ಡಿಜಿಟಲ್ ಮಾಧ್ಯಮಗಳ ಅಭಿವೃದ್ಧಿಗೆ ಸಹಾಯ ನೀಡುವುದಾಗಿ ಸಚಿವರಿಂದ ಭರವಸೆ.

ವದೆಹಲಿ:”ಅಂತಾರಾಷ್ಟ್ರೀಯ ಮತ್ತು ದೇಶೀಯ ಮಟ್ಟದ ತಂತ್ರಜ್ಞಾನ ಕ್ಷೇತ್ರದ ದಿಗ್ಗಜ ಕಂಪನಿಗಳು ತಮ್ಮ ‘ಸರ್ಚ್ ರಿಸಲ್ಟ್’ನಲ್ಲಿ ಸುದ್ದಿಗಳನ್ನು ಮತ್ತು ಸುದ್ದಿ ಲಿಂಕ್‌ಗಳನ್ನು ಒದಗಿಸುವ ಮೂಲಕ ಪಡೆಯುವ ಲಾಭದಲ್ಲಿ ಇಂತಿಷ್ಟು ಪಾಲನ್ನು ನಿಗದಿತ ಮಾಧ್ಯಮ ಸಂಸ್ಥೆಗೆ ನೀಡಬೇಕು.

ಈ ಮೂಲಕ ದೇಶದ ಡಿಜಿಟಲ್‌ ಮಾಧ್ಯಮ ಅಭಿವೃದ್ಧಿಗೆ ಬೆಂಬಲ ನೀಡಬೇಕು, ” ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್‌ ಮತ್ತು ಐಟಿ ಖಾತೆ ರಾಜ್ಯ ಸಚಿವ ರಾಜೀವ್‌ ಚಂದ್ರಶೇಖರ್‌ ಅವರು ಪ್ರತಿಪಾದಿಸಿದ್ದಾರೆ.

ಡಿಜಿಟಲ್‌ ನ್ಯೂಸ್‌ ಪಬ್ಲಿಷರ್ಸ್‌ ಅಸೋಸಿಯೇಷನ್‌ (ಡಿಎನ್‌ಪಿಎ) ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸಮ್ಮೇಳನದಲ್ಲಿ ಮಾತನಾಡಿದ ಸಚಿವ ರಾಜೀವ್‌, “ಡಿಜಿಟಲ್‌ ನ್ಯೂಸ್‌ ಉದ್ದಿಮೆ ಮಾತ್ರವಲ್ಲ, ಮುದ್ರಣ ಮಾಧ್ಯಮ ಕೂಡ ಸದ್ಯ ಸಂಕಷ್ಟದಲ್ಲಿದೆ. ಮೂಲತಃ ಇವರುಗಳೇ ನೈಜ ಮತ್ತು ಸ್ಪಷ್ಟ ಮಾಹಿತಿಯ ಸೃಷ್ಟಿಕರ್ತರು. ದೊಡ್ಡ ತಂತ್ರಜ್ಞಾನ ಕಂಪನಿಗಳು ಕೇವಲ ನ್ಯೂಸ್‌ ಮತ್ತು ಸುದ್ದಿ ಹೊಂದಿರುವ ವೆಬ್‌ಸೈಟ್‌ಗಳ ಲಿಂಕ್‌ಗಳನ್ನು ಶೇಖರಿಸಿ ಇಂಟರ್‌ನೆಟ್‌ ಬಳಕೆದಾರರಿಗೆ ನೀಡುತ್ತವೆ ಅಷ್ಟೇ. ಟೆಕ್‌ ಕಂಪನಿಗಳ ಸುದ್ದಿಯ ಸಂಗ್ರಹಕಾರರು ಮಾತ್ರ. ಹಾಗಾಗಿ ಅವರ ಆದಾಯದಲ್ಲಿ ನ್ಯೂಸ್‌ ಸೃಷ್ಟಿಕರ್ತರಿಗೆ ಪಾಲು ಸಿಗುವುದು ನ್ಯಾಯ,” ಎಂದು ಅಭಿಪ್ರಾಯಪಟ್ಟಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ʻಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರʼ ಪುರಸ್ಕೃತರೊಂದಿಗೆ ಇಂದು ಮೋದಿ ಸಂವಾದ.

Tue Jan 24 , 2023
ನವದೆಹಲಿ: ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ  ಪುರಸ್ಕೃತರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂವಾದ ನಡೆಸಲಿದ್ದಾರೆ. ಇಂದು ಸಂಜೆ 4 ಗಂಟೆಗೆ ನವದೆಹಲಿಯಲ್ಲಿರುವ ಸ್ವ ನಿವಾಸದಲ್ಲಿ ಸಂವಾದ ನಡೆಸಲಿದ್ದಾರೆ. ನಾವೀನ್ಯತೆ, ಸಮಾಜ ಸೇವೆ, ಪಾಂಡಿತ್ಯಪೂರ್ಣ, ಕ್ರೀಡೆ, ಕಲೆ ಮತ್ತು ಸಂಸ್ಕೃತಿ ಮತ್ತು ಶೌರ್ಯ ಎಂಬ ಆರು ವಿಭಾಗಗಳಲ್ಲಿ ಅಸಾಧಾರಣ ಸಾಧನೆಗಾಗಿ ಭಾರತ ಸರ್ಕಾರವು ಮಕ್ಕಳಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರವನ್ನು ನೀಡುತ್ತಿದೆ. ಪ್ರತಿಯೊಬ್ಬ ಪ್ರಶಸ್ತಿ ಪುರಸ್ಕೃತರಿಗೆ […]

Advertisement

Wordpress Social Share Plugin powered by Ultimatelysocial