ತಮಿಳು ನಟ ಸಿಲಂಬರಸನ್ ಕಾರು ಹರಿದು ವೃದ್ಧ ಸಾವು, ಚಾಲಕನ ಬಂಧನ

ಚೆನ್ನೈ: ತಮಿಳು ನಟ ಸಿಲಂಬರಸನ್ ( ಸಿಂಬು) ಅವರ ಇನ್ನೋವಾ ಕಾರು ಢಿಕ್ಕಿ ಹೊಡೆದು ದಾರಿಹೋಕ ವೃದ್ಧರೊಬ್ಬರು ಸಾವನ್ನಪ್ಪಿದ್ದಾರೆ.

 

ಮಾಧ್ಯಮಗಳ ವರದಿಯ ಪ್ರಕಾರ, ಮಾರ್ಚ್ 18 ರಂದು ಆಸ್ಪತ್ರೆಗೆ ಇನ್ನೋವಾದಲ್ಲಿ ಸಿಂಬು ಅವರ ತಂದೆ ಟಿ.

ರಾಜೇಂದ್ರ ಅವರು ತಮ್ಮ ಮೊಮ್ಮಗಳೊಂದಿಗೆ ತೆರಳುತ್ತಿದ್ದ ವೇಳೆ ಅವಘಡ ನಡೆದಿದೆ.

ಘಟನೆ ನಡೆದ ವೇಳೆ ಕಾರನ್ನು ಅವರ ಚಾಲಕ ಸೆಲ್ವಂ ಚಲಾಯಿಸುತ್ತಿದ್ದರು ರಾತ್ರಿ 7 ಗಂಟೆ ವೇಳೆ ಎಲಂಗೋ ಸಲೈ-ಪೋಸ್ ರಸ್ತೆಯ ತಿರುವಿನಲ್ಲಿ ರಸ್ತೆ ದಾಟುತ್ತಿದ್ದ 70 ವರ್ಷದ ಮುನುಸ್ವಾಮಿ ಎಂಬ ದಾರಿಹೋಕರಿಗೆ ಕಾರು ಢಿಕ್ಕಿ ಹೊಡೆದು ಅವರು ಸಾವನ್ನಪ್ಪಿದ್ದಾರೆ. ಘಟನೆ ತಡವಾಗಿ ಸುದ್ದಿಯಾಗುತ್ತಿದೆ.

ಮೃತ ಮುನುಸ್ವಾಮಿ ಅಂಗವಿಕಲರಾಗಿದ್ದು, ರಸ್ತೆಯಲ್ಲಿ ತೆವಳುತ್ತಾ ಸಾಗುತ್ತಿರುವುದು ಸಿಸಿಟಿವಿ ದೃಶ್ಯಾವಳಿಯಲ್ಲಿ ಕಂಡುಬಂದಿದೆ. ಗಂಭೀರವಾಗಿ ಗಾಯಗೊಂಡ ವರನ್ನು ರಾಜೇಂದ್ರ ಅವರು ಕಾರಿನಿಂದ ಕೆಳಗಿಳಿದು ಆಂಬ್ಯುಲೆನ್ಸ್‌ಗೆ ಕರೆ ಮಾಡಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ತನ್ನ ಚಾಲಕನನ್ನು ಹೇಳಿದ್ದಾರೆ. ಸಿಂಬು ಅವರಿಗಾಗಿ ಮತ್ತೊಂದು ಕಾರನ್ನು ಕಳುಹಿಸಿದ್ದಾರೆ ಎಂದು ವರದಿಯಾಗಿದೆ. ಮರುದಿನ ಚಾಲಕನನ್ನು ಬಂಧಿಸಲಾಗಿದೆ.

ಘಟನೆಯ ಕುರಿತು ಸುಳ್ಳು ಮಾಹಿತಿಗಳನ್ನು ಹಬ್ಬಲಾಗುತ್ತಿದೆ. ಅವಘಡ ನಡೆದ ವೇಳೆ ಸಿಂಬು ಅವರು ಕಾರಿನಲ್ಲಿರಲಿಲ್ಲ, ಅವರ ವ್ಯಕ್ತಿತ್ವಕ್ಕೆ ಕಳಂಕ ತರುವ ಸುಳ್ಳು ಸುದ್ದಿಗಳನ್ನು ಹಬ್ಬಿಸಲಾಗುತ್ತಿದೆ ಎಂದು ಅವರ ಕಚೇರಿ ಹೇಳಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ಲೋಡ್ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

2022 ರ ಮೊದಲ ಬಿಗ್ ಬಾಕ್ಸ್ ಆಫೀಸ್ ಘರ್ಷಣೆಯಲ್ಲಿ ದಳಪತಿ ವಿಜಯ್ ಅವರ ಬೀಸ್ಟ್‌, ಯಶ್ ಅವರ ಕೆಜಿಎಫ್ ಅಧ್ಯಾಯ 2!!

Thu Mar 24 , 2022
ಎರಡು ದೊಡ್ಡ ಬಜೆಟ್ ಸಿನಿಮಾಗಳು ಗಲ್ಲಾಪೆಟ್ಟಿಗೆಯಲ್ಲಿ ಘರ್ಷಣೆ ಮಾಡುತ್ತಿರುವುದು ನಾವು ಹಿಂದೆಂದೂ ನೋಡಿರದ ವಿಷಯವೇನಲ್ಲ. ಆದಾಗ್ಯೂ, ಅಂತಹ ಘರ್ಷಣೆಗಳು ಸಾಮಾನ್ಯವಾಗಿ ಚಲನಚಿತ್ರಗಳು ಪರಸ್ಪರರ ವ್ಯವಹಾರಕ್ಕೆ ಕಾರಣವಾಗುತ್ತವೆ. ಆದರೆ ಅಂತಿಮವಾಗಿ ಯಾರು ಕೇಕ್ ತೆಗೆದುಕೊಳ್ಳುತ್ತಾರೆ ಎಂಬುದನ್ನು ನಿರ್ಧರಿಸುವ ಆಯಾ ಸ್ಟಾರ್‌ಗಳ ಅಭಿಮಾನಿಗಳ ಮೇಲೆ ಅಂತಿಮವಾಗಿ ನಿಂತಿದೆ. ದಕ್ಷಿಣ ಇಂಡಸ್ಟ್ರಿಯಲ್ಲಿ ಎರಡು ಬಹು ನಿರೀಕ್ಷಿತ ಚಿತ್ರಗಳು ಒಂದೇ ವಾರದಲ್ಲಿ ಬಿಡುಗಡೆಯಾಗಲಿರುವ ಕಾರಣ ಇದೇ ರೀತಿಯ ಘರ್ಷಣೆ ಶೀಘ್ರದಲ್ಲೇ ಬರಲಿದೆ. ನಾವು ಥಲಪತಿ ವಿಜಯ್ […]

Advertisement

Wordpress Social Share Plugin powered by Ultimatelysocial