ಠಕ್ಕರ್ ಬಳಿಕ ಧರಣಿ ಮನೋಜ್ ಹೊಸ ಅವತಾರ.

ಟಕ್ಕರ್ ಚಿತ್ರದ ಮೂಲಕ ನಾಯಕನಾಗಿ  ಪರಿಚಯವಾದ ನಟ  ಮನೋಜ್.  ವಿಭಿನ್ನ ಜಾನರಿನ ಕಥೆ ಆಯ್ಕೆ ಮಾಡಿಕೊಂಡಿದ್ದಾರೆ ಅದುವೇ ಧರಣಿ. ಮನೋಜ್ ಹುಟ್ಟು ಹಬ್ಬದ ಪ್ರಯುಕ್ತ ‘ಧರಣಿ’ ಫಸ್ಟ್ ಲುಕ್ ಲೋಕಾರ್ಪಣೆಗೊಂಡಿದೆ.ಈ ಕುರಿತು ಮಾಹಿತಿ ಹಂಚಿಕೊಂಡ ಮನೋಜ್, ಲುಕ್  ಬೇರೆಯದ್ದೇ ರೀತಿಯಲ್ಲಿ ನೋಡಬಹುದು. ಕಟೆಂಟ್ ಇರುವ ಚಿತ್ರಗಳನ್ನು ಜನ ಹೆಚ್ಚು ಇಷ್ಟ ಪಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಧರಣಿ ಹೊಸ ವಿಚಾರಗಳ ಸುತ್ತ ಆವರಿಸಿಕೊಂಡಿದೆ. ಕಮರ್ಷಿಯಲ್ ಆಗಿ ರೂಪಿಸುತ್ತಿದ್ದೇವೆ ಎಂದರು ನಿರ್ದೇಶಕ ಸುಧೀರ್ ಶಾನುಭೋಗ್ ಮಾಹಿತಿ ನೀಡಿ ಪಕ್ಕಾ ದೇಸೀ ಸೊಗಡಿನ ಕಥೆ ಇದೆ. ಕರ್ನಾಟಕ ಮಾತ್ರವಲ್ಲದೆ  ಇತರೆ ರಾಜ್ಯಗಳಲ್ಲೂ ಕೋಳಿ ಪಂದ್ಯ ಬರಿಯ ಮನರಂಜನೆ ಅಲ್ಲದೆ ಅಪಾರ ಪ್ರಮಾಣದ ವಹಿವಾಟು ನಡೆಸುವ ಜೂಜಾಗಿದೆ. ಇದರ ಸುತ್ತ ಧರಣಿ ಕಥಾ ಹಂದರ ತೆರೆದುಕೊಂಡಿದೆ. ಇದಲ್ಲದೇ ಈವರೆಗೆ ಎಲ್ಲೂ ಹೇಳಿರದ ಒಂದಷ್ಟು ವಿಚಾರಗಳೂ ಇಲ್ಲಿ ದೃಶ್ಯರೂಪದಲ್ಲಿ ಅನಾವರಣಗೊಳ್ಳಲಿದೆ ಎಂದರು. ಜಿ.ಕೆ.ಉಮೇಶ್ ಕೆ. ಗಣೇಶ್ ಐತಾಳ್ ನಿರ್ಮಾಣವಿದೆ.ಶಶಾಂಕ್ ಶೇಷಗಿರಿ ಸಂಗೀತ, ಅರುಣ್ ಸುರೇಶ್ ಛಾಯಾಗ್ರಹಣವಿದೆ.ಅರುಣೋದಯ ಕಥೆ ಚಿತ್ರಕ್ಕಿದೆ. ಧರಣಿಯ ಕುರಿತ ಹೆಚ್ಚಿನ ಮಾಹಿತಿ ಸದ್ಯದಲ್ಲೇ ಹೊರಬೀಳಲಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ದಳಪತಿ ಸಿನಿಮಾದಲ್ಲಿ ನಟಿಸಲ್ಲ ರಕ್ಷಿತ್‌ ಶೆಟ್ಟಿ:

Mon Jan 30 , 2023
ಬೆಂಗಳೂರು: ಕಳೆದ ಕೆಲ ದಿನಗಳ ಹಿಂದೆ ದಳಪತಿ ವಿಜಯ್‌ ಅವರ 67ನೇ ಸಿನಿಮಾದಲ್ಲಿ ಸಿಂಪಲ್‌ ಸ್ಟಾರ್‌ ರಕ್ಷಿತ್‌ ಶೆಟ್ಟಿ ನಟಿಸುತ್ತಾರೆ ಎನ್ನುವ ಸುದ್ದಿಯೊಂದು ಹರಿದಾಡಿತ್ತು. ಸದ್ಯ ತಾನು ಈ ಸಿನಿಮಾದಲ್ಲಿ ಇದ್ದೇನೋ ಇಲ್ವೋ ಎನ್ನುವುದನ್ನು ಸ್ವತಃ ರಕ್ಷಿತ್‌ ಶೆಟ್ಟಿ ಅವರೇ ಟ್ವೀಟ್‌ ಮಾಡಿದ್ದಾರೆ. ʼಕಿರಿಕ್‌ ಪಾರ್ಟಿʼ ನಟ ರಕ್ಷಿತ್‌ ಶೆಟ್ಟಿ ತಮ್ಮ ಮುಂಬರುವ ಸಿನಿಮಾದ ಲೈನ್‌ ಅಪ್‌ ಹಾಗೂ ನಟಿಸಲಿರುವ ಮುಂಬರುವ ಸಿನಿಮಾಗಳ ಬಗ್ಗೆ ಮಾಹಿತಿ ಕೊಟ್ಟಿದ್ದಾರೆ. ಹೇಮಂತ್‌ ರಾವ್‌ ಅವರ […]

Advertisement

Wordpress Social Share Plugin powered by Ultimatelysocial