ತಿರುವನಂತಪುರ: ಮದುವೆಯ ದಿನವೇ ವರನೊಬ್ಬ ಫೋನ್ ಸ್ವಿಚ್ ಮಾಡಿಕೊಂಡು ಬಚ್ಚಿಟ್ಟುಕೊಂಡಿದ್ದಕ್ಕೆ ಮನನೊಂದು 23 ವರ್ಷದ ಯುವತಿ ಸಾವಿಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಕೇರಳದಲ್ಲಿ ನಡೆದಿದೆ.ಮೃತ ಯುವತಿಯನ್ನು ಧನ್ಯಾ ಎಂದು ಗುರುತಿಸಲಾಗಿದೆ.ಈಕೆ ಕೊಲ್ಲಂನ ವಟ್ಟಪಾಡ್ನಲ್ಲಿರುವ ಮಧು ಭವನ್ ನಿವಾಸಿ. ಶನಿವಾರ ಬೆಳಗ್ಗೆ 8 ಗಂಟೆಗೆ ತನ್ನ ಬೆಡ್ರೂಮ್ನ ಬಾತ್ರೂಮ್ನಲ್ಲಿ ಶಾಲೂವಿನಿಂದ ನೇಣು ಬಿಗಿದುಕೊಂಡು ಮೃತಪಟ್ಟಿರುವ ಸ್ಥಿತಿಯಲ್ಲಿ ಧನ್ಯಾಳ ಮೃತದೇಹ ಪತ್ತೆಯಾಗಿದೆ.ಮೃತ ಧನ್ಯಾ, ಕೊಲ್ಲಂನ ಅಂಚಲದ ಅತಿಶಯಮಂಗಲಂ ನಿವಾಸಿ ಅಖಿಲ್ ಎಂಬಾತನನ್ನು ಕಳೆದು ಒಂದು ವರ್ಷಕ್ಕೂ ಅಧಿಕ ಸಮಯದಿಂದ ಪ್ರೀತಿಸುತ್ತಿದ್ದಳು. ಫೆ. 15ರಂದು ಮನೆಯಿಂದ ಧನ್ಯಾ ನಾಪತ್ತೆಯಾಗಿದ್ದಳು. ಇದರ ಆಧಾರದ ಮೇಲೆ ಆಕೆಯ ಕುಟುಂಬಸ್ಥರು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು.ತನಿಖೆ ಆರಂಭಿಸಿದ ಪೊಲೀಸರಿಗೆ ಧನ್ಯಾ, ಅಖಿಲ್ ಜೊತೆ ಇರುವುದು ತಿಳಿಯಿತು. ಬಳಿಕ ಧನ್ಯಾಳ ಕುಟುಂಬಸ್ಥರ ಮುಂದೆ ಆಕೆಯನ್ನು ರಿಜಿಸ್ಟರ್ ಮದುವೆ ಆಗುವುದಾಗಿ ಅಖಿಲ್ ಆಣೆ ಮಾಡಿದ್ದ. ನಂತರ ಮದುವೆಯ ದಿನಾಂಕವು ನಿಗದಿಯಾಯಿತು. ಅದರಂತೆ ಮದುವೆಯ ದಿನ ಧನ್ಯಾ ಮತ್ತು ಆಕೆಯ ಕುಟುಂಬ ಇಟ್ಟಿವಾ ಗ್ರಾಮ ಪಂಚಾಯಿತಿಗೆ ತೆರಳಿದರು. ರಿಜಿಸ್ಟರ್ ಮದುವೆಗೆ ಎಲ್ಲ ಸಿದ್ಧತೆ ನಡೆದಿತ್ತು. ಆದರೆ, ಕೊನೆಯ ಕ್ಷಣದಲ್ಲಿ ಅಖಿಲ್ ಬರಲೇ ಇಲ್ಲ.ಧನ್ಯಾ ಮತ್ತು ಆಕೆಯ ಕುಟುಂಬ ಅಖಿಲ್ ಫೋನ್ಗೆ ಎಷ್ಟೇ ಪ್ರಯತ್ನಿಸಿದರೂ ಆತನ ಫೋನ್ ಸ್ವಿಚ್ ಆಫ್ ಅಂತ ಹೇಳುತ್ತಿತ್ತು. ಸಾಕಷ್ಟು ಸಮಯದವರೆಗೂ ಕಾದು, ಅಖಿಲ್ ಬಗ್ಗೆ ಯಾವುದೇ ಮಾಹಿತಿ ಸಿಗದಿದ್ದಾಗ ಧನ್ಯಾ ಮತ್ತು ಆಕೆಯ ಕುಟುಂಬ ಬಹಳ ಬೇಸರದಿಂದ ಮತ್ತೆ ಮನೆಗೆ ಮರಳಿದರು.ಅಖಿಲ್ ಮಾಡಿದ ವಂಚನೆಯಿಂದ ಮನನೊಂದು ಅದರಿಂದ ಹೊರಬರಲಾಗದೇ ಧನ್ಯಾ ಸಾವಿನ ಹಾದಿ ಹಿಡಿದಿದ್ದಾಳೆ ಎಂಬುದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಈ ಘಟನೆ ಸಂಬಂಧ ಕಡಕ್ಕಲ್ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸದ್ಯ ತಲೆಮರೆಸಿಕೊಂಡಿರುವ ಅಖಿಲ್ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. (ಏಜೆನ್ಸೀಸ್)
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada
Please follow and like us: