮಾಹಿತಿ ಹಂಚಿಕೊಂಡ ಶರಣ್, ನಾನು ನನ್ನದೇ ಆದ ಯೂಟ್ಯೂಬ್ ಚಾನೆಲ್‌ ಒಂದನ್ನು ಆರಂಭಿಸುತ್ತಿದ್ದೇನೆ. ಇದರ ಹಿಂದೆ ದೊಡ್ಡ ಉದ್ದೇಶ ಏನಿಲ್ಲ. ನನ್ನ ಜೀವನದ ಆಗುಹೋಗುಗಳು, ನನ್ನ ನಟನೆಯ ಸಿನಿಮಾ ಮಾಹಿತಿಗಳು ಹಾಗೂ ನನ್ನ ಹವ್ಯಾಸಗಳನ್ನು ನಿಮ್ಮ ಮುಂದೆ ಇಡುತ್ತೇನೆ. ಹೀಗಾಗಿ ಇವೆಲ್ಲವನ್ನು ಹಂಚಿಕೊಳ್ಳಲು ನನಗೆ ಇದೆ […]

ಕಾಶ್ಮೀರದಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಚರಣೆಯಲ್ಲಿ ಒಬ್ಬ ಉಗ್ರ ಹತನಾಗಿದ್ದಾನೆ. ಬಾರಮುಲ್ಲಾ ಜಿಲ್ಲೆಯ ಚೆರ್ದಾರಿ ಪ್ರದೇಶದಲ್ಲಿ ಭದ್ರತಾ ಪಡೆಗಳು ಪಥಸಂಚಲನ ನಡೆಸುತ್ತಿದ್ದಾಗ ಉಗ್ರರು ಗುಂಡಿನ ದಾಳಿ ನಡೆಸಿದರು. ಭದ್ರತಾ ಪಡೆಗಳು ನಡೆಸಿದ ಪ್ರತಿದಾಳಿಗೆ ಓರ್ವ ಉಗ್ರ ಹತನಾಗಿದ್ದಾನೆ ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ.   ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ : https://play.google.com/store/apps/details?id=com.speed.newskannada

ದೆಹಲಿ-ಹರಿಯಾಣ ಗಡಿಯಲ್ಲಿ ರೈತರ ಪ್ರತಿಭಟನಾ ಸ್ಥಳದ ಬಳಿ ವೇಗವಾಗಿ ಬಂದ ಟ್ರಕ್ಕೊಂದು ಡಿವೈಡರ್ ಮೇಲೆ ಹರಿದ ಪರಿಣಾಮ ಮೂವರು ಮಹಿಳೆಯರು ಸಾವನ್ನಪ್ಪಿದ ಘಟನೆ ನಡೆದಿದೆ. ಟ್ರಕ್ ಢಿಕ್ಕಿ ಹೊಡೆದಾಗ ಮಹಿಳೆಯರು ಡಿವೈಡರ್ ಮೇಲೆ ಕುಳಿತು ಆಟೋ ರಿಕ್ಷಾಕ್ಕಾಗಿ ಕಾಯುತ್ತಿದ್ದರು ಎನ್ನಲಾಗಿದೆ. ಅಪಘಾತದ ಸ್ಥಳದಿಂದ ಟ್ರಕ್ ಚಾಲಕ ಓಡಿಹೋಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟರೆ, ಒಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ ಮಹಿಳೆಯರು […]

ದೇಶದಲ್ಲಿ ತೀವ್ರವಾಗಿ ಆಹಾರ ಬಿಕ್ಕಟ್ಟು ಎದುರಿಸುವಂತಾಗಿದ್ದು, ಜನರು 2025ರವರೆಗೆ ಕಡಿಮೆ ಪ್ರಮಾಣದಲ್ಲಿ ಆಹಾರವನ್ನು ಸೇವಿಸುವಂತೆ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್ ಉನ್ ಮನವಿ ಮಾಡಿಕೊಂಡಿರುವುದಾಗಿ ವರದಿ ತಿಳಿಸಿದೆ.ಉತ್ತರಕೊರಿಯಾದ ಸರ್ವಾಧಿಕಾರಿ ಕಿಮ್ ಕಠಿಣ ಮತ್ತು ವಿಲಕ್ಷಣ ಆದೇಶಗಳನ್ನು ಹೊರಡಿಸುವ ಮೂಲಕ ಕುಖ್ಯಾತಿ ಗಳಿಸಿದ್ದು, ಇದೀಗ ಅಂತಹ ಮತ್ತೊಂದು ಹೊಸ ಆದೇಶವನ್ನು ಹೊರಡಿಸಿರುವುದಾಗಿ ವಿವರಿಸಿದೆ.ದೇಶದಲ್ಲಿನ ಆಹಾರ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಅಧಿಕಾರಿಗಳು ಕೃಷಿ ಉತ್ಪಾದನೆಯನ್ನು ಹೆಚ್ಚಳ ಮಾಡಲು ಮಾರ್ಗೋಪಾಯ ಕಂಡುಹಿಡಿಯಬೇಕೆಂದು ಕಿಮ್ ಮನವಿ […]

ವಿಶ್ವಾದ್ಯಂತ ಕೊರೋನಾ ಪ್ರಕರಣಗಳು ಏರಿಕೆ -ಇಳಿಕೆ ಕಾಣುತ್ತಿರುತ್ತವೆ. ಕೊಂಚ ಕಡಿಮೆಯಾಗಿದ್ದ ಪ್ರಕರಣಗಳು ಮತ್ತೆ ಏರಿಕೆಯಾದಂತೆ ಕಾಣುತ್ತಿದೆ. ಉಕ್ರೇನ್‌ನಲ್ಲಿ ಕಳೆದ 24 ಗಂಟೆಗಳಲ್ಲಿ 26,071 ಹೊಸ ಕೋವಿಡ್‌-19 ಪ್ರಕರಣಗಳು ದಾಖಲಾಗಿವೆ. ಇಂದು ದಾಖಲಾದ ಪ್ರಕರಣಗಳು ಇಲ್ಲಿಯವರೆಗೆ ದಾಖಲಾಗಿರುವ ನಿತ್ಯದ ಗರಿಷ್ಠ ಸೋಂಕಿನ ಪ್ರಕರಣಗಳಾಗಿವೆ ಎಂದು ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ. ಇನ್ನು ಒಂದೇ ದಿನದಲ್ಲಿ 576 ಮಂದಿ ಮೃತಪಟ್ಟಿದ್ದಾರೆ. ದೇಶದಲ್ಲಿ ಕೋವಿಡ್‌ ದೃಢಪಟ್ಟವರ ಸಂಖ್ಯೆ 28 ಲಕ್ಷಕ್ಕೆ ಏರಿದ್ದು, ಮೃತಪಟ್ಟವರ ಸಂಖ್ಯೆ […]

ಅಪ್ರಾಪ್ತೆ ಬಾಲಕಿ ಮೇಲೆ ಅತ್ಯಾಚಾರ  ಖಂಡಿಸಿ ಬಿಜಾಪುರ ಜಿಲ್ಲೆ ಸಿಂದಗಿಯಲ್ಲಿ ಬಾಲಕಿಯ ಪೋಷಕರು ಸೇರಿದಂತೆ ಸಾರ್ವಜನಿಕರು  ಪ್ರತಿಭಟನೆ ಮಾಡಿದ್ರು. ತಾಲೂಕಿನ ಬ್ಯಾಕೋಡ್ ಪಂಚಾಯತಿ ವ್ಯಾಪ್ತಿಯ ಅಂತರಂಗಿ ಗ್ರಾಮದ ಬಾಲಕಿ ಮೇಲೆ ಅತ್ಯಾಚಾರ ನಡೆಸಲಾಗಿತ್ತು. ಅಸಯ್ಯ ಕೃತ್ಯದಲ್ಲಿ ಭಾಗಿಯಾದ ವ್ಯಕ್ತಿಯನ್ನು  ಗಲ್ಲಿಗೇರಿಸಬೇಕೆಂದು  ಪಟ್ಟಣದ ವಿವೇಕಾನಂದ ವೃತ್ತದಲ್ಲಿ  ಪ್ರತಿಭಟನೆ ನಡೆಸಿದರು.ಇದೇ ವೇಳೆ  ತಹಸಿಲ್ದಾರ್ ಸಂಜೀವ್ ಕುಮಾರ್ ದಾಸರ್ ಅವರಿಗೆ ಮನವಿ ಪತ್ರ ಸಲ್ಲಿಸಿದ್ರು .   ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ […]

ಕನ್ನಡ ರಾಜ್ಯೋತ್ಸವಕ್ಕೆ ಕೆಲವು ದಿನಗಳು ಬಾಕಿ ಇದ್ದರೂ ಇಂದಿನಿಂದಲೇ ಸಂಭ್ರಮಾಚರಣೆ ಆರಂಭವಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಈ ಬಾರಿ ಕನ್ನಡ ರಾಜ್ಯೋತ್ಸವವನ್ನು ವಿಶಿಷ್ಠವಾಗಿ ಆಚರಿಸಲಾಗುತ್ತಿದ್ದು, ಇಂದು ಬಾಗಲಕೋಟೆಯಲ್ಲಿ ವಿವಿಧ ಸಂಘಟನೆಯವರು ಆಚರಣೆ ಮಾಡಿದರು.       ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ಶಿಕ್ಷಕ ಮತ್ತು ಅಧ್ಯಾಪಕರು,  ಕಾರ್ಖಾನೆಗಳ ಸಿಬ್ಬಂದಿವರ್ಗ,  ಸಾರ್ವಜನಿಕರು  ಸೇರಿದಂತೆ ಹೆಚ್ಚೆಚ್ಚು ಜನರು  ಭಾಗವಹಿಸಿ  ಆಚರಣೆಯನ್ನು ಮಾಡಿದರು. ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ : https://play.google.com/store/apps/details?id=com.speed.newskannada  

ರಾಜ್ಯಾದಂತ್ಯ  ಶಾಲಾ-ಕಾಲೇಜುಗಳು ಆರಂಭವಾಗಿವೆ. ಆದರೆ ಸರಿಯಾಗಿ ಬಸ್‍ಗಳ ವ್ಯವಸ್ಥೆ ಇಲ್ಲದೆ… ಮಕ್ಕಳು ಜೋತು ಬಿದ್ದು ಬಸ್‍ನಲ್ಲಿ ಪ್ರಯಾಣ ಮಾಡಿರುವ ಘಟನೆ ಬೆಳಗಾವಿಯಲ್ಲಿ ಕಂಡು ಬಂದಿದೆ.ಜಿಲ್ಲೆಯ ಬೆಳಗುಂದಿ ಗ್ರಾಮಕ್ಕೆ ಹೋಗುವ ಬಸ್‍ನಲ್ಲಿ ವಿದ್ಯಾರ್ಥಿಗಳು ಬಸ್‍ನಲ್ಲಿ ಜೋತು ಬಿದ್ದಿದ್ದ ದೃಶ್ಯ ಕಂಡು ಬಂದಿದ್ದು, ಈ ರೀತಿ ಬಸ್‍ನಲ್ಲಿ ಜೋತು ಬಿದ್ದು ಹೋಗುವಾಗ ವಿದ್ಯಾರ್ಥಿಗಳ ಜೀವಕ್ಕೆ ಏನಾದ್ರು ಕುತ್ತು ಬಂದರೆ ಯಾರು ಹೊಣೆ, ಆದ್ದರಿಂದ ಕೂಡಲೇ  ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್  ಇತ್ತ ಲಕ್ಷ್ಯ […]

Advertisement

Wordpress Social Share Plugin powered by Ultimatelysocial