ದೇವರ ಮೊರೆ ಹೋದ ಕಂಬಳ ಸಮಿತಿ.

ಪುತ್ತೂರು: ಜ.28ರಂದು ಪುತ್ತೂರಿನಲ್ಲಿ ನಡೆದ ಕಂಬಳದಲ್ಲಿ ಕೆಲವೊಂದು ಅಹಿತಕರ ಘಟನೆಗಳು ನಡೆದಿದ್ದು ಇದರಿಂದ ಕಂಬಳ ಸಮಿತಿ ಸಾಕಷ್ಟು ಮುಜುಗರಕ್ಕೆ ಈಡಾಗಿತ್ತು. ಇದೀಗ ಘಟನೆಗೆ ಸಂಬಂಧಿಸಿದಂತೆ ಕಂಬಳ ಸಮಿತಿಯವರು ಶ್ರೀ ಮಹಾಲಿಂಗೇಶ್ವರ ದೇವರ ಮೊರೆ ಹೋಗಿದ್ದು, ದೇವರ ಸಮ್ಮುಖದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ಏಕಾದಶ ರುದ್ರ ಸೇವೆ ಸಂಕಲ್ಪ ಮಾಡಿದ್ದಾರೆ.

ಪುತ್ತೂರು ಕಂಬಳ ಸಮಿತಿ ಗೌರವಾಧ್ಯಕ್ಷರಾದ, ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ನೇತೃತ್ವದ ತಂಡ ದೇವರ ಸಮ್ಮುಖದಲ್ಲಿ ನಿಂತು ಪ್ರಾರ್ಥನೆ ಸಲ್ಲಿಸಿದೆ. ಕಂಬಳ ಗದ್ದೆಯಲ್ಲಿ ನಟಿ ಸಾನ್ಯಾ ಐಯ್ಯರ್ ಜೊತೆ ಯುವಕನೋರ್ವ ಅಸಭ್ಯವಾಗಿ ವರ್ತಸಿದ್ದಾನೆ ಎನ್ನಲಾದ ಆರೋಪಕ್ಕೆ ಸಂಬಂಧಿಸಿ ಫೋಟೋ, ವೀಡಿಯೋ ವೈರಲ್ ಮಾಡಲಾಗುತ್ತಿದೆ. ಕಂಬಳ ಸಮಿತಿಯನ್ನು ತಪ್ಪಿತಸ್ಥ ಸ್ಥಾನದಲ್ಲಿ ನಿಲ್ಲಿಸುವ ಯತ್ನ ಮಾಡಲಾಗುತ್ತಿದೆ. ನಮಗೆ ಮಹಾಲಿಂಗೇಶ್ವರ ಸಾನಿಧ್ಯವೇ ನ್ಯಾಯಾಲಯ. ದೇವರು ನಮಗೆ ನ್ಯಾಯ ನೀಡಬೇಕು ಎಂದು ಪ್ರಾರ್ಥಿಸಿದ್ದಾರೆ.

ಅರ್ಚಕ ವಸಂತ ಕೆದಿಲಾಯ ಪ್ರಾರ್ಥನೆ ಸಲ್ಲಿಸಿ, ಅನೇಕ ವರ್ಷಗಳಿಂದ ಕಂಬಳ ಒಳ್ಳೆ ರೀತಿಯಲ್ಲಿ ನಡೆಯುತ್ತಾ ಬಂದಿದೆ. ಗೊತ್ತಿದ್ದೋ ಗೊತ್ತಿಲ್ಲದೆಯೋ ಅಹಿತಕರ ಘಟನೆ ನಡೆದಿದ್ದರೆ ಅದಕ್ಕೆ ಮಹಾಲಿಂಗೇಶ್ವರ ದೇವರು ನ್ಯಾಯ ನೀಡಲಿ, ಬುದ್ಧಿ ನೀಡಲಿ. ಭವಿಷ್ಯದಲ್ಲಿ ಪುತ್ತೂರು ಕಂಬಳ ಯಾವುದೇ ವಿಘ್ನಗಳಿಲ್ಲದೆ ಸುಸೂತ್ರವಾಗಿ ನಡೆಯಲಿ ಎಂದು ಬೇಡಿಕೊಂಡಿದ್ದಾರೆ.

ಇದೇ ವೇಳೆ ಮಾತನಾಡಿದ ಕಂಬಳಿ ಸಮಿತಿ ಗೌರವಾಧ್ಯಕ್ಷ ಹಾಗೂ ಮಾಜಿ ಶಾಸಕಿ ಶಕುಂತಳಾ ಟಿ ಶೆಟ್ಟಿ, ಕಂಬಳದಲ್ಲಿ ಚಿತ್ರನಟಿಗೆ ಕಿರುಕುಳ ಆಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಬಳ ಸಮಿತಿಗೂ, ಚಿತ್ರನಟಿಗೂ ಗಲಾಟೆಗೂ ಸಂಬಂಧವಿಲ್ಲ, ಇದೊಂದು ಉದ್ದೇಶಪೂರ್ವಕ ಮಾಡಿರುವ ಸುದ್ದಿ ಎಂದು ಆರೋಪಿಸಿದ್ದಾರೆ.

