ಶಿವಮೊಗ್ಗ ಜಿಲ್ಲೆಯ ಹುಣಸೋಡು ಗ್ರಾಮದ ಕಲ್ಲು ಗಣಿಗಾರಿಕೆ ಪ್ರದೇಶಕ್ಕೆ ಸಿದ್ದರಾಮಯ್ಯ ಇಂದು ಭೇಟಿ ನೀಡಿ ಸ್ಫೋಟ ಸಂಭವಿಸಿದ ಸ್ಥಳ ವೀಕ್ಷಿಸಿದರು. ಹುಣಸೋಡು ಗ್ರಾಮಕ್ಕೆ ಭೇಟಿ ನೀಡಿದ ಸಿದ್ದರಾಮಯ್ಯ ಅವರು ಗ್ರಾಮಸ್ಥರ ಅಹವಾಲು ಆಲಿಸಿದರು. ಅಕ್ರಮ ಗಣಿಗಾರಿಕೆಯಿಂದ ಆಗುತ್ತಿರುವ ಹಾನಿ ಕುರಿತು ಗ್ರಾಮಸ್ಥರು ಸಿದ್ದರಾಮಯ್ಯ ಅವರಿಗೆ ದೂರು ಸಲ್ಲಿಸಿದರು. ಈ ವೇಳೆ ಶಾಸಕರಾದ ಸಂಗಮೇಶ್, ಮಾಜಿ ಶಾಸಕರಾದ ಪ್ರಸನ್ನಕುಮಾರ್, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಸುಂದರೇಶ್ ಮತ್ತಿತರರು ಹಾಜರಿದ್ದರು. ಇದನ್ನೂ ಓದಿ: […]