ವಿಜಯ್ ದೇವರಕೊಂಡ, ಅನನ್ಯಾ ಪಾಂಡೆ, ರಮ್ಯಾ ಕೃಷ್ಣ, ಮೈಕ್ಟೈಸನ್ ಮುಂತಾದವರು ನಟಿಸಿದ್ದ ‘ಲೈಗರ್’ ಸಿನಿಮಾವು ಆಗಸ್ಟ್‌ನಲ್ಲಿ ತೆರೆಕಂಡು ದೊಡ್ಡ ಸೋಲನ್ನು ಕಂಡಿತ್ತು.

ವಿಜಯ್ ದೇವರಕೊಂಡ ಮತ್ತು ಅನನ್ಯಾ ಪಾಂಡೆ ಮುಖ್ಯಭೂಮಿಕೆಯಲ್ಲಿದ್ದ ‘ಲೈಗರ್’ ಸಿನಿಮಾವನ್ನು ನಿರ್ದೇಶಿಸಿದ್ದರು ಪೂರಿ ಜಗನ್ನಾಥ್. ಇದು ಅವರ ಮೊದಲ ಪ್ಯಾನ್ ಇಂಡಿಯಾ ಸಿನಿಮಾವಾಗಿತ್ತು ಕೂಡ. ಆದರೆ ‘ಲೈಗರ್‌’ ಹೀನಾಯ ಸೋಲು ಕಂಡಿತ್ತು. ನಿರ್ದೇಶನದ ಜೊತೆಗೆ ಸಿನಿಮಾಗೆ ಹಣವನ್ನೂ ಹಾಕಿದ್ದ ಪೂರಿ ಜಗನ್ನಾಥ್ ಆರ್ಥಿಕವಾಗಿಯೂ ದೊಡ್ಡ ನಷ್ಟ ಕಂಡರು. ಸದ್ಯ ಅವರ ಮುಂದಿನ ಸಿನಿಮಾ ಬಗ್ಗೆ ಒಂದು ಬಿಗ್ ಅಪ್‌ಡೇಟ್ ಸಿಕ್ಕಿದೆ. ಈ ಬಾರಿ ಅವರು ಬಾಲಿವುಡ್‌ನ ಸೂಪರ್ ಸ್ಟಾರ್ ನಟನ ಮೇಲೆ ಕಣ್ಣಿಟ್ಟಿದ್ದಾರಂತೆ! ಹೌದು, ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಪೂರಿ ಜಗನ್ನಾಥ್ ಕಥೆ ಹೇಳಿದ್ದಾರೆ ಎನ್ನಲಾಗಿದೆ.ಸಲ್ಮಾನ್‌ಗೆ ಪೂರಿ ಜಗನ್ನಾಥ್ ಕಥೆ ಹೇಳಿದ್ದು, ಅವರು ಕೂಡ ಪಾಸಿಟಿವ್ ಆಗಿ ರೆಸ್ಪಾನ್ಸ್ ಮಾಡಿದ್ದಾರೆ ಎನ್ನಲಾಗಿದೆ. ಆದರೆ ಈ ಬಗ್ಗೆ ಇನ್ನೂ ಕೂಡ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಅಂದಹಾಗೆ, ಪೂರಿ ಜಗನ್ನಾಥ್ ನಿರ್ದೇಶನದ ‘ಪೊಕಿರಿ’ ಸಿನಿಮಾವನ್ನು ಹಿಂದಿಯಲ್ಲಿ ‘ವಾಂಟೆಡ್’ ಹೆಸರಿನಲ್ಲಿ ಸಲ್ಮಾನ್ ಖಾನ್ ಅವರು ರಿಮೇಕ್ ಮಾಡಿದ್ದರು. ಆಗಿನಿಂದಲೂ ಸಲ್ಮಾನ್‌ ಖಾನ್ ಮತ್ತು ಪೂರಿ ಜಗನ್ನಾಥ್ ಕಾಂಬಿನೇಷನ್‌ನಲ್ಲಿ ಒಂದು ಸಿನಿಮಾ ಬರಲಿದ ಎಂಬ ಮಾತು ಕೇಳಿಬರುತ್ತಲೇ ಇತ್ತು. ಆದರೆ ಅದು ಇದುವರೆಗೂ ಸಾಧ್ಯವಾಗಿರಲಿಲ್ಲ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/de…

Please follow and like us:

Leave a Reply

Your email address will not be published. Required fields are marked *

Next Post

ಬೆಳೆ ಪರಿಹಾರದಲ್ಲಿ ತಾರತಮ್ಯ ಮಾಜಿ ಶಾಸಕ ಕೋನರಡ್ಡಿ ಕಿಡಿ.

Wed Dec 28 , 2022
ಧಾರವಾಡ ಜಿಲ್ಲೆಯ ಅಣ್ಣಿಗೇರಿ, ನವಲಗುಂದ, ಹುಬ್ಬಳ್ಳಿ ಕ್ಷೇತ್ರದ ಹಳ್ಳಿ ಹಳ್ಳಿಯಲ್ಲೂ ಬೆಳೆ ಪರಿಹಾರ, ಬೆಳೆ ವಿಮೆ, ಮನೆ ಪರಿಹಾರ ಬಂದಿಲ್ಲ ಎಂಬ ಮಾತು ಸಂತ್ರಸ್ತರಿಂದ ಕೇಳಿ ಬರುತ್ತಿದೆ ಎಂದು ಮಾಜಿ ಶಾಸಕ ಎನ್ ಹೆಚ್ ಕೋನರಡ್ಡಿ ಆಕ್ರೋಶ ಹೊರ ಹಾಕಿದರು. ನವಲಗುಂದ ಪಟ್ಟಣದ ಕೋನರಡ್ಡಿ ಜನ ಸಂಪರ್ಕ ಕಾರ್ಯಾಲಯದಲ್ಲಿ ಮಾತನಾಡಿದ ಅವರು, ರೈತರಿಗೆ ಹಾಗೂ ಮನೆ ಕಳೆದುಕೊಂಡವರಿಗೆ ಹಾಗೂ ವಿಮಾ ಕಂಪನಿಯಿಂದ ಪರಿಹಾರ ಕೊಡಿಸುವಂತಹ ಕೆಲಸವನ್ನು ಸರ್ಕಾರ ಮಾಡಬೇಕಿದೆ. ಒಂದು […]

Advertisement

Wordpress Social Share Plugin powered by Ultimatelysocial