ಮಹಿಳೆಗೆ ಅನ್ಯಾಯವಾದರೂ ಶಕುಂತಳಾ ಶೆಟ್ಟಿ ಮೌನವಾಗಿದ್ದಾರೆ ಎಂದು ಅಪಪ್ರಚಾರ ಮಾಡಲಾಗುತ್ತಿದೆ. ಅನ್ಯಾಯ ಆಗಿದೆ ಎಂದು ಮಹಿಳೆ ನನಗೆ ಹೇಳಬೇಕಲ್ಲವೇ? ಇಲ್ಲದಿದ್ದರೆ ನಾನೇನು ಮಾಡಲಿ? ನಾನು ರಾತ್ರಿ 11 ಗಂಟೆಗೆ ಕಂಬಳ ಗದ್ದೆಯಿಂದ ನಿರ್ಗಮಿಸಿದ್ದೇನೆ. ನಸುಕಿನ ಜಾವ ನಟಿಯರು ಕಂಬಳ ಗದ್ದೆಗೆ ಮತ್ತೊಮ್ಮೆ ಬಂದಿದ್ದರಂತೆ, ಆಗ ಯಾರೋ ಅವರ ಜತೆ ಅಸಭ್ಯ ವರ್ತನೆ ತೋರಿದನಂತೆ ಎಂದೆಲ್ಲ ಹೇಳುತ್ತಿದ್ದಾರೆ.

ಮರುದಿನ ಕುತ್ತಾರು ಕೊರಗಜ್ಜ ಸಾನಿಧ್ಯದಲ್ಲಿ ನಟಿ ನನಗೆ ಸಿಕ್ಕಿದ್ದು, ಎಲ್ಲರೂ ಪುತ್ತೂರು ಕಂಬಳದ ವ್ಯವಸ್ಥೆ ಬಗ್ಗೆ ಹಾಡಿ ಹೊಗಳಿದ್ದಾರೆ. ಯಾರೂ ನನಗೆ ಹಿಂದಿನ ದಿನ ರಾತ್ರಿ ನಡೆದ ಅಹಿತಕರ ಘಟನೆ ಕುರಿತು ಮಾತನಾಡಿಲ್ಲ. ಅನ್ಯಧರ್ಮೀಯ ಅನ್ಯಾಯ ಮಾಡಿದ್ದಾನೆ ಎಂದೆಲ್ಲ ವೈರಲ್ ಮಾಡಲಾಗುತ್ತಿದೆ. ಮಹಿಳೆ ಮೇಲೆ ಯಾರೇ ದುಷ್ಕತ್ಯ ಎಸಗಿದ್ದರೂ ಅದು ತಪ್ಪೆ. ಆತ ಅನ್ಯಧರ್ಮೀಯನೇ ಆಗಿರಲಿ, ಸ್ವಧರ್ಮೀಯನೇ ಆಗಿರಲಿ. ತಪ್ಪು ಮಾಡಿದವ ಆಧರ್ಮೀಯನೇ ಹೊರತು ಧರ್ಮೀಯನಲ್ಲ. ಘಟನೆ ಬಗ್ಗೆ ಸಂತ್ರಸ್ತರೆನೆಸಿಕೊಂಡವರು ದೂರು ನೀಡಿದರೆ ಪೊಲೀಸ್ ಇಲಾಖೆ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಲಿ. ಇದನ್ನೇ ನಾನು ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದ್ದೇನೆ ಎಂದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಚಿತ್ರರಂಗದಲ್ಲಿ ಒಬ್ಬರ ಹಿಂದೊಬ್ಬರಂತೆ ಹಸೆ ಮಣೆ ಏರುತ್ತಿದ್ದಾರೆ.

Thu Feb 2 , 2023
ಚಿತ್ರರಂಗದಲ್ಲಿ ಒಬ್ಬರ ಹಿಂದೊಬ್ಬರಂತೆ ಹಸೆ ಮಣೆ ಏರುತ್ತಿದ್ದಾರೆ. ಈ ಬೆನ್ನಲ್ಲೇ ತೆಲುಗು ನಟ ವರುಣ್ ತೇಜ್ ಮದುವೆಯ ಸುದ್ದಿ ಹರಿದಾಡುತ್ತಿದೆ. ಸದ್ಯದಲ್ಲೇ ಖ್ಯಾತ ನಟಿ ಲಾವಣ್ಯ ತ್ರಿಪಾಠಿ ಜೊತೆ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಮೆಗಾಸ್ಟಾರ್ ಫ್ಯಾಮಿಲಿಯ ಪ್ರತಿಭಾನ್ವಿತ ನಟ ವರುಣ್ ತೇಜ್‌ಗೆ ಸೌತ್‌ನಲ್ಲಿ ಬೇಡಿಕೆಯಿದೆ. `ಮುಕುಂದ’ ಚಿತ್ರದ ಮೂಲಕ ನಾಯಕ ನಟನಾಗಿ ಟಾಲಿವುಡ್‌ಗೆ ಎಂಟ್ರಿ ಕೊಟ್ಟ ವರುಣ್, ಸಾಕಷ್ಟು ಸಿನಿಮಾಗಳ ಮೂಲಕ ಛಾಪು ಮೂಡಿಸಿದ್ದಾರೆ. ನಟ ನಾಗಬಾಬು, ಮೆಗಾಸ್ಟಾರ್ ಚಿರಂಜೀವಿ, […]

Advertisement

Wordpress Social Share Plugin powered by Ultimatelysocial