ತಳ್ಳಿದ್ದರೆ ವಿಷಾದ ವ್ಯಕ್ತಪಡಿಸುವೆ: ಬಿ.ಆರ್‌.ಪಾಟೀಲ್‌ಗೆ ಡಿಕೆಶಿ

ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಮಾಜಿ ಶಾಸಕ ಬಿ.ಆರ್‌.ಪಾಟೀಲ್‌ ಅವರಲ್ಲಿ ವಿಷಾದ ಕೋರಿದ್ದಾರೆ.

ಮೇಕೆದಾಟು ಪಾದಯಾತ್ರೆ ಸಂದರ್ಭದಲ್ಲಿ ನಾನು ತಮ್ಮನ್ನು ತಳ್ಳಿ ಅವಮಾನ ಮಾಡಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.

ಇಂತಹ ಘಟನೆ ನಡೆದಿರುವುದು ನನಗೆ ಅರಿವಿಲ್ಲ. ಜನರ ನೂಕುನುಗ್ಗಲಿನಲ್ಲಿ ಅಂತಹ ಅಚಾತುರ್ಯ ನಡೆದಿದ್ದರೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ. ತಮ್ಮಂತಹ ಹಿರಿಯ ನಾಯಕರಿಗೆ ಅವಮಾನ ಮಾಡುವುದನ್ನು ಊಹಿಸಲು ಸಾಧ್ಯವಿಲ್ಲ ಎಂದು ಪಾಟೀಲ್‌ಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

ಪಕ್ಷದ ಹಿರಿಯ ಮುಖಂಡರ ಆದೇಶದ ಹಿನ್ನೆಲೆಯಲ್ಲಿ ನಾನು ಗೋವಾದಲ್ಲಿದ್ದು, ಅಲ್ಲಿಂದ ಮರಳಿದ ಬಳಿಕ ನಿಮ್ಮನ್ನು ಭೇಟಿ ಮಾಡಿ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪಿಂಕ್ ಬಾಲ್ ಫೈಟ್‌ನಲ್ಲಿ ಭಾರತದ ಸ್ಟಾರ್ ಪ್ಲೇಯರ್ ಔಟ್! ಟೀಂ ಇಂಡಿಯಾದ ಸಂಭಾವ್ಯ ತಂಡ ಹೀಗಿದೆ

Fri Mar 11 , 2022
ಶ್ರೀಲಂಕಾ (Sri lanka) ವಿರುದ್ಧದ ಮೊದಲ ಟೆಸ್ಟ್ (Test) ಪಂದ್ಯದಲ್ಲಿ ಇನ್ನಿಂಗ್ಸ್ ಜೊತೆ 222 ರನ್​ಗಳ ಭರ್ಜರಿಗೆಲುವನ್ನು ದಾಖಲಿಸಿರುವ ಭಾರತ ತಂಡ (Team India) ನಾಳೆ (ಮಾರ್ಚ 12) ನಡೆಯಲಿರುವ ಎರಡನೇ ಟೆಸ್ಟ್ ಪಂದ್ಯಕ್ಕೆ ಭರದ ಸಿದ್ಧತೆಯಲ್ಲಿ ತೊಡಗಿಕೊಂಡಿದೆ. ಈಗಾಗಲೇ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ 1-0 ಅಂತರದಿಂದ ಮುನ್ನಡೆ ಸಾಧಿಸಿದೆ. ಎರಡನೇ ಟೆಸ್ಟ್ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿಯನ್ನು ಗೆದ್ದು ಶ್ರೀಲಂಕಾ ತಂಡವನ್ನು ವೈಟ್​ ವಾಶ್ ಮಾಡಲು […]

Advertisement

Wordpress Social Share Plugin powered by Ultimatelysocial