ತುಮಕೂರು: 2023ರ ವಿಧಾನಸಭಾ ಚುನಾವಣೆಗೆ ರಾಜ್ಯದಲ್ಲಿ ಭರ್ಜರಿ ಪ್ರಚಾರ ನಡೆಸಲಾಗುತ್ತಿದೆ. ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ರಥಯಾತ್ರೆಗಳನ್ನ ಹಮ್ಮಿಕೊಂಡು ಮತದಾರರನ್ನು ತಮ್ಮತ್ತ ಸೆಳೆಯುತ್ತಿವೆ. ಇತ್ತೀಚೆಗಷ್ಟೆ ಸ್ಯಾಂಡಲ್ವುಡ್ ನಟರು ಚುನಾವಣಾ ರಣಾಂಗಣಕ್ಕೆ ಧುಮುಕಿ ತಮ್ಮ ಅದೃಷ್ಟ ಪರೀಕ್ಷೆಗೆ ಇಳಿಯುತ್ತಿದ್ದಾರೆ.
ಈ ಸಾಲಿಗೀಗ ಕನ್ನಡ ಹಿರಿಯ ಹಾಸ್ಯ ಕಲಾವಿದರೊಬ್ಬರು ಎಲೆಕ್ಷನ್ಗೆ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದಾರೆ.
ಹೌದು.. ಈ ಹಾಸ್ಯ ನಟ ಬೇರೆ ಯಾರು ಅಲ್ಲ. ಟೆನ್ನಿಸ್ ಕೃಷ್ಣ ಅವರು ಎಲೆಕ್ಷನ್ಗೆ ಸ್ಪರ್ಧಿಸೋದು ಪಕ್ಕಾ ಆಗಿದೆ. ಇದೇ ಮೊದಲ ಬಾರಿಗೆ ತುಮಕೂರಿನ ತುರುವೇಕೆರೆ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯುತ್ತಿದ್ದಾರೆ. ನಟ ಟೆನ್ನಿಸ್ ಕೃಷ್ಣ ಅವರು ಕಳೆದ ವರ್ಷ ಬೆಂಗಳೂರಿನಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಸೇರಿಕೊಂಡಿದ್ದರು. ಪಕ್ಷದ ಹಲವು ಚಟುವಟಿಕೆಗಳಲ್ಲಿ ಭಾಗವಹಿಸಿದ್ದರು.
ಈ ಬಗ್ಗೆ ತುಮಕೂರು ನಗರದಲ್ಲಿ ಮಾತನಾಡಿದ ಟೆನ್ನಿಸ್ ಕೃಷ್ಣ, ತುರುವೇಕೆರೆ ಕ್ಷೇತ್ರದಿಂದ ನಾನು ಆಮ್ ಆದ್ಮಿ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಬಡವರ ಪರವಾಗಿ ಏನಾದರೂ ಕೆಲಸ ಮಾಡಬಹುದು ಎಂದು ಬಂದಿದ್ದೇನೆ. ಈ ಪಕ್ಷ ಬೇರೆ ರಾಜ್ಯದಲ್ಲಿ ಸಾಧನೆ ಮಾಡಿ ತೋರಿಸಿದೆ. ಕರ್ನಾಟಕದಲ್ಲಿ ಈ ಪಕ್ಷವನ್ನು ಅಧಿಕಾರಕ್ಕೆ ತರುವ ಪ್ರಯತ್ನ ಮಾಡುತ್ತೇವೆ. ಬೇರೆ ಪಕ್ಷದಲ್ಲಿ ಕಲಾವಿದರಿಗೆ ಅವಕಾಶ ಸಿಗುತ್ತಿಲ್ಲ. ಹೀಗಾಗಿ ಈ ಆಪ್ಗೆ ಬಂದಿದ್ದೇನೆ. ಗೆಲುವು-ಸೋಲು ಇದ್ದಿದ್ದೆ. ಜನ ಸೇವೆ ಮಾಡಲು ರಾಜಕಾರಣಕ್ಕೆ ಬಂದಿದ್ದೇನೆ ಎಂದು ತಿಳಿಸಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada