ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಕನ್ನಡಕ್ಕಾಗಿ ನಾವು ಅಭಿಯಾನಕ್ಕೆ ಬಿಬಿಎಂಪಿ ಕೇಂದ್ರ ಕಛೇರಿಯ ಆವರಣದ ಮುಂಭಾಗದಲ್ಲಿ ಮಾನ್ಯ ಆಡಳಿತಗಾರರ ಸಮ್ಮುಖದಲ್ಲಿ ಚಾಲನೆ ನೀಡಲಾಯಿತು.ಅಭಿಯಾನದ ಅಂಗವಾಗಿ ಪಾಲಿಕೆ ಅಧಿಕಾರಿ,ನೌಕರರುಗಳು, 1000ಕ್ಕೂ ಹೆಚ್ಚು ಅಧಿಕಾರಿ,ನೌಕರರು ಭಾಗವಹಿಸಿ ನಾಡಗೀತೆ, ಬಾರಿಸು ಕನ್ನಡ ಡಿಂಡಿಮವ, ನಿತ್ಯೋತ್ಸವ ಹಾಗೂ ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು ಎಂಬ ಗೀತೆಗಳನ್ನು ಹಾಡಲಾಯಿತು ಹಾಗೂ ಸಂಕಲ್ಪ ವನ್ನು ತೆಗೆದುಕೊಳ್ಖಲಾಯಿತು…ಈ ವೇಳೆ ವಿಶೇಷ ಆಯುಕ್ತರುಗಳು ಅಧಿಕಾರಿ,ನೌಕರರುಗಳು ಉಪಸ್ಥಿತರಿದ್ದರು ಹಾಗೂ ಬಿಬಿಎಂಪಿಯ ಎಲ್ಲಾ ವಲಯಗಳಲ್ಲಿಯೂ […]
#viralupdates
ಕನ್ನಡ ರಾಜ್ಯೋತ್ಸವಕ್ಕೆ ಕೆಲವು ದಿನಗಳು ಬಾಕಿ ಇದ್ದರೂ ಇಂದಿನಿಂದಲೇ ಸಂಭ್ರಮಾಚರಣೆ ಆರಂಭವಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಈ ಬಾರಿ ಕನ್ನಡ ರಾಜ್ಯೋತ್ಸವವನ್ನು ವಿಶಿಷ್ಠವಾಗಿ ಆಚರಿಸಲಾಗುತ್ತಿದ್ದು, ಇಂದು ಬಾಗಲಕೋಟೆಯಲ್ಲಿ ವಿವಿಧ ಸಂಘಟನೆಯವರು ಆಚರಣೆ ಮಾಡಿದರು. ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ಶಿಕ್ಷಕ ಮತ್ತು ಅಧ್ಯಾಪಕರು, ಕಾರ್ಖಾನೆಗಳ ಸಿಬ್ಬಂದಿವರ್ಗ, ಸಾರ್ವಜನಿಕರು ಸೇರಿದಂತೆ ಹೆಚ್ಚೆಚ್ಚು ಜನರು ಭಾಗವಹಿಸಿ ಆಚರಣೆಯನ್ನು ಮಾಡಿದರು. ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ : https://play.google.com/store/apps/details?id=com.speed.newskannada
ಕನ್ನಡ ರಾಜ್ಯೋತ್ಸವ ಅಂಗವಾಗಿ ನೂತನ ಲಕ್ಷ ಕಂಠ ಗೀತಗಾಯನ ಕಾರ್ಯವನ್ನು ಕೊರಟಗೆರೆ ತಾಲ್ಲೂಕು ಆಡಳಿತ ವತಿಯಿಂದ ಆಯೋಜಿಸಲಾಯಿತು. ಈ ಒಂದು ಸುಂದರ ಲಕ್ಷಕಂಠದಲ್ಲಿ ನಾಡಗೀತೆ ಸೇರಿದಂತೆ ಮೂರು ಸುಮದುರ ಕನ್ನಡ ಗೀತೆಗಳ ಕಾರ್ಯಕ್ರಮವನ್ನು ಆಯೋಜಿಸಲಾಯಿತ್ತು. ರಾಜ್ಯಾದ್ಯಂತ ಏಕಕಾಲದಲ್ಲಿ ನಾಡಿನ ಪ್ರೇಮವನ್ನು ಸಾರುವ ಗೀತೆಯನ್ನು ಹಾಡಲಾಯಿತು. ನಾಡು ನುಡಿ ಜಲ ಸೇರಿದಂತೆ ವ್ಯಕ್ತಪಡಿಸುವಂತಹ ಸುಮದುರ ಮೂರು ಗೀತೆಗಳನ್ನು ಶಾಲಾಮಕ್ಕಳು ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಈ ಗೀತಗಾಯನ ಕಾರ್ಯಕ್ರಮದಲ್ಲಿ ಹಾಡಿದರು. […]
ರಾಜ್ಯಾದಂತ್ಯ ಶಾಲಾ-ಕಾಲೇಜುಗಳು ಆರಂಭವಾಗಿವೆ. ಆದರೆ ಸರಿಯಾಗಿ ಬಸ್ಗಳ ವ್ಯವಸ್ಥೆ ಇಲ್ಲದೆ… ಮಕ್ಕಳು ಜೋತು ಬಿದ್ದು ಬಸ್ನಲ್ಲಿ ಪ್ರಯಾಣ ಮಾಡಿರುವ ಘಟನೆ ಬೆಳಗಾವಿಯಲ್ಲಿ ಕಂಡು ಬಂದಿದೆ.ಜಿಲ್ಲೆಯ ಬೆಳಗುಂದಿ ಗ್ರಾಮಕ್ಕೆ ಹೋಗುವ ಬಸ್ನಲ್ಲಿ ವಿದ್ಯಾರ್ಥಿಗಳು ಬಸ್ನಲ್ಲಿ ಜೋತು ಬಿದ್ದಿದ್ದ ದೃಶ್ಯ ಕಂಡು ಬಂದಿದ್ದು, ಈ ರೀತಿ ಬಸ್ನಲ್ಲಿ ಜೋತು ಬಿದ್ದು ಹೋಗುವಾಗ ವಿದ್ಯಾರ್ಥಿಗಳ ಜೀವಕ್ಕೆ ಏನಾದ್ರು ಕುತ್ತು ಬಂದರೆ ಯಾರು ಹೊಣೆ, ಆದ್ದರಿಂದ ಕೂಡಲೇ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಇತ್ತ ಲಕ್ಷ್ಯ […]
ದರ್ಶನ್ ಮತ್ತು ಸುದೀಪ್ ಕನ್ನಡ ಚಿತ್ರರಂಗದ ಎರಡು ದಿಕ್ಕುಗಳಂತಾಗಿಬಿಟ್ಟಿದ್ದರು. ಇನ್ನೆಂದೂ ಜೊತೆ ಸೇರಲಾರರು ಎಂದೇ ಎಲ್ಲರೂ ಭಾವಿಸಿದ್ರು. ಆದರೆ ಈ ಶೀಥಲ ಸಮರಕ್ಕೆ ಅಂತ್ಯ ಹಾಡುವ ಬಹಿರಂಗ ಸೂಚನೆಯನ್ನು ಸುದೀಪ್ ನೀಡಿದ್ದಾರೆ. ”ದರ್ಶನ್ ಸದಾ ನನ್ನ ಗೆಳೆಯನೇ” ಎಂದಿರುವ ಸುದೀಪ್ ಆ ಮೂಲಕ ತಾವೊಬ್ಬ ವಿಶಾಲ ಹೃದಯಿ ವ್ಯಕ್ತಿ ಎಂಬುದನ್ನೂ ಜಾಹೀರು ಮಾಡಿದ್ದಾರೆ.ಜೀ ಕುಟುಂಬ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸುದೀಪ್ಗೆ ನಿರೂಪಕರು ದರ್ಶನ್ ಹಾಗೂ ಸುದೀಪ್ ಒಟ್ಟಿಗಿರುವ ಚಿತ್ರವನ್ನು ತೋರಿಸಿ […]
ರಕ್ಷಿತ್ ಶೆಟ್ಟಿ ಅಭಿನಯದ 777 ಚಾರ್ಲಿ ರಿಲೀಸ್ ಡೇಟ್ ಆನೌನ್ಸ್ ಮಾಡಿದೆ ಇದರ ಬೆನ್ನಲ್ಲೆ ಈಗ ಮದಗಜ ಕೂಡ ಅಬ್ಬರಿಸೋಕೆ ರೆಡಯಾಗುತ್ತಿದೆ ಅನ್ನೋದು ಲೇಟೆಸ್ಟ್ ಸುದ್ದಿ. ಮಹೇಶ್ ಕುಮಾರ್ ನಿರ್ದೇಶನದ ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ಬಹುನಿರೀಕ್ಷಿತ ‘ಮದಗಜ’ ಸಿನಿಮಾದ ಟೀಸರ್ ಅನ್ನು ಕನ್ನಡದಲ್ಲಿ ಇತ್ತೀಚಿಗಷ್ಟೆ ಬಿಡುಗಡೆ ಮಾಡಲಾಗಿತ್ತು ಇದೀಗ ತೆಲುಗು ಹಾಗೂ ತಮಿಳಿನಲ್ಲಿ ಈ ಟೀಸರ್ ರಿಲೀಸ್ ಮಾಡಲಿದ್ದಾರೆ ಇಗಾಗಲೇ ಅಬ್ಬರ ಪ್ರಚಾರ ಕಾರ್ಯ ಕೂಡ ಆರಂಭವಾಗಿದೆ.ಉಮಾಪತಿ […]
ಭಾರತದಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ದೊರೆಯುವ ಅತ್ಯುನ್ನತ ಪ್ರಶಸ್ತಿಯಾದ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಗೆ 11 ಕ್ರೀಡಾಪಟುಗಳ ಹೆಸರನ್ನು ಶಿಫಾರಸು ಮಾಡಲಾಗಿದೆ. ಈ ಬಾರಿ ಟೋಕಿಯೋದಲ್ಲಿ ನಡೆದ ಒಲಿಂಪಿಕ್ಸ್ನಲ್ಲಿ ಚಿನ್ನದ ಪದಕ ಗೆದ್ದ ಭಾರತೀಯ ಕ್ರೀಡಾಪಟು ನೀರಜ್ ಚೋಪ್ರ ಸೇರಿದಂತೆ 11 ಕ್ರೀಡಾಪಟುಗಳ ಹೆಸರು ಈ ಪಟ್ಟಿಯಲ್ಲಿದೆ. ಇನ್ನು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಗೆ ಭಾರತದ ಹಿರಿಯ ಕ್ರಿಕೆಟ್ ಆಟಗಾರ್ತಿ […]
ಸೂಪರ್ಸ್ಟಾರ್ ರಜನಿಕಾಂತ್ ಅಭಿನಯದ ‘ಅಣ್ಣಾತ್ತೆ’ ಚಿತ್ರದ ಟ್ರೈಲರ್ ಯೂಟ್ಯೂಬ್ನಲ್ಲಿ ಬುಧವಾರ ಸಂಜೆ 6 ಗಂಟೆಗೆ ಬಿಡುಗಡೆಯಾಗಿತ್ತು. ರಜನಿಕಾಂತ್ ಅಂಗಿ, ಪಂಚೆಯಲ್ಲಿ ಕಾಣಿಸಿಕೊಂಡು ಮಾಸ್ ಲುಕ್ ನೀಡಿದ್ದಾರೆ.ಟ್ರೈಲರ್ ನೋಡಿದರೆ ಇದೊಂದು ಪಕ್ಕಾ ಕೌಟುಂಬಿಕ ಸಿನಿಮಾದಂತೆ ಕಾಣುತ್ತದೆ. ಹಳ್ಳಿಯ ಕಥಾ ಹಂದರ ಇರುವ ಈ ಸಿನಿಮಾದಲ್ಲಿ ಕೀರ್ತಿ ಸುರೇಶ್ ತಂಗಿ ಪಾತ್ರದಲ್ಲಿ ನಟಿಸಿದ್ದಾರೆ. ರಜನಿಯ ವಿಭಿನ್ನ ಸ್ಟೈಲ್ಗೆ ಅಭಿಮಾನಿಗಳು ಫಿದಾ ಆಗಿರುವುದು ಸುಳ್ಳಲ್ಲ. ನವೆಂಬರ್ 4 ರಂದು ದೀಪಾವಳಿ ಹಬ್ಬಕ್ಕೆ ‘ಅಣ್ಣಾತ್ತೆ’ ಚಿತ್ರಮಂದಿರಗಳಲ್ಲಿ […]
ಶ್ರೀ ವಿಜಯ ಮಹಾಂತೇಶ ವಿದ್ಯಾವರ್ಧಕ ಸಂಘದ ಸಂಯುಕ್ತ ಆಶ್ರಯದಲ್ಲಿ “ಆಝಾದಿ ಕಾ ಅಮೃತ ಮಹೋತ್ಸವ” ನಡೆಯಿತು.. ಬಾಗಲಕೋಟೆಯ ಇಳಕಲ್ ನಗರದಲ್ಲಿ ನಡೆದ ಕಾರ್ಯಕ್ರಮದ ಘನ ಅಧ್ಯಕ್ಷತೆಯನ್ನು ಡಾ.ಬದ್ರಶೆಟ್ಟಿ ವಹಿಸಿದ್ದರು .. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಆರೋಗ್ಯ ಒಂದು ಭಾಗ್ಯ, ಅದನ್ನು ಕಾಪಾಡಿಕೊಂಡು ದೀರ್ಘಕಾಲ ಸು:ಖ, ಸಂತೋಷ ನೆಮ್ಮದಿಯಿಂದ ಬಾಳಬೇಕಾದರೆ, ಕ್ರಮಬದ್ಧವಾದ ವ್ಯಾಯಾಮ, ಆಹಾರ ಹಾಗೂ ಶಾಂತವಾದ ಮನಸ್ಸನ್ನು ಹೊಂದಬೇಕು ಎಂದು ಹೇಳಿದ್ರು … ಆಯುರ್ವೇದ ಭಾರತೀಯರು ಜಗತ್ತಿಗೆ ನೀಡಿದ […]
ಜಾಗತಿಕ ಮಟ್ಟದಲ್ಲಿ ಲಸಿಕೆಗಳ ತುರ್ತು ಬಳಕೆಗೆ ಕೋವ್ಯಾಕ್ಸಿನ್ ನ್ನು ಸೇರಿಸುವುದಕ್ಕಾಗಿ ಡಬ್ಲ್ಯುಹೆಚ್ಒ ಭಾರತ್ ಬಯೋಟೆಕ್ ನಿಂದ ಮತ್ತಷ್ಟು ಸ್ಪಷ್ಟನೆಗಳನ್ನು ಕೇಳಿದೆ. ತುರ್ತು ಬಳಕೆಗೆ ಅನುಮೋದನೆ ನೀಡುವುದಕ್ಕೂ ಮುನ್ನ ಅಂತಿಮ ಹಂತದ ಅಪಾಯ-ಪ್ರಯೋಜನ ಮೌಲ್ಯಮಾಪನವನ್ನು ನಡೆಸುವುದಕ್ಕೆ ಈ ಹೆಚ್ಚುವರಿ ಸ್ಪಷ್ಟನೆಗಳನ್ನು ಡಬ್ಲ್ಯುಹೆಚ್ಒ ನ ತಾಂತ್ರಿಕ ಸಲಹಾ ತಂಡ ಕೇಳಿದೆ. ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ : https://play.google.com/store/apps/details?id=com.speed.newskannada