ಕ್ಷಿಪಣಿ ತಂತ್ರಜ್ಞಾನದಲ್ಲಿ ಭಾರತ ಸ್ವಾವಲಂಬಿಯಾಗಿದೆ ಎಂದು ರಕ್ಷಣಾ ಸಚಿವರ ವೈಜ್ಞಾನಿಕ ಸಲಹೆಗಾರ ಹಾಗು ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ -ಡಿಆರ್ಡಿಒ ಮಾಜಿ ಮುಖ್ಯಸ್ಥ ಡಾ. ಜಿ. ಸತೀಶ್ ರೆಡ್ಡಿ ಇಂದಿಲ್ಲಿ ಹೇಳಿದ್ದಾರೆ. ಭಾರತದ ಶಸ್ತ್ರಗಾರದಲ್ಲಿ ಅತ್ಯಾಧುನಿಕ ಶ್ರೇಣಿಯ ಕ್ಷಿಪಣಿ ಹೊಂದಿದೆ. ಜೊತೆಗೆ ಕ್ಷಿಪಣಿ ತಂತ್ರಜ್ಞಾನದಲ್ಲಿ ಸ್ವಾವಲಂಬಿಯಾಗಿ ಜಾಗತಿಕವಾಗಿಯೂ ಸಹಾಯ ಮಾಡಿದೆ ಎಂದಿದ್ದಾರೆ.
ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಅವರು ಮೇಲ್ಮೈಯಿಂದ ಮೇಲ್ಮೈಗೆ ಕ್ಷಿಪಣಿಗಳು, ಮೇಲ್ಮೈಯಿಂದ ಗಾಳಿ ಕ್ಷಿಪಣಿಗಳು ಮತ್ತು ಗಾಳಿಯಿಂದ ಗಾಳಿಗೆ ಕ್ಷಿಪಣಿಗಳು, ಟ್ಯಾಂಕ್ ವಿರೋಧಿ ಕ್ಷಿಪಣಿಗಳು ಮತ್ತು ದೇಶವು ಅಭಿವೃದ್ಧಿಪಡಿಸಿದ ಹಲವು ವಿಧದ ಕ್ಷಿಪಣಿಗಳನ್ನು ಅಭಿವೃದ್ಧಿ ಪಡಿಸಿದೆ ಎಂದು ತಿಳಿಸಿದ್ದಾರೆ. ದೇಶ ವಿವಿಧ ರೀತಿಯ ಕ್ಷಿಪಣಿಗಳನ್ನು ಅಭಿವೃದ್ಧಿಪಡಿಸುವ ಮೂಲಕ ಕ್ಷಿಪಣಿ ತಂತ್ರಜ್ಞಾನದಲ್ಲಿ ಸ್ವಾವಲಂಬಿಯಾಗಿದೆ ಮತ್ತು ೧೯೭೪ ರಲ್ಲಿ ಪೊಖ್ರಾನ್ ೧ ಪರಮಾಣು ಪರೀಕ್ಷೆಯ ನಂತರ ಭಾರತದ ಮೇಲೆ ಹೇರಿದ ನಿರ್ಬಂಧಗಳು ರಾಷ್ಟ್ರ ಸ್ವಾವಲಂಬನೆಗೆ ಸಹಾಯ ಮಾಡಿದೆ ಎಂದು ಹೇಳಿದ್ದಾರೆ. ಭಾರತದ ಕ್ಷಿಪಣಿ ಕಾರ್ಯಕ್ರಮವನ್ನು ನಿರ್ಬಂಧಿಸಲು ೧೯೮೦ ರ ದಶಕದಲ್ಲಿ ಭಾರತದ ಮೇಲೆ ನಿರ್ಬಂಧ ಹೇರಿದ ನಂತರ ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿ ಅಡೆತಡೆ ಮತ್ತು ನಿರ್ಬಂಧದ ಹೊರತಾಗಿಯೂ ಕ್ಷಿಪಣಿ ತಂತ್ರಜ್ಞಾನದಲ್ಲಿ ಸ್ವಾವಲಂಬನೆ ಸಾಧಿಸಿದೆ ಎಂದರು. ಪೃಥ್ವಿ ಮತ್ತು ಅಗ್ನಿ ಕ್ಷಿಪಣಿ ಪರೀಕ್ಷಿಸಿದಾಗ ಮತ್ತು ಪೊಖ್ರಾನ್ ಮತ್ತು ಇತರ ಪರೀಕ್ಷೆಗಳಲ್ಲಿ ಪರೀಕ್ಷೆ ನಡೆಸಿದಾಗ, ಈ ದೇಶದ ಮೇಲೆ ನಿರ್ಬಂಧ ಹಾಕಲಾಯಿತು. ವಿದೇಶಿ ರಾಷ್ಟ್ರಗಳ ಮೇಲೆ ಅವಲಂಬಿತವಾಗಿದ್ದ ಕಾಲ ದೂರವಾಗಿದೆ ಎಂದಿದ್ದಾರೆ. ಯಾವುದೇ ನಿರ್ಣಾಯಕ ವ್ಯವಸ್ಥೆಗಳಿಗೆ ಹೊಂದಿಕೊಳ್ಳುವ ಶಕ್ತಿ ಸಾಮರ್ಥ್ಯವನ್ನು ಭಾರತ ಹೊಂದಿದೆ. ನಿರ್ಣಾಯಕ ತಂತ್ರಜ್ಞಾನಗಳ ಸಮಾನಾಂತರ ಅಭಿವೃದ್ಧಿ ಕಾರ್ಯ ಆರಂಭವಾದ ಮೇಲೆ ಕ್ಷಿಪಣಿ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಯಾಗಿದೆ ಎಂದು ಹೇಳಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